ವಿಶ್ವ ಬ್ಯಾಡ್ಮಿಂಟನ್: ಸಿಂಧು, ಶ್ರೀಕಾಂತ್ ಮೇಲೆ ಪದಕ ಭರವಸೆ
Team Udayavani, Aug 21, 2017, 12:56 PM IST
ಗ್ಲಾಸ್ಗೋ (ಸ್ಕಾಟ್ಲೆಂಡ್): ಪ್ರತಿಷ್ಠಿತ ಬ್ಯಾಡ್ಮಿಂಟನ್ ಟೂರ್ನಿಗಳಲ್ಲಿ ಒಂದಾದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಸೋಮವಾರ ದಿಂದ ಸ್ಕಾಟ್ಲೆಂಡ್ನ ಗ್ಲಾಸ್ಗೋದಲ್ಲಿ ಆರಂಭ ವಾಗಲಿದೆ. ಭಾರತದ ಬ್ಯಾಡ್ಮಿಂಟನ್ ತಾರೆಯರಾದ ಪಿ.ವಿ. ಸಿಂಧು, ಸೈನಾ ನೆಹ್ವಾಲ್, ಕೆ.ಶ್ರೀಕಾಂತ್ ಸೇರಿದಂತೆ ದೇಶದ ಒಟ್ಟು 21 ಆಟಗಾರರು ಇದರಲ್ಲಿ ಸ್ಪರ್ಧಿಸಲಿದ್ದಾರೆ.
ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಸಿಂಧು 2013 ಮತ್ತು 2014ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇತ್ತೀಚಿನ ವಿವಿಧ ಕೂಟಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಸಿಂಧು ಪದಕ ಗೆಲ್ಲುವ ಪ್ರಮುಖ ಸ್ಪರ್ಧಿಯಾಗಿದ್ದಾರೆ. ಲಂಡನ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ 2015ರಲ್ಲಿ ನಡೆದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಆದರೆ ಇತ್ತೀಚೆಗೆ ಫಾರ್ಮ್ ಕೊರತೆ ಎದುರಿಸುತ್ತಿರುವುದು ತುಸು ಆತಂಕಕ್ಕೆ ಕಾರಣವಾಗಿದೆ. ವನಿತಾ ಸಿಂಗಲ್ಸ್ನಲ್ಲಿ ಪಿ.ವಿ. ಸಿಂಧು ಕೊರಿಯಾದ ಕಿಮ್ ಹೊ ಮಿನ್ ಅಥವಾ ಈಜಿಪ್ಟ್ನ ಹದಿಯಾ ಹೋಸ್ನಿ ವಿರುದ್ಧ ಮೊದಲ ಸುತ್ತಿನ ಪಂದ್ಯವಾಡಲಿದ್ದಾರೆ. ಗೆದ್ದು ಮುಂದುವರಿದರೆ ಕ್ವಾರ್ಟರ್ ಫೈನಲ್ ಪ್ರವೇಶಕ್ಕೆ ಚೀನದ ಸುನ್ ಯು ವಿರುದ್ಧ ಕಾದಾಡುವ ಸಾಧ್ಯತೆ ಇದೆ. ಸೈನಾ ನೆಹ್ವಾಲ್ ಸ್ವಿಟ್ಸರ್ಲ್ಯಾಂಡಿನ ಸಬ್ರಿನಾ ಜಾಕ್ವೆಟ್-ಉಕ್ರೇನಿನ ನತಾಲ್ಯಾ ವೊಯೆಕ್ ನಡುವಿನ ವಿಜೇತರನ್ನು ಎದುರಿಸುವರು.
ಶ್ರೀಕಾಂತ್ಗೆ ಉಜ್ವಲ ಅವಕಾಶ
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭರ್ಜರಿ ಫಾರ್ಮ್ನಲ್ಲಿರುವ ಕೆ. ಶ್ರೀಕಾಂತ್ ಪದಕ ಗೆಲ್ಲುವ ಪ್ರಮುಖ ಸ್ಪರ್ಧಿಯಾಗಿದ್ದಾರೆ. ಅವರು ಕಳೆದ ಇಂಡೋನೇಶ್ಯ ಹಾಗೂ ಆಸ್ಟ್ರೇಲಿಯ ಓಪನ್ ಟೂರ್ನಿಗಳಲ್ಲಿ ಪ್ರಶಸ್ತಿಗೆ ಪಾತ್ರರಾಗಿದ್ದರು. ಇದೇ ಫಾರ್ಮ್ ಮುಂದುವರಿಸಿದರೆ ವಿಶ್ವ ಬ್ಯಾಡ್ಮಿಂಟನ್ನಲ್ಲಿ ಪದಕದ ಖಾತೆ ತೆರೆಯಬಹುದು. ಬಿ. ಸಾಯಿ ಪ್ರಣೀತ್, ಅಜಯ್ ಜಯರಾಮ್, ಸಮೀರ್ ವರ್ಮ ಪುರುಷರ ಸಿಂಗಲ್ಸ್ ವಿಭಾಗದ ಪ್ರಮುಖರಾಗಿದ್ದಾರೆ. ಪುರುಷರ ಡಬಲ್ಸ್ನಲ್ಲಿ ಮನು ಅತ್ರಿ ಮತ್ತು ಬಿ. ಸುಮೀತ್ ರೆಡ್ಡಿ, ಮಿಶ್ರ ಡಬಲ್ಸ್ನಲ್ಲಿ ಅಶ್ವಿನಿ ಪೋನ್ನಪ್ಪ ಮತ್ತು ಸುಮೀತ್ ರೆಡ್ಡಿ ಜೋಡಿ ಸ್ಥಾನ ಪಡೆದಿದೆ. ಭಾರತದ ಪುರುಷರು ಪ್ರಸಕ್ತ ಬ್ಯಾಡ್ಮಿಂಟನ್ ಋತುವಿನಲ್ಲಿ ಒಟ್ಟು 6 ಪ್ರಶಸ್ತಿಗಳೊಂದಿಗೆ ಪ್ರಚಂಡ ಫಾರ್ಮ್ನಲ್ಲಿದ್ದಾರೆ. ಇದು ಗ್ಲಾಸ್ಗೋ ಯಶಸ್ಸಿಗೆ ಸ್ಫೂರ್ತಿಯಾಗಬಹುದು. ಪಂದ್ಯಾವಳಿ ಆ. 27ರ ವರೆಗೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್