“ಯಾವ ಕ್ರಮಾಂಕವಾದರೂ ಸೈ’ : ಕೆ.ಎಲ್‌. ರಾಹುಲ್‌


Team Udayavani, May 18, 2019, 9:59 AM IST

k-l-rahul

ಹೊಸದಿಲ್ಲಿ: ವಿಶ್ವಕಪ್‌ನಲ್ಲಿ ಭಾರತಕ್ಕೆ ಎದುರಾಗಿರುವ ದೊಡ್ಡ ಸಮಸ್ಯೆಯೆಂದರೆ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ನದ್ದು. ಇಲ್ಲಿ ಸೂಕ್ತ ಆಟಗಾರರಿಲ್ಲದಿರುವುದು ಚರ್ಚೆಗೆ ಕಾರಣವಾಗಿದೆ. 4ನೇ ಕ್ರಮಾಂಕಕ್ಕೆ ಯಾರು ಎಂಬುದು ದೊಡ್ಡ ಪ್ರಶ್ನೆಯಾಗಿ ಕಾಡಿದೆ. ಈ ಕ್ರಮಾಂಕದಕಲ್ಲಿ ಕೆ.ಎಲ್‌. ರಾಹುಲ್‌ ಅವರನ್ನು ಆಡಿಸುವ ಸಾಧ್ಯತೆ ಇದೆಯೇ?

ಈ ಪ್ರಶ್ನೆಯನ್ನೇ ಮುಂದಿಟ್ಟುಕೊಂಡು ಪಿಟಿಐ ಸುದ್ದಿಸಂಸ್ಥೆ ಶುಕ್ರವಾರ ಕೆ.ಎಲ್‌. ರಾಹುಲ್‌ ಅವರನ್ನು ಸಂದರ್ಶಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕದ ಆರಂಭಕಾರ, ತನಗೆ ಯಾವ ಕ್ರಮಾಂಕವಾದರೂ ಅಡ್ಡಿಯಿಲ್ಲ ಎಂದಿದ್ದಾರೆ.

“ಆಯ್ಕೆಗಾರರು ನನ್ನನ್ನು ತಂಡಕ್ಕೆ ಆರಿಸಿದ್ದಾರೆ. ಅಂದಮೇಲೆ ತಂಡದ ಆಡಳಿತ ಮಂಡಳಿ ನನಗೆ ಸಂಬಂಧಿಸಿದಂತೆ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ಅದಕ್ಕೆ ನಾನು ಬದ್ಧನಾಗಿರಬೇಕಾಗುತ್ತದೆ’ ಎಂದು ರಾಹುಲ್‌ ಹೇಳಿದರು.

ಐಪಿಎಲ್‌ನಲ್ಲಿ ರನ್‌ ಸುರಿಮಳೆ
ಆಸ್ಟ್ರೇಲಿಯ ವಿರುದ್ಧದ 2 ಟಿ20 ಪಂದ್ಯಗಳಲ್ಲಿ ಕ್ರಮವಾಗಿ 50 ಮತ್ತು 47 ರನ್‌ ಬಾರಿಸಿದ ರಾಹುಲ್‌, ಇದೇ ಫಾರ್ಮನ್ನು ಐಪಿಎಲ್‌ಗ‌ೂ
ವಿಸ್ತರಿಸಿದರು. ಪಂಜಾಬ್‌ 53.90ರ ಸರಾಸರಿಯಲ್ಲಿ 593 ರನ್‌ ಪೇರಿಸಿ ಮೆರೆದರು. ಇದರಲ್ಲಿ ಒಂದು ಶತಕವೂ ಸೇರಿದೆ. ವಾರ್ನರ್‌ ಬಳಿಕ ಅತ್ಯಧಿಕ ರನ್‌ ಪೇರಿಸಿದ ಹೆಗ್ಗಳಿಕೆಯೂ ಇವರದಾಗಿದೆ. ಹೀಗಾಗಿ ವಿಶ್ವಕಪ್‌ನಲ್ಲೂ ರಾಹುಲ್‌ ಮಿಂಚಬಲ್ಲರೆಂಬ ಭರವಸೆ ಮೂಡಿದೆ.
“ಕಳೆದೆರಡು ತಿಂಗಳಿಂದ ನನ್ನ ಬ್ಯಾಟಿಂಗ್‌ ಉತ್ತಮ ಲಯದಲ್ಲಿದೆ. ಇಂಗ್ಲೆಂಡ್‌ ಲಯನ್ಸ್‌ ವಿರುದ್ಧ ಆಡುವಾಗ ಬ್ಯಾಟಿಂಗ್‌ ಕೌಶಲದತ್ತ ಹೆಚ್ಚಿನ ಗಮನ ನೀಡಲು ಸಾಧ್ಯವಾಯಿತು. ಹೀಗಾಗಿ ಆಸ್ಟ್ರೇಲಿಯ ವಿರುದ್ಧದ ಟಿ20, ಐಪಿಎಲ್‌ನಲ್ಲಿ ರನ್‌ ಉತ್ತಮ ರನ್‌ ಸಂಪಾದಿಸಿದೆ’ ಎಂದರು.

“ನನ್ನ ಬ್ಯಾಟಿಂಗ್‌ ಟೆಕ್ನಿಕ್‌ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇಲ್ಲ. ನನ್ನದು ಸರಳ ಟೆಕ್ನಿಕ್‌. ವಿಶ್ವ ಮಟ್ಟದ ಕೂಟಗಳಲ್ಲಿ ಫಾರ್ಮ್ ಮುಖ್ಯವಾಗುತ್ತದೆ’ ಎಂಬುದು ರಾಹುಲ್‌ ಅಭಿಪ್ರಾಯ.

ಇಂಗ್ಲೆಂಡ್‌ ವಾತಾವರಣದ ಅರಿವಿದೆ
ಕಳೆದ ಇಂಗ್ಲೆಂಡ್‌ ಪ್ರವಾಸದ ವೇಳೆ ಅಸ್ಥಿರ ಪ್ರದರ್ಶನ ನೀಡಿದ ಪ್ರಶ್ನೆಯೂ ರಾಹುಲ್‌ಗೆ ಎದುರಾಯಿತು. “ಕಳೆದ ವರ್ಷ ಇದೇ ಅವಧಿಯಲ್ಲಿ ನಾವು ಇಂಗ್ಲೆಂಡ್‌ನ‌ಲ್ಲಿದ್ದೆವು. ಹೀಗಾಗಿ ಅಲ್ಲಿನ ವಾತಾವರಣದ ಬಗ್ಗೆ ಅರಿವಿದೆ. ಕಳೆದ ಪ್ರವಾಸ ಯಾರಿಗೂ ಆತ್ಮವಿಶ್ವಾಸ ತುಂಬಿಸದು. ನಾವು ಫ್ರೆಶ್‌ ಆಗಿ ಇಂಗ್ಲೆಂಡ್‌ನ‌ಲ್ಲಿ ವಿಶ್ವಕಪ್‌ ಆಡಬೇಕಿದೆ. ಇದಕ್ಕಾಗಿ ಉತ್ತಮ ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದು ರಾಹುಲ್‌ ಹೇಳಿದರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.