ವನಿತಾ ಟಿ20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾವನ್ನು ಕೆಡವಿದ ಭಾರತ

ಮೊದಲ ಪಂದ್ಯದಲ್ಲೇ ಅಮನ್‌ಜೋತ್‌ ಮಿಂಚು; ದೀಪ್ತಿ ಆಲ್‌ರೌಂಡ್‌ ಶೋ

Team Udayavani, Jan 20, 2023, 11:34 PM IST

ವನಿತಾ ಟಿ20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾವನ್ನು ಕೆಡವಿದ ಭಾರತ

ಈಸ್ಟ್‌ ಲಂಡನ್‌ (ದಕ್ಷಿಣ ಆಫ್ರಿಕಾ): ವನಿತಾ ಟಿ20 ತ್ರಿಕೋನ ಕ್ರಿಕೆಟ್‌ ಸರಣಿಯಲ್ಲಿ ಭಾರತ ಶುಭಾರಂಭ ಮಾಡಿದೆ. ಆತಿಥೇಯ ದಕ್ಷಿಣ ಆಫ್ರಿಕಾಕ್ಕೆ 27 ರನ್ನುಗಳ ಆಘಾತವಿಕ್ಕಿದೆ.

ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ 12ನೇ ಓವರ್‌ ವೇಳೆ 69ಕ್ಕೆ 5 ವಿಕೆಟ್‌ ಕಳೆದುಕೊಂಡು ಶೋಚನೀಯ ಸ್ಥಿತಿ ಯಲ್ಲಿತ್ತು. ಆದರೆ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯ ಆಡಲಿಳಿದ ಅಮನ್‌ಜೋತ್‌ ಕೌರ್‌ ಮತ್ತು ದೀಪ್ತಿ ಶರ್ಮ ನೀಡಿದ ತಿರುಗೇಟಿನಿಂದ 6 ವಿಕೆಟಿಗೆ 147 ರನ್‌ ಗಳಿಸಲು ಯಶಸ್ವಿ ಯಾಯಿತು. ಜವಾಬಿತ್ತ ದಕ್ಷಿಣ ಆಫ್ರಿಕಾ 9 ವಿಕೆಟಿಗೆ 120 ರನ್‌ ಮಾಡಿ ಶರಣಾಯಿತು.

ಭಾರತದ ಅಗ್ರ ಕ್ರಮಾಂಕದಲ್ಲಿ ಮಿಂಚಿದ್ದು ಓಪನರ್‌ ಯಾಸ್ತಿಕಾ ಭಾಟಿಯಾ ಮಾತ್ರ. ಅವರು 34 ಎಸೆತಗಳಿಂದ 35 ರನ್‌ ಹೊಡೆದರು (3 ಬೌಂಡರಿ, 1 ಸಿಕ್ಸರ್‌). ಶಫಾಲಿ ವರ್ಮ ಅಂಡರ್‌-19 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಆಡುತ್ತಿರುವು ದರಿಂದ ಯಾಸ್ತಿಕಾ ಇನ್ನಿಂಗ್ಸ್‌ ಆರಂಭಿ ಸಲಿಳಿದರು. ಉಸ್ತುವಾರಿ ನಾಯಕಿ ಸ್ಮತಿ ಮಂಧನಾ (7), ಹಲೀìನ್‌ ದೇವಲ್‌ (8), ಜೆಮಿಮಾ ರೋಡ್ರಿಗಸ್‌ (ಗೋಲ್ಡನ್‌ ಡಕ್‌), ದೇವಿಕಾ ವೈದ್ಯ (9) ಕ್ಲಿಕ್‌ ಆಗಲಿಲ್ಲ. ಅನಾರೋಗ್ಯದಿಂದಾಗಿ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಈ ಪಂದ್ಯದಿಂದ ಹೊರಗುಳಿಯ ಬೇಕಾಯಿತು.

ದೀಪ್ತಿ ಶರ್ಮ-ಅಮನ್‌ಜೋತ್‌ ಸೇರಿಕೊಂಡು ಭಾರತದ ರಕ್ಷಣೆಗೆ ನಿಂತರು. 7ನೇ ವಿಕೆಟಿಗೆ 50 ಎಸೆತ ಗಳಿಂದ 76 ರನ್‌ ಪೇರಿಸುವ ಮೂಲಕ ತಂಡವನ್ನು ಹೋರಾಟಕ್ಕೆ ಅಣಿಗೊಳಿಸಿದರು. ಅಮನ್‌ಜೋತ್‌ 30 ಎಸೆತಗಳಿಂದ ಅಜೇಯ 41 ರನ್‌ ಸಿಡಿಸಿದರು (7 ಬೌಂಡರಿ). ದೀಪ್ತಿ ಕೊಡುಗೆ 23 ಎಸೆತಗಳಿಂದ 33 ರನ್‌ (1 ಬೌಂಡರಿ, 1 ಸಿಕ್ಸರ್‌). ಮೊಹಾಲಿಯ ಬಡಗಿಯೊಬ್ಬರ ಮಗಳಾಗಿರುವ ಅಮನ್‌ಜೋತ್‌ ತಮ್ಮ ಅಮೋಘ ಬ್ಯಾಟಿಂಗ್‌ ಸಾಹಸಕ್ಕಾಗಿ ಪದಾರ್ಪಣ ಪಂದ್ಯದಲ್ಲೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.

ಹಿರಿಯ ಆಫ್ಸ್ಪಿನ್ನರ್‌ ದೀಪ್ತಿ ಶರ್ಮ ಬೌಲಿಂಗ್‌ನಲ್ಲೂ ಮಿಂಚಿ 3 ವಿಕೆಟ್‌ ಕೆಡವಿದರು. ದೇವಿಕಾ ವೈದ್ಯ ಇಬ್ಬರನ್ನು ಪೆವಿಲಿಯನ್ನಿಗೆ ಅಟ್ಟಿದರು. ರಾಜೇಶ್ವರಿ ಗಾಯಕ್ವಾಡ್‌, ಸ್ನೇಹ್‌ ರಾಣಾ, ರಾಧಾ ಯಾದವ್‌ ಒಂದೊಂದು ವಿಕೆಟ್‌ ಉರುಳಿಸಿದರು.

ಭಾರತವಿನ್ನು ಸೋಮವಾರ ವೆಸ್ಟ್‌ ಇಂಡೀಸ್‌ ವಿರುದ್ಧ ಆಡಲಿದ್ದು, ರಾತ್ರಿ 10.30ಕ್ಕೆ ಪಂದ್ಯ ಆರಂಭವಾಗಲಿದೆ.

ಸಂಕ್ಷಿಪ್ತ ಸ್ಕೋರ್‌: ಭಾರತ-6 ವಿಕೆಟಿಗೆ 147 (ಅಮನ್‌ಜೋತ್‌ ಔಟಾಗದೆ 41, ಯಾಸ್ತಿಕಾ 35, ದೀಪ್ತಿ 33, ಎಂಲಬಾ 15ಕ್ಕೆ 2). ದಕ್ಷಿಣ ಆಫ್ರಿಕಾ-9 ವಿಕೆಟಿಗೆ 120 (ಲುಸ್‌ 29, ಟ್ರಯಾನ್‌ 26, ಕಾಪ್‌ 22, ದೀಪ್ತಿ 30ಕ್ಕೆ 3, ದೇವಿಕಾ 19ಕ್ಕೆ 2).

ಪಂದ್ಯಶ್ರೇಷ್ಠ: ಅಮನ್‌ಜೋತ್‌ ಕೌರ್‌.

ಟಾಪ್ ನ್ಯೂಸ್

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

chChamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

DHONI JADEJA IPL FINAL

IPL: ಧೋನಿಯ ಬಗ್ಗೆ ಜಡೇಜಾ ಟ್ವೀಟ್‌… ʻಮಾಹಿ ಭಾಯಿ…ನಿಮಗಾಗಿ..ʼ- ಏನಿದು?

ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

New Delhi: ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DHONI JADEJA IPL FINAL

IPL: ಧೋನಿಯ ಬಗ್ಗೆ ಜಡೇಜಾ ಟ್ವೀಟ್‌… ʻಮಾಹಿ ಭಾಯಿ…ನಿಮಗಾಗಿ..ʼ- ಏನಿದು?

List Of All Award Winners From IPL 2023 Season

ಮುಗಿಯಿತು ಮನದಣಿಯ ತಣಿಸಿದ IPL 2023: ಯಾರಿಗೆ ಯಾವ ಪ್ರಶಸ್ತಿ ಸಿಕ್ಕಿತು?ಇಲ್ಲಿದೆ Full list

ನಿವೃತ್ತಿ ಘೋಷಣೆ ಮಾಡುವುದು ಸುಲಭ ಆದರೆ…: ಕ್ರಿಕೆಟ್ ವಿಶ್ವದ ಕುತೂಹಲ ತಣಿಸಿದ Dhoni ಉತ್ತರ

ನಿವೃತ್ತಿ ಘೋಷಣೆ ಮಾಡುವುದು ಸುಲಭ ಆದರೆ…: ಕ್ರಿಕೆಟ್ ವಿಶ್ವದ ಕುತೂಹಲ ತಣಿಸಿದ Dhoni ಉತ್ತರ

CSK FANS TRAIN

CSK: ರೈಲು ನಿಲ್ದಾಣದಲ್ಲಿ ರಾತ್ರಿ ಕಳೆದ ಚೆನ್ನೈ ಅಭಿಮಾನಿಗಳು

DHONI

ಧೋನಿ: 11 IPL ಫೈನಲ್‌ ದಾಖಲೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

asಅರಂಬೂರು: ಲಾರಿಯಲ್ಲಿ ಬೆಂಕಿ ಅವಘಡ

ಅರಂಬೂರು: ಗುಜರಿ ತುಂಬಿದ್ದ ಲಾರಿಯಲ್ಲಿ ಬೆಂಕಿ ಅವಘಡ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

chChamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ