ವನಿತಾ ಟಿ20 ವಿಶ್ವಕಪ್‌: ಕೌರ್‌ ನಾಯಕಿ; ರಿಚಾ ಘೋಷ್‌ ಹೊಸಮುಖ


Team Udayavani, Jan 13, 2020, 5:30 AM IST

RICHA-GHOSH

ಮುಂಬಯಿ: ಫೆಬ್ರವರಿ 21ರಿಂದ ಆಸ್ಟ್ರೇಲಿಯ ಆತಿಥ್ಯದಲ್ಲಿ ಆರಂಭವಾಗಲಿರುವ ವನಿತಾ ಟಿ20 ವಿಶ್ವಕಪ್‌ ಪಂದ್ಯಾವಳಿಗೆ ರವಿವಾರ ಭಾರತ ತಂಡವನ್ನು ಪ್ರಕಟಿಸಲಾಯಿತು. 15 ಸದಸ್ಯರ ಪಡೆಯನ್ನು ಹರ್ಮನ್‌ಪ್ರೀತ್‌ ಕೌರ್‌ ಮುನ್ನಡೆಸಲಿದ್ದಾರೆ. ಬಂಗಾಲದ ಬೀಸು ಹೊಡೆತಗಳ ಆಟಗಾರ್ತಿ ರಿಚಾ ಘೋಷ್‌ ಈ ತಂಡದ ಏಕೈಕ ಹೊಸಮುಖವಾಗಿದ್ದಾರೆ.

ತಂಡದಲ್ಲಿ ಕರ್ನಾಟಕದ ಇಬ್ಬರು ಕ್ರಿಕೆಟಿಗರಿದ್ದಾರೆ. ಇವರೆಂದರೆ, ಮಧ್ಯಮ ಕ್ರಮಾಂಕದ ಆಟಗಾರ್ತಿ, ಚಿಕ್ಕಮಗಳೂರಿನ ವೇದಾ ಕೃಷ್ಣಮೂರ್ತಿ ಮತ್ತು ವಿಜಯಪುರದ ಎಡಗೈ ಸ್ಪಿನ್ನರ್‌ ರಾಜೇಶ್ವರಿ ಗಾಯಕ್ವಾಡ್‌.

ವನಿತಾ ಕ್ರಿಕೆಟಿನ ನವತಾರೆ, ಹರ್ಯಾಣದ 15ರ ಹರೆಯದ ವಿದ್ಯಾರ್ಥಿನಿ ಶಫಾಲಿ ವರ್ಮ ಈ ತಂಡ ದಲ್ಲಿ ಸ್ಥಾನ ಸಂಪಾದಿಸಿದ್ದಾರೆ. ಅವರು ವಿಶ್ವ ಮಟ್ಟದ ಪಂದ್ಯಾವಳಿಯಲ್ಲಿ ಭಾರತವನ್ನು ಮೊದಲ ಸಲ ಪ್ರತಿನಿಧಿಸುತ್ತಿದ್ದಾರೆ.

ರಿಚಾ ಘೋಷ್‌ ಕಳೆದ ಚಾಲೆಂಜರ್‌ ಟ್ರೋಫಿ ಸರಣಿಯಲ್ಲಿ ಬಿರುಸಿನ ಬ್ಯಾಟಿಂಗ್‌ ಮೂಲಕ ಗಮನ ಸೆಳೆದಿದ್ದರು.

ತ್ರಿಕೋನ ಸರಣಿಗೆ ನುಜತ್‌
ಇದೇ ವೇಳೆ ಟಿ20 ವಿಶ್ವಕಪ್‌ಗ್ೂ ಮೊದಲು ನಡೆಯುವ ಟಿ20 ತ್ರಿಕೋನ ಸರಣಿಗೂ ಭಾರತ ತಂಡವನ್ನು ಪ್ರಕಟಿಸಲಾಯಿತು. ವಿಶ್ವಕಪ್‌ ತಂಡಕ್ಕೆ ಹೆಚ್ಚುವರಿಯಾಗಿ ನುಜತ್‌ ಪರ್ವೀನ್‌ ಅವರನ್ನು ಸೇರಿಸಿಕೊಳ್ಳಲಾಗಿದೆ. ವಿಕೆಟ್‌ ಕೀಪರ್‌ ಆಗಿರುವ ಅವರು ಮಧ್ಯಮ ಕ್ರಮಾಂಕದ ಬಲಗೈ ಆಟಗಾರ್ತಿಯಾಗಿದ್ದಾರೆ.

ತ್ರಿಕೋನ ಸರಣಿ ಜ. 31ರಿಂದ ಆರಂಭವಾಗಲಿದೆ. ಇದರಲ್ಲಿ ಪಾಲ್ಗೊಳ್ಳಲಿರುವ ತಂಡಗಳೆಂದರೆ ಭಾರತ, ಇಂಗ್ಲೆಂಡ್‌ ಮತ್ತು ಆತಿಥೇಯ ಆಸ್ಟ್ರೇಲಿಯ.

ಪ್ರತಿಭೆಗಳ ಮಹಾಪೂರ
“ಕಳೆದ ಒಂದು ವರ್ಷದಿಂದ ವನಿತಾ ಕ್ರಿಕೆಟ್‌ನಲ್ಲಿ ಪ್ರತಿಭೆಗಳ ಮಹಾಪೂರವೇ ಹರಿದು ಬರುತ್ತಿದೆ. ಈ ಅವಧಿ ಯಲ್ಲಿ ಐದಾರು ಆಟಗಾರ್ತಿಯರು ಭಾರತವನ್ನು ಮೊದಲ ಸಲ ಪ್ರತಿನಿಧಿಸುವ ಅವಕಾಶ ಪಡೆದರು. ಈ ಬಾರಿ ರಿಚಾ ಘೋಷ್‌ ಅವರಿಗೆ ಬಾಗಿಲು ತೆರೆದಿದೆ’ ಎಂಬುದಾಗಿ ಆಯ್ಕೆ ಸಮಿತಿ ಅಧ್ಯಕ್ಷೆ ಹೇಮಲತಾ ಕಲಾ ಹೇಳಿದರು.

ವನಿತಾ ಟಿ20 ವಿಶ್ವಕಪ್‌ ತಂಡ
ಹರ್ಮನ್‌ಪ್ರೀತ್‌ ಕೌರ್‌ (ನಾಯಕಿ), ಸ್ಮತಿ ಮಂಧನಾ, ಶಫಾಲಿ ವರ್ಮ, ಜೆಮಿಮಾ ರೋಡ್ರಿಗಸ್‌, ಹಲೀìನ್‌ ದೇವಲ್‌, ದೀಪ್ತಿ ಶರ್ಮ, ವೇದಾ ಕೃಷ್ಣಮೂರ್ತಿ, ರಿಚಾ ಘೋಷ್‌, ತಾನಿಯಾ ಭಾಟಿಯ, ಪೂನಂ ಯಾದವ್‌, ರಾಧಾ ಯಾದವ್‌, ರಾಜೇಶ್ವರಿ ಗಾಯಕ್ವಾಡ್‌, ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್‌, ಅರುಂಧತಿ ರೆಡ್ಡಿ.

ತ್ರಿಕೋನ ಸರಣಿ ತಂಡ
ಹರ್ಮನ್‌ಪ್ರೀತ್‌ ಕೌರ್‌ (ನಾಯಕಿ), ಸ್ಮತಿ ಮಂಧನಾ, ಶಫಾಲಿ ವರ್ಮ, ಜೆಮಿಮಾ ರೋಡ್ರಿಗಸ್‌, ಹಲೀìನ್‌ ದೇವಲ್‌, ದೀಪ್ತಿ ಶರ್ಮ, ವೇದಾ ಕೃಷ್ಣಮೂರ್ತಿ, ರಿಚಾ ಘೋಷ್‌, ತಾನಿಯಾ ಭಾಟಿಯ, ಪೂನಂ ಯಾದವ್‌, ರಾಧಾ ಯಾದವ್‌, ರಾಜೇಶ್ವರಿ ಗಾಯಕ್ವಾಡ್‌, ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್‌, ಅರುಂಧತಿ ರೆಡ್ಡಿ, ನುಜತ್‌ ಪರ್ವೀನ್‌.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.