“ವಿಶ್ವ 10ಕೆ’ ಮ್ಯಾರಥಾನ್‌: ಅಂದಮ್ಲಾಕ್‌ ಬೆಲಿಹು, ಟಿರೋಪ್‌ಗೆ ಪ್ರಶಸ್ತಿ


Team Udayavani, May 20, 2019, 10:08 AM IST

marathan

ಬೆಂಗಳೂರು: ಉದ್ಯಾನನಗರಿಯಲ್ಲಿ ರವಿವಾರ ನಡೆದ “ವಿಶ್ವ 10ಕೆ’ ಮ್ಯಾರಥಾನ್‌ ಕೂಟದಲ್ಲಿ ಇಥಿಯೋಪಿಯ, ಕೀನ್ಯಾ ಆ್ಯತ್ಲೀಟ್‌ಗಳು ಪ್ರಾಬಲ್ಯ ಮೆರೆದಿದ್ದಾರೆ. ಪುರುಷರ ವಿಭಾಗದಲ್ಲಿ ಇಥಿಯೋಪಿಯದ ಅಂದಮ್ಲಾಕ್‌ ಬೆಲಿಹು (27 ನಿಮಿಷ, 56 ಸೆಕೆಂಡ್ಸ್‌) ಹಾಗೂ ಮಹಿಳಾ ಅಗ್ನೆಸ್‌ ಟಿರೋಪ್‌ (33 ನಿಮಿಷ, 55 ಸೆಕೆಂಡ್ಸ್‌) ಮೊದಲ ಸ್ಥಾನದೊಂದಿಗೆ 2 ಲಕ್ಷ ರೂ. ನಗದು ಹಾಗೂ ಸ್ಮರಣಿಕೆ ಪಡೆದುಕೊಂಡಿದ್ದಾರೆ.

ಬೆಲಿಹುಗೆ ಪ್ರಬಲ ಸ್ಪರ್ಧೆ
ಬೆಲಿಹುಗೆ ಮ್ಯಾರಥಾನ್‌ನ ಕೊನೆಯ ತನಕ ಉಗಾಂಡದ ಮ್ಯಾಂಡೇ ಬುಶೆಂಡಿಚ್‌ (28 ನಿಮಿಷ, 03 ಸೆಕೆಂಡ್ಸ್‌) ಪ್ರಬಲ ಸ್ಪರ್ಧೆ ನೀಡಿದ್ದರು. ಇಬ್ಬರ ನಡುವಿನ ಹೋರಾಟದಲ್ಲಿ ಕೊನೆಗೂ ಬೆಲಿಹು ಪರಾಕ್ರಮ ಮೆರೆದು ಗೆಲುವಿನ ನಗು ಬೀರಿದರು. ಬುಶೆಂಡಿಚ್‌ ದ್ವಿತೀಯ ಸ್ಥಾನ ಪಡೆದುಕೊಂಡರು.

ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿದ್ದ ಕೀನ್ಯಾದ ಪೌಲ್‌ ತನುಯ್‌ ನಿರಾಸೆ ಅನುಭವಿಸಿದ್ದಾರೆ. ಅವರು 28 ನಿಮಿಷ 39 ಸೆಕೆಂಡ್ಸ್‌ನಲ್ಲಿ ಗುರಿ ತಲುಪಿ 6ನೇ ಸ್ಥಾನಿಯಾದರು. ಇಥಿಯೋಪಿಯದ ಬಿರ್ಹಾನು ಲೆಗೀಸ್‌ ತೃತೀಯ (28 ನಿಮಿಷ, 23 ಸೆಕೆಂಡ್ಸ್‌), ಕೀನ್ಯಾದ ಜೆಫ್ರಿ ಕೊಯೆಚ್‌ 4ನೇ (28 ನಿಮಿಷ, 27 ಸೆಕೆಂಡ್ಸ್‌) ಹಾಗೂ ಕೀನ್ಯಾದ ಮ್ಯಾಥ್ಯೂ ಕೆಮೆಲಿ (28 ನಿಮಿಷ, 36 ಸೆಕೆಂಡ್ಸ್‌) 5ನೇ ಸ್ಥಾನ ಪಡೆದರು.

ಮಹಿಳಾ ವಿಭಾಗದಲ್ಲಿ ಟಿರೋಪ್‌ ಸುಲಭದಲ್ಲಿ ಗೆದ್ದರು. ಇಥಿಯೋಪಿಯದ ಸೆನ್ಬೆರ್‌ ಟೆಫೆರಿ, ಲೆಟೆನ್‌ಬೆಟ್‌ ಗಿಡೆ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದುಕೊಂಡರು. ಇಥಿಯೋಪಿಯಾದ ನೆಟ್ಸಾನೆಟ್‌ 4ನೇ ಸ್ಥಾನ ಪಡೆದು ನಿರಾಶೆ ಅನುಭವಿಸಿದರು.

ಕರಣ್‌, ಸಂಜೀವನಿ ಚಾಂಪಿಯನ್ಸ್‌
ಭಾರತೀಯ ಎಲೈಟ್‌ ಆ್ಯತ್ಲೆಟಿಕ್ಸ್‌ ವಿಭಾಗದಲ್ಲಿ ಸಂಜೀವನಿ ಜಾಧವ್‌ ಮಹಿಳೆಯರ ವಿಭಾಗದಲ್ಲಿನ ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್‌ ಪಟ್ಟವನ್ನು ಉಳಿಸಿಕೊಂಡರು. ಅವರು 35 ನಿಮಿಷ 10 ಸೆಕೆಂಡ್ಸ್‌ನಲ್ಲಿ ಗುರಿ ತಲುಪಿದರು. ಪಾರೂಲ್‌ ಚೌಧರಿ (35 ನಿಮಿಷ, 36 ಸೆಕೆಂಡ್ಸ್‌) ದ್ವಿತೀಯ ಹಾಗೂ ಚಿಂತಾ ಯಾದವ್‌ (36 ನಿಮಿಷ, 34 ಸೆಕೆಂಡ್ಸ್‌) ತೃತೀಯ ಸ್ಥಾನಿಯಾದರು.

ಭಾರತೀಯ ಎಲೈಟ್‌ ಆ್ಯತ್ಲೆಟಿಕ್ಸ್‌ ವಿಭಾಗದಲ್ಲಿ ಕರಣ್‌ ಸಿಂಗ್‌ (29 ನಿಮಿಷ, 55 ಸೆಕೆಂಡ್ಸ್‌) ಪುರುಷರ ವಿಭಾಗದ ಚಾಂಪಿಯನ್‌ ಆದರು. ಲಕ್ಷ್ಮಣ್‌ ಗೋವಿಂದನ್‌ (30 ನಿಮಿಷ, 02 ಸೆಕೆಂಡ್ಸ್‌) ದ್ವಿತೀಯ ಹಾಗೂ ಅವಿನಾಶ್‌ ಮುಕುಂದ್‌ (30 ನಿಮಿಷ, 36 ಸೆಕೆಂಡ್ಸ್‌) ತೃತೀಯ ಸ್ಥಾನ ಪಡೆದುಕೊಂಡರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.