ಮಿಥಾಲಿ ಮಿಂಚು; ಭಾರತಕ್ಕೆ ಶರಣಾದ ಪಾಕ್‌


Team Udayavani, Nov 13, 2018, 6:00 AM IST

raj.jpg

ಪ್ರೊವಿಡೆನ್ಸ್‌ (ಗಯಾನಾ): ಅನುಭವಿ ಆಟಗಾರ್ತಿ ಮಿಥಾಲಿ ರಾಜ್‌ ಅವರ ಅರ್ಧ ಶತಕದ ಸಾಹಸದಿಂದ ರವಿವಾರ ರಾತ್ರಿಯ ವನಿತಾ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನವನ್ನು 7 ವಿಕೆಟ್‌ಗಳಿಂದ ಮಣಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಪಾಕಿಸ್ಥಾನ, ಭಾರತದ ಕಳಪೆ ಕ್ಷೇತ್ರರಕ್ಷಣೆಯ ಲಾಭವನ್ನೆತ್ತಿ 7 ವಿಕೆಟಿಗೆ 133 ರನ್‌ ಗಳಿಸಿತು. ಭಾರತ 19 ಓವರ್‌ಗಳಲ್ಲಿ ಮೂರೇ ವಿಕೆಟಿಗೆ 137 ರನ್‌ ಬಾರಿಸಿ ಸತತ 2ನೇ ಜಯವನ್ನು ಒಲಿಸಿಕೊಂಡಿತು. ಇದಕ್ಕೂ ಮುನ್ನ ಹರ್ಮನ್‌ಪ್ರೀತ್‌ ಪಡೆ ನ್ಯೂಜಿಲ್ಯಾಂಡನ್ನು ಕೆಡವಿತ್ತು. ಇನ್ನೊಂದೆಡೆ ಪಾಕಿಸ್ಥಾನ ಸತತ 2 ಪಂದ್ಯಗಳಲ್ಲೂ ಸೋಲನುಭವಿಸಿದ್ದು, ನಾಕೌಟ್‌ ಹಾದಿ ಬಹುತೇಕ ಮುಚ್ಚಿದೆ. ಮೊದಲ ಮುಖಾಮುಖೀಯಲ್ಲಿ ಅದು ಆಸ್ಟ್ರೇಲಿಯಕ್ಕೆ ಶರಣಾಗಿತ್ತು.

ಸತತ 2 ಜಯದಿಂದಾಗಿ ಆಸ್ಟ್ರೇಲಿಯ ಮತ್ತು ಭಾರತ ತಂಡಗಳು “ಬಿ’ ವಿಭಾಗದಲ್ಲಿ ಮೊದಲೆರಡು ಸ್ಥಾನದಲ್ಲಿವೆ. ಆಸೀಸ್‌ ರನ್‌ರೇಟ್‌ನಲ್ಲಿ ಭಾರತಕ್ಕಿಂತ ಮುಂದಿದೆ. ಭಾರತ 1.162, ಆಸ್ಟ್ರೇಲಿಯ 3.73 ರನ್‌ರೇಟ್‌ ಹೊಂದಿದೆ.

ಭಾರತಕ್ಕೆ 10 ಪೆನಾಲ್ಟಿ ರನ್‌!
ಚೇಸಿಂಗ್‌ ಆರಂಭಿಸುವ ಮೊದಲೇ ಭಾರತದ ಖಾತೆಗೆ 10 ಪೆನಾಲ್ಟಿ ರನ್‌ ಸೇರ್ಪಡೆಯಾದದ್ದು ಈ ಪಂದ್ಯದ ವಿಶೇಷ. ಬ್ಯಾಟಿಂಗ್‌ ವೇಳೆ ಪಾಕಿಸ್ಥಾನಿ ಆಟಗಾರ್ತಿಯರು 2 ಸಲ ಪಿಚ್‌ನ ಅಪಾಯಕಾರಿ ಜಾಗದಲ್ಲಿ ಓಡಿದ್ದೇ ಇದಕ್ಕೆ ಕಾರಣ. ತಲಾ 5 ರನ್ನಿನಂತೆ 10 ರನ್ನನ್ನು ದಂಡದ ರೂಪದಲ್ಲಿ ತೆತ್ತ ಪಾಕ್‌ ಆಟಗಾರ್ತಿಯರು ಕೊನೆಗೆ ಸೋಲಿನ ದಂಡವನ್ನು ತೆರಬೇಕಾಯಿತು. ಪಾಕ್‌ ಬ್ಯಾಟಿಂಗ್‌ ವೇಳೆ ಭಾರತ 5 ಕ್ಯಾಚ್‌ಗಳನ್ನು ನೆಲಕ್ಕೆ ಚೆಲ್ಲಿ ತನ್ನ ಕಳಪೆ ಕ್ಷೇತ್ರರಕ್ಷಣೆ ಪ್ರದರ್ಶಿಸಿತ್ತು.

ಮಿಥಾಲಿ ಅರ್ಧ ಶತಕ
ನ್ಯೂಜಿಲ್ಯಾಂಡ್‌ ಎದುರಿನ ಮೊದಲ ಪಂದ್ಯದಲ್ಲಿ ಬ್ಯಾಟಿಂಗಿಗೆ ಇಳಿಯದಿದ್ದ ಮಿಥಾಲಿ ರಾಜ್‌ ಪಾಕ್‌ ಎದುರು ಇನ್ನಿಂಗ್ಸ್‌ ಆರಂಭಿಸಿ 47 ಎಸೆತಗಳಿಂದ 56 ರನ್‌ ಸಿಡಿಸಿದರು. ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಸೇರಿತ್ತು. ಸ್ಮತಿ ಮಂಧನಾ ಕೂಡ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿ ಮೊದಲ ವಿಕೆಟಿಗೆ 9.3 ಓವರ್‌ಗಳಿಂದ 73 ರನ್‌ ಗಳಿಸುವಲ್ಲಿ ನೆರವಾದರು. ಮಂಧನಾ ಗಳಿಕೆ 26 ರನ್‌ (28 ಎಸೆತ, 4 ಬೌಂಡರಿ). 18ರ ಹರೆಯದ ಜೆಮಿಮಾ ರೋಡ್ರಿಗಸ್‌ 21 ಎಸೆತಗಳಿಂದ 16 ರನ್‌ ಮಾಡಿದರು (1 ಬೌಂಡರಿ).
ಭಾರತದ ಗೆಲುವಿನ ವೇಳೆ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ 14 ರನ್‌, ವೇದಾ ಕೃಷ್ಣಮೂರ್ತಿ 8 ರನ್‌ ಗಳಿಸಿ ಅಜೇಯರಾಗಿದ್ದರು.

ಭಾರತ ತನ್ನ ಮುಂದಿನ ಪಂದ್ಯವನ್ನು ಗುರುವಾರ ಅಯರ್‌ಲ್ಯಾಂಡ್‌ ವಿರುದ್ಧ ಆಡಲಿದೆ.

ಸಂಕ್ಷಿಪ್ತ ಸ್ಕೋರ್‌: ಪಾಕಿಸ್ಥಾನ-7 ವಿಕೆಟಿಗೆ 133 (ಬಿಸ್ಮಾ ಮರೂಫ್ 53, ನಿದಾ ದರ್‌ 52, ಪೂನಂ ಯಾದವ್‌ 22ಕ್ಕೆ 2, ಡಿ. ಹೇಮಲತಾ 34ಕ್ಕೆ 2). ಭಾರತ-19 ಓವರ್‌ಗಳಲ್ಲಿ 3 ವಿಕೆಟಿಗೆ 137 (ಮಿಥಾಲಿ ರಾಜ್‌ 56, ಸ್ಮತಿ ಮಂಧನಾ 26, ಜೆಮಿಮಾ ರೋಡ್ರಿಗಸ್‌ 16, ನಿದಾ ದರ್‌ 17ಕ್ಕೆ 1, ದಿಯಾನಾ ಬೇಗ್‌ 19ಕ್ಕೆ 1). 
ಪಂದ್ಯಶ್ರೇಷ್ಠ: ಮಿಥಾಲಿ ರಾಜ್‌.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.