ವಿಶ್ವಕಪ್‌ ಹಾಕಿ-2023: ಒಡಿಶಾ ಆತಿಥ್ಯ


Team Udayavani, Nov 28, 2019, 12:02 AM IST

hockey

ಭುವನೇಶ್ವರ: ಪ್ರತಿಷ್ಠಿತ ವಿಶ್ವಕಪ್‌ ಹಾಕಿ ಪಂದ್ಯಾವಳಿಯ ಆತಿಥ್ಯ ಸತತ 2ನೇ ಸಲ ಭಾರತದ ಪಾಲಾಗಿದೆ. 2023ರ ಪುರುಷರ ವಿಭಾಗದ ವಿಶ್ವಕಪ್‌ ಪಂದ್ಯಗಳು ಒಡಿಶಾದ ಭುವನೇಶ್ವರ ಮತ್ತು ರೂರ್ಕೆಲಾದಲ್ಲಿ ನಡೆಯಲಿವೆ ಎಂದು ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಬುಧವಾರ ಘೋಷಿಸಿದರು.
ಈ ಪಂದ್ಯಾವಳಿ 2023ರ ಜ. 13ರಿಂದ 29ರ ತನಕ ನಡೆಯಲಿದೆ.

“ನಾವು 2018ರ ವಿಶ್ವಕಪ್‌ ಹಾಕಿ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿದ್ದೆವು. ಈಗ 2023ರಲ್ಲಿ ಮತ್ತೆ ಈ ಪ್ರತಿಷ್ಠಿತ ಕೂಟದ ಆತಿಥ್ಯ ಭಾರತದ್ದಾಗಿದೆ. ಈ ಸ್ಪರ್ಧೆಗಳು ಭುವನೇಶ್ವರ ಮತ್ತು ರೂರ್ಕೆಲಾದಲ್ಲಿ ನಡೆಯಲಿವೆ ಎಂಬುದನ್ನು ತಿಳಿಸಲು ಸಂತೋಷವಾಗುತ್ತದೆ’ ಎಂದು ನವೀನ್‌ ಪಟ್ನಾಯಕ್‌ ಇಲ್ಲಿನ “ಕಳಿಂಗ ಸ್ಟೇಡಿಯಂ’ನಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಘೋಷಿಸಿದರು.

ಅಂತಾರಾಷ್ಟ್ರೀಯ ಹಾಕಿ ಫೆಡರೇ ಶನ್‌ ಹಾಗೂ ಭಾರತೀಯ ಒಲಿಂಪಿಕ್‌ ಅಸೋಸಿಯೇಶನ್‌ ಅಧ್ಯಕ್ಷ ನರೀಂದರ್‌ ಬಾತ್ರಾ, ಹಾಕಿ ಇಂಡಿಯಾದ ಅಧ್ಯಕ್ಷ ಮೊಹಮ್ಮದ್‌ ಮುಷ್ತಾಕ್‌ ಅಹ್ಮದ್‌, ಒಡಿಶಾದ ಕ್ರೀಡಾ ಸಚಿವ ತುಷಾರ್‌ಕಾಂತಿ ಬೆಹೆರಾ ಉಪಸ್ಥಿತರಿದ್ದರು.

ಹಾಕಿ ಕೇಂದ್ರ ಭುವನೇಶ್ವರ
ದೇಶದ ಪ್ರಮುಖ ಹಾಕಿ ಕೇಂದ್ರವಾಗಿ ಬೆಳೆಯುತ್ತಿರುವ ಭುವನೇಶ್ವರದಲ್ಲಿ 2018ರ ವಿಶ್ವಕಪ್‌ ಹಾಕಿ ಪಂದ್ಯಾವಳಿ ಯಶಸ್ವಿಯಾಗಿ ನಡೆದಿತ್ತು. ಅಂದು ಬೆಲ್ಜಿಯಂ ಚಾಂಪಿಯನ್‌ ಆಗಿತ್ತು. 2017ರ ಏಶ್ಯನ್‌ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌, ಅದೇ ವರ್ಷದ ಎಫ್ಐಎಚ್‌ ಹಾಕಿ ವರ್ಲ್ಡ್ ಲೀಗ್‌ ಫೈನಲ್‌, 2019ರ ಎಫ್ಐಎಚ್‌ ಪುರುಷರ ಸೀರಿಸ್‌ ಫೈನಲ್ಸ್‌, ಇತ್ತೀಚಿನ ಎಫ್ಐಎಚ್‌ ಹಾಕಿ ಒಲಿಂಪಿಕ್‌ ಅರ್ಹತಾ ಪಂದ್ಯಾವಳಿಗಳೆಲ್ಲ ಭುವನೇಶ್ವರದಲ್ಲಿ ಧಾರಾಳ ಯಶಸ್ಸು ಕಂಡಿದ್ದವು.

2020ರ ವನಿತೆಯರ ಫಿಫಾ ಅಂಡರ್‌-17 ಕೂಟದ ತಾಣಗಳಲ್ಲಿ ಭುವನೇಶ್ವರ ಕೂಡ ಒಂದಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.