ವರ್ಲ್ಡ್ ಬಾಕ್ಸಿಂಗ್‌: ಅಮಿತ್‌, ಮನೀಷ್‌ಗೆ ಪದಕ ಖಾತ್ರಿ


Team Udayavani, Sep 19, 2019, 5:42 AM IST

Boxing-a

ಎಕಟೆರಿನ್‌ಬರ್ಗ್‌ (ರಶ್ಯ): ಏಶ್ಯನ್‌ ಗೇಮ್ಸ್‌ನಲ್ಲಿ ಬಂಗಾರ ಪದಕ ಜಯಿಸಿದ್ದ ಭಾರತದ ಅಮಿತ್‌ ಪಂಘಲ್‌ ಮತ್ತು ಇದೇ ಮೊದಲ ಸಲ ಕಣಕ್ಕಿಳಿದ ಮನೀಷ್‌ ಕೌಶಿಕ್‌ “ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌’ನಲ್ಲಿ ಪದಕವೊಂದನ್ನು ಖಚಿತಪಡಿಸಿದ್ದಾರೆ.

ಆದರೆ ಸಂಜೀತ್‌ ಕುಮಾರ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಪರಾಭವಗೊಂಡು ಪದಕ ಸ್ಪರ್ಧೆಯಿಂದ ಹೊರಬಿದ್ದರು.ಅಮಿತ್‌ ಪಂಘಲ್‌ 52 ಕೆಜಿ ವಿಭಾಗದಲ್ಲಿ ಮತ್ತು ಮನೀಷ್‌ 63 ಕೆಜಿ ವಿಭಾಗದಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದು, ಕನಿಷ್ಠ ಕಂಚಿನ ಪದಕವನ್ನು ಗೆಲ್ಲುವ ಅವಕಾಶ ಹೊಂದಿದ್ದಾರೆ. ಆಗ ಇದು ಇವರಿಬ್ಬರ ಪಾಲಾಗಲಿರುವ ಮೊದಲ ವಿಶ್ವಕಪ್‌ ಪದಕವಾಗಲಿದೆ.

ಅಮಿತ್‌ಗೆ 4-1 ಗೆಲುವು
ಬುಧವಾರದ ಕ್ವಾರ್ಟರ್‌ ಫೈನಲ್‌ ಹಣಾ ಹಣಿಯಲ್ಲಿ ಹಾಲಿ ಏಶ್ಯನ್‌ ಚಾಂಪಿಯನ್‌ ಕೂಡ ಆಗಿರುವ, ದ್ವಿತೀಯ ಶ್ರೇಯಾಂಕದ ಅಮಿತ್‌ ಪಂಘಲ್‌ ಫಿಲಿಪ್ಪೀನ್ಸ್‌ನ ಕಾರ್ಲೊ ಪಾಲಮ್‌ ಅವರನ್ನು 4-1 ಅಂತರದಿಂದ ಹಿಮ್ಮೆಟ್ಟಿಸಿದರು. ಕಳೆದ ವರ್ಷದ ಏಶ್ಯನ್‌ ಗೇಮ್ಸ್‌ ಸೆಮಿಫೈನಲ್‌ನಲ್ಲೂ ಪಾಲಮ್‌ ಅವರನ್ನು ಪಂಘಲ್‌ ಪರಾಭವಗೊಳಿಸಿದ್ದರು.

ಅಮಿತ್‌ ಪಂಘಲ್‌ ಅವರ ಸೆಮಿಫೈನಲ್‌ ಎದುರಾಳಿ ಕಜಾಕ್‌ಸ್ಥಾನದ ಸಾಕೆನ್‌ ಬಿಬೊಸ್ಸಿನೋವ್‌. ಅವರು ಅರ್ಮೇನಿಯಾದ ಆರ್ಥರ್‌ ಹೋವನ್ನಿಸ್ಯಾನ್‌ ವಿರುದ್ಧ ಮೇಲುಗೈ ಸಾಧಿಸಿದರು. ಪರಾಜಿತ ಹೋವನ್ನಿಸ್ಯಾನ್‌ ಯುರೋಪಿಯನ್‌ ಬಾಕ್ಸಿಂಗ್‌ ಕೂಟದ ಸ್ವರ್ಣ ಪದಕ ವಿಜೇತರಾಗಿದ್ದು, 6ನೇ ಶ್ರೇಯಾಂಕ ಹೊಂದಿದ್ದಾರೆ.

ಕಳೆದ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಅಮಿತ್‌ ಪಂಘಲ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಹಾಲಿ ಚಾಂಪಿಯನ್‌ ಹಸನ್‌ಬಾಯ್‌ ದುಸ್ಮತೋವ್‌ ಕೈಯಲ್ಲಿ ಸೋಲನುಭವಿಸಿದ್ದರು. ಅಂದು ಅಮಿತ್‌ 49 ಕೆಜಿ ವಿಭಾಗದಲ್ಲಿ ಕಣಕ್ಕಿಳಿದಿದ್ದರು.

ಮನೀಷ್‌ಗೆ ಭರ್ಜರಿ ಜಯ
63 ಕೆಜಿ ವಿಭಾಗದ ಕ್ವಾರ್ಟರ್‌ ಫೈನಲ್‌ನಲ್ಲಿ ಮನೀಷ್‌ ಬ್ರಝಿಲ್‌ನ ವಾಂಡರ್ಸನ್‌ ಡಿ ಒಲಿವೆರ ಅವರನ್ನು 5-0 ಅಂತರದಿಂದ ಉರುಳಿಸಿದರು. 91 ಕೆಜಿ ವಿಭಾಗದ ಕ್ವಾರ್ಟರ್‌ ಫೈನಲ್‌ ಹಣಾಹಣಿಯಲ್ಲಿ ಸಂಜೀತ್‌ ಕುಮಾರ್‌ ಅವರನ್ನು ಈಕ್ವಡರ್‌ನ ಜೂಲಿಯೊ ಸೆಸ ಕ್ಯಾಸ್ಟಿಲ್ಲೊ ಟೊರೆಸ್‌ 4-1ರಿಂದ ಪರಾಭವಗೊಳಿಸಿದರು.

ಮನೀಷ್‌ ಕೌಶಿಕ್‌ ಅವರಿನ್ನು ಕ್ಯೂಬಾದ ಅಗ್ರ ಶ್ರೇಯಾಂಕಿತ ಆ್ಯಂಡಿ ಗೋಮೆಜ್‌ ಕ್ರುಝ್ ವಿರುದ್ಧ ಸೆಣಸಲಿದ್ದಾರೆ. 2017ರ ಕೂಟದಲ್ಲಿ ಕ್ರುಝ್ 64 ಕೆಜಿ ವಿಭಾಗದಲ್ಲಿ ಚಿನ್ನ, ಪಾನ್‌ ಅಮೆರಿಕನ್‌ ಗೇಮ್ಸ್‌ನಲ್ಲಿ ಅವಳಿ ಚಿನ್ನ ಗೆದ್ದ ಸಾಧನೆಗೈದಿದ್ದಾರೆ.

ಈ ವರೆಗೆ ನಾಲ್ಕೇ ಕಂಚು
ಭಾರತ ಈ ವರೆಗೆ ವಿಶ್ವಕಪ್‌ ಬಾಕ್ಸಿಂಗ್‌ ಆವೃತ್ತಿಯೊಂದರಲ್ಲಿ ಒಂದಕ್ಕಿಂತ ಹೆಚ್ಚು ಪದಕ ಗೆದ್ದದ್ದಿಲ್ಲ. ಈವರಗೆ 4 ಕೂಟಗಳಲ್ಲಿ 4 ಪದಕ ಜಯಿಸಿದ್ದು, ಎಲ್ಲವೂ ಕಂಚಿನ ಪದಕಗಳಾಗಿವೆ. 2009ರಲ್ಲಿ ವಿಜೇಂದರ್‌ ಸಿಂಗ್‌, 2011ರಲ್ಲಿ ವಿಕಾಸ್‌ ಕೃಷ್ಣನ್‌, 2015ರಲ್ಲಿ ಶಿವ ಥಾಪ ಮತ್ತು 2017ರಲ್ಲಿ ಗೌರವ್‌ ಬಿಧುರಿ ಈ ಸಾಧನೆ ಮಾಡಿದ್ದರು. ಈ ಬಾರಿ ಭಾರತದಿಂದ ನೂತನ ದಾಖಲೆ ನಿರ್ಮಾಣವಾಗಲಿದೆ.

ಟಾಪ್ ನ್ಯೂಸ್

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.