ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾಗೆ ಸೂಪರ್‌ ಗೆಲುವು


Team Udayavani, May 23, 2022, 10:39 PM IST

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ಪುಣೆ: ವನಿತಾ ಚಾಲೆಂಜರ್‌ ಟಿ20 ಸರಣಿಯ ಮೊದಲ ಮುಖಾಮುಖಿಯಲ್ಲಿ ಟ್ರೈಬ್ಲೇಜರ್ ವಿರುದ್ಧ ಸೂಪರ್‌ ನೋವಾ ಸೂಪರ್‌ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಸೂಪರ್‌ ನೋವಾ 163 ರನ್‌ ಪೇರಿಸುವಲ್ಲಿ ಯಶಸ್ವಿಯಾಗಿತ್ತು. ಆಬಳಿಕ ಸೂಪರ್‌ ನೋವಾ ತಂಡದ ನಿಖರ ದಾಳಿಗೆ ಕುಸಿದ ಟ್ರೈಬ್ಲೇಜರ್ ತಂಡವು 9 ವಿಕೆಟಿಗೆ 114 ರನ್‌ ಗಳಿಸಲಷ್ಟೇ ಶಕ್ತವಾಗಿ 49 ರನ್ನುಗಳಿಂದ ಸೋಲನ್ನು ಕಂಡಿತು.

ಟ್ರೈಬ್ಲೇಜರ್ ತಂಡದ ಆರಂಭ ಉತ್ತಮವಾಗಿತ್ತು. ನಾಯಕಿ ಸ್ಮತಿ ಮಂಧನಾ ಎರಡನೆಯವರಾಗಿ ಔಟ್‌ ಆದಾಗ ತಂಡ 7.2 ಓವರ್‌ಗಳಲ್ಲಿ ಎರಡು ವಿಕೆಟಿಗೆ 63 ರನ್‌ ಗಳಿಸಿತ್ತು. ಮಂಧನಾ 23 ಎಸೆತ ಎದುರಿಸಿ 34 ರನ್‌ ಗಳಿಸಿದರು. ಇದು ತಂಡದ ಆಟಗಾರ್ತಿಯೊಬ್ಬರ ಗರಿಷ್ಠ ಮೊತ್ತವೂ ಆಗಿದೆ. ಆಬಳಿಕ ತಂಡವು ನಾಟಕೀಯ ಕುಸಿತ ಕಂಡಿತು. ಮುಂದಿನ 10 ರನ್‌ ಗಳಿಸುವಷ್ಟರಲ್ಲಿ ತಂಡವು ಮತ್ತೆ 5 ವಿಕೆಟ್‌ಗಳನ್ನು ಕಳೆದುಕೊಂಡು ಶೋಚನೀಯ ಸ್ಥಿತಿಗೆ ಬಿತ್ತು. ಅಂತಿಮವಾಗಿ 9 ವಿಕೆಟಿಗೆ 114 ರನ್‌ ಗಳಿಸಲಷ್ಟೇ ಶಕ್ತವಾಗಿ ಸೋಲನ್ನು ಒಪ್ಪಿಕೊಂಡಿತು.

ಪೂಜಾ ವಸ್ತ್ರಾಕರ್‌ ತನ್ನ 4 ಓವರ್‌ಗಳ ದಾಳಿಯಲ್ಲಿ ಕೇವಲ 12 ರನ್‌ ನೀಡಿ ನಾಲ್ಕು ವಿಕೆಟ್‌ ಕಿತ್ತು ಗೆಲುವಿನ ರೂವಾರಿಯಾಗಿ ಕಾಣಿಸಿಕೊಂಡರು.

ಈ ಮೊದಲು ಟಾಸ್‌ ಗೆದ್ದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಬ್ಯಾಟಿಂಗ್‌ ಆಯ್ದು ಕೊಂಡರು. ಡಿಯಾಂಡ್ರಾ ಟಾಟಿನ್‌ (32) ಮತ್ತು ಪ್ರಿಯಾ ಪುನಿಯಾ (22) ಮೊದಲ ವಿಕೆಟಿಗೆ 5 ಓವರ್‌ಗಳಲ್ಲಿ 50 ಪೇರಿಸಿದರು. ವನ್‌ಡೌನ್‌ನಲ್ಲಿ ಬಂದ ಹಲೀìನ್‌ ದೇವಲ್‌ 35 ರನ್‌ ಬಾರಿಸಿದರು. 37 ರನ್‌ ಹೊಡೆದ ನಾಯಕಿ ಕೌರ್‌ ಅವರದು ಹೆಚ್ಚಿನ ಗಳಿಕೆ (29 ಎಸೆತ, 4 ಬೌಂಡರಿ).

ದೇವಲ್‌ 19 ಎಸೆತಗಳಲ್ಲಿ ಸೊಗಸಾದ ಇನ್ನಿಂಗ್ಸ್‌ ಕಟ್ಟಿದರು. ಇದರಲ್ಲಿ 5 ಬೌಂಡರಿ ಒಳಗೊಂಡಿತ್ತು. ಇನ್ನಿಂಗ್ಸಿನ 2 ಸಿಕ್ಸರ್‌ಗಳು ಪ್ರಿಯಾ ಮತ್ತು ಡಿಯಾಂಡ್ರಾ ಅವರಿಂದ ಸಿಡಿಯಲ್ಪಟ್ಟವು. ಟ್ರೈಬ್ಲೇಜರ್‌ ಪರ ಹ್ಯಾಲಿ ಮ್ಯಾಥ್ಯೂಸ್‌ 29ಕ್ಕೆ 3, ಸಲ್ಮಾ ಖಾತುನ್‌ 30ಕ್ಕೆ 2 ವಿಕೆಟ್‌ ಕೆಡವಿದರು.

ಸಂಕ್ಷಿಪ್ತ ಸ್ಕೋರು: ಸೂಪರ್‌ ನೋವಾ 163 (ಹರ್ಮನ್‌ಪ್ರೀತ್‌ ಕೌರ್‌ 37, ಹಲೀìನ್‌ ದೇವಲ್‌ 35, ಡಿಯಾಂಡ್ರಾ ಟಾಟಿನ್‌ 32, ಹೇಲೆ ಮ್ಯಾಥ್ಯೂಸ್‌ 29ಕ್ಕೆ 3, ಸಲ್ಮಾ ಖಾತುನ್‌ 30ಕ್ಕೆ 2); ಟ್ರೈಬ್ಲೇಜರ್ 9 ವಿಕೆಟಿಗೆ 114 (ಸ್ಮತಿ ಮಂಧನಾ 34, ಜೆಮಿಮಾ ರಾಡ್ರಿಗಸ್‌ 24, ಪೂಜಾ ವಸ್ತ್ರಾಕರ್‌ 12ಕ್ಕೆ 4, ಸೊಫಿ ಎಕ್ಲೆಸ್ಟೋನ್‌ 19ಕ್ಕೆ 2, ಅಲನಾ ಕಿಂಗ್‌ 30ಕ್ಕೆ 2).

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.