ಅಯರ್‌ಲ್ಯಾಂಡ್‌ ವಿರುದ್ಧ ಭಾರತಕ್ಕೆ  ಸೇಡಿನ ತವಕ


Team Udayavani, Aug 2, 2018, 9:34 AM IST

hockey.jpg

* ಇಟಲಿ ವಿರುದ್ಧ  3-0 ಜಯಭೇರಿ * ಇಂದು ಕ್ವಾರ್ಟರ್‌ ಫೈನಲ್‌ * ಗೆದ್ದರೆ 44 ವರ್ಷಗಳ ಬಳಿಕ ಸೆಮಿ ಟಿಕೆಟ್‌

ಲಂಡನ್‌: ವಿಶ್ವಕಪ್‌ ಹಾಕಿ ಪಂದ್ಯಾವಳಿಯಲ್ಲಿ ಹಳಿ ಏರಿದ ಭಾರತದ ವನಿತೆಯರೀಗ ಕ್ವಾರ್ಟರ್‌ ಫೈನಲ್‌ ಹಣಾಹಣಿಗೆ ಸಜ್ಜಾಗಿದ್ದಾರೆ. ಗುರುವಾರ ನಡೆಯುವ ಮುಖಾ ಮುಖೀಯಲ್ಲಿ ರಾಣಿ ರಾಮ್‌ಪಾಲ್‌ ಪಡೆ ಅಯರ್‌ಲ್ಯಾಂಡ್‌ ವಿರುದ್ಧ ಸೆಣಸಲಿದೆ. ಭಾರತದ ಪಾಲಿಗೆ ಇದೊಂದು ಸೇಡಿನ ಪಂದ್ಯ. “ಬಿ’ ಗುಂಪಿನ ತಂಡಗಳಾದ ಭಾರತ-ಅಯರ್‌ಲ್ಯಾಂಡ್‌ ಈಗಾಗಲೇ ಲೀಗ್‌ ಹಂತ ದಲ್ಲಿ ಎದುರಾಗಿದ್ದು, ಇದರಲ್ಲಿ ಭಾರತ 1-0 ಗೋಲಿನಿಂದ ಶರಣಾಗಿತ್ತು. ಇದಕ್ಕೀಗ ಸೇಡು ತೀರಿಸಿ ಸೆಮಿಫೈನಲ್‌ ಪ್ರವೇಶಿಸುವ ನಿಟ್ಟಿನಲ್ಲಿ ರಾಣಿ ಬಳಗ ಕಾರ್ಯತಂತ್ರ ರೂಪಿಸಬೇಕಿದೆ. ಗೆದ್ದರೆ ಭಾರತದ ವನಿತೆಯರು 44 ವರ್ಷಗಳ ಬಳಿಕ ವಿಶ್ವಕಪ್‌ ಸೆಮಿಫೈನಲ್‌ ಪ್ರವೇಶಿಸಲಿದ್ದಾರೆ. 

1974ರಲ್ಲಿ ನಡೆದ ಫ್ರಾನ್ಸ್‌ ಪಂದ್ಯಾವಳಿಯಲ್ಲಿ ಭಾರತ ಕೊನೆಯ ಹಾಗೂ ಏಕೈಕ ಸಲ ವಿಶ್ವಕಪ್‌ ಸೆಮಿಫೈನಲ್‌ ಪ್ರವೇಶಿಸಿತ್ತು. ಅಂದು 4ನೇ ಸ್ಥಾನ ಸಂಪಾದಿಸಿದ್ದೇ ವಿಶ್ವಕಪ್‌ನಲ್ಲಿ ಈ ವರೆಗೆ ಭಾರತದ ಅತ್ಯುತ್ತಮ ಸಾಧನೆಯಾಗಿದೆ. ಕಳೆದ ಸಲ ಆರ್ಜೆಂಟೀನಾದಲ್ಲಿ ನಡೆದ ವಿಶ್ವಕಪ್‌ ಕೂಟದಲ್ಲಿ 8ನೇ ಸ್ಥಾನಕ್ಕೆ ಕುಸಿದು ತೀವ್ರ ನಿರಾಸೆ ಮೂಡಿಸಿತ್ತು.

ಇಟಲಿ ವಿರುದ್ಧ 3-0 ವಿಕ್ರಮ
ಲೀಗ್‌ ಹಂತದಲ್ಲಿ ಒಂದೂ ಗೆಲುವು ಕಾಣದೆ ತೃತೀಯ ಸ್ಥಾನಕ್ಕೆ ಕುಸಿದಿದ್ದ ಭಾರತ, “ಕ್ರಾಸ್‌-ಓವರ್‌’ ಪದ್ಧತಿಯ ನೆರವಿನಿಂದ ನಾಕೌಟ್‌ ಪ್ರವೇಶಿಸಿತ್ತು. ಇಲ್ಲಿ ಮಂಗಳವಾರ ರಾತ್ರಿ ಇಟಲಿಯನ್ನು 3-0 ಗೋಲುಗಳಿಂದ ಮಣಿಸಿತು. ಲಾಲ್ರೆಮಿÕಯಾಮಿ (20ನೇ ನಿಮಿಷ), ನೇಹಾ ಗೋಯಲ್‌ (45ನೇ ನಿಮಿಷ) ಹಾಗೂ ವಂದನಾ ಕಟಾರಿಯಾ (55ನೇ ನಿಮಿಷ) ಗೋಲು ಸಿಡಿಸಿ ಮೆರೆದಿದ್ದರು. ಇದು ಈ ಕೂಟದಲ್ಲಿ ಭಾರತ ಸಾಧಿಸಿದ ಮೊದಲ ಗೆಲುವಾಗಿತ್ತು. ಇದೇ ರಭಸವನ್ನು ಕಾಯ್ದುಕೊಂಡು ಅಯರ್‌ಲ್ಯಾಂಡ್‌ ವಿರುದ್ಧ ಸವಾರಿ ಮಾಡಬೇಕಿದೆ.
ಆದರೆ ಐರಿಷ್‌ ಪಡೆಯನ್ನು ಎದುರಿಸುವುದು ಸುಲಭದ ಸವಾ ಲೇನೂ ಅಲ್ಲ. ಇವರೆದುರು ಭಾರತ ಸತತ 2 ಸೋಲನುಭವಿಸಿ ಹಿನ್ನಡೆ ಅನುಭವಿಸಿದ್ದನ್ನು ಮರೆಯುವಂತಿಲ್ಲ. ಲೀಗ್‌ ಹಂತದ ಸೋಲಿಗೂ ಮುನ್ನ ಕಳೆದ ವರ್ಷ ಜೊಹಾನ್ಸ್‌ಬರ್ಗ್‌
ನಲ್ಲಿ ನಡೆದ ವರ್ಲ್ಡ್ ಲೀಗ್‌ ಸೆಮಿ ಫೈನಲ್‌ನಲ್ಲೂ ಅಯರ್‌ಲ್ಯಾಂಡ್‌ ಭಾರತವನ್ನು ಮಣಿಸಿತ್ತು (2-1). 
ಲೀಗ್‌ ಹಂತದಲ್ಲೂ ಅಯರ್‌ಲ್ಯಾಂಡ್‌ ಉತ್ತಮ ಪ್ರದರ್ಶನ ನೀಡಿದ್ದನ್ನು ಮರೆಯುವಂತಿಲ್ಲ. ಇಂಗ್ಲೆಂಡ್‌ ವಿರುದ್ಧ ಸೋತರೂ ಭಾರತ ಹಾಗೂ ಅಮೆರಿಕವನ್ನು ಕೆಡವಿ (3-1) ಗುಂಪಿನ ಅಗ್ರಸ್ಥಾನಿಯಾಗಿ ಕ್ವಾರ್ಟರ್‌ ಫೈನಲ್‌ಗೆ ನೇರ ಪ್ರವೇಶ ಪಡೆದಿತ್ತು.

ಪಯಣ ಇಲ್ಲಿಗೇ ಕೊನೆಯಾಗದು: ರಾಣಿ
ಅಮೋಘ ಜಯದೊಂದಿಗೆ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದರಿಂದ ಭಾರತ ತಂಡದ ಸ್ಫೂರ್ತಿ ಹಾಗೂ ಆತ್ಮವಿಶ್ವಾಸ ಸಹಜವಾಗಿಯೇ ಹೆಚ್ಚಿದೆ. ನಾಯಕಿ ರಾಣಿ ರಾಮ್‌ಪಾಲ್‌ ಕೂಡ ಇದನ್ನೇ ಹೇಳಿದ್ದಾರೆ. “ಆರಂಭದಲ್ಲಿ ನಾವು ಗೋಲಿನ ಬರಗಾಲದಲ್ಲಿದ್ದೆವು. ಇಟಲಿ ವಿರುದ್ಧ ಈ ಕೊರತೆಯನ್ನು ನೀಗಿಸಿಕೊಂಡಿದ್ದೇವೆ. ಪ್ರಯಾಣ ಮುಂದುವರಿಸಲು ಹೊಸ ಸ್ಫೂರ್ತಿ ಲಭಿಸಿದೆ. ಈ ಪಯಣ ನಾಳೆಗೇ ಕೊನೆಯಾಗುವುದನ್ನು ನಾವು ಬಯಸುವುದಿಲ್ಲ…’ ಎಂದಿದ್ದಾರೆ.
ಭಾರತ ಸೆಮಿಫೈನಲ್‌ ಪ್ರವೇಶಿಸಿದರೆ ಸ್ಪೇನ್‌ ಅಥವಾ ಜರ್ಮನಿ ಸವಾಲನ್ನು ಎದುರಿಸಲಿದೆ.
 

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.