ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌: ಭಜರಂಗ್‌, ರವಿ ದಹಿಯಾ ಕಂಚಿನ ವಿಜಯ


Team Udayavani, Sep 21, 2019, 5:05 AM IST

PTI9_20_2019_000243B

ನುರ್‌ ಸುಲ್ತಾನ್‌ (ಕಜಾಕ್‌ಸ್ಥಾನ್‌): ಸೆಮಿಫೈನಲ್‌ನಲ್ಲಿ ವಿವಾದಾತ್ಮಕ ತೀರ್ಪಿಗೆ ತುತ್ತಾದ ಭಜರಂಗ್‌ ಪೂನಿಯಾ ಮತ್ತು ಇದೇ ಮೊದಲ ಸಲ ಕಣಕ್ಕಿಳಿದ ರವಿಕುಮಾರ್‌ ದಹಿಯಾ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಕಂಚಿನ ಪದಕ ತಂದಿತ್ತಿದ್ದಾರೆ. ಆದರೆ 8 ವರ್ಷಗಳ ಬಳಿಕ ಮರಳಿದ ಅನುಭವಿ ಸುಶೀಲ್‌ ಕುಮಾರ್‌ ಮೊದಲ ಸುತ್ತಿನಲ್ಲೇ ಎಡವಿದರು.

ಶುಕ್ರವಾರದ 65 ಕೆಜಿ ವಿಭಾಗದ ಜಿದ್ದಾಜಿದ್ದಿ ಕಾಳಗವೊಂದರಲ್ಲಿ ಭಜರಂಗ್‌ ಪೂನಿಯಾ ಮಂಗೋಲಿಯಾದ ಟುಲ್ಗ ಒಶಿರ್‌ ಅವರನ್ನು 8-7 ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾದರು. 0-6 ಅಂತರದಿಂದ ಹಿಂದಿದ್ದ ಭಜರಂಗ್‌ ಒಮ್ಮೆಲೇ ಜಬರ್ದಸ್ತ್ ಪ್ರದರ್ಶನ ನೀಡಿ ಮಂಗೋಲಿಯನ್‌ ಎದುರಾಳಿಯನ್ನು ಚಿತ್‌ ಮಾಡಿದ್ದು ವಿಶೇಷವಾಗಿತ್ತು. ಕೊನೆಯ 90 ಸೆಕೆಂಡ್‌ಗಳ ಸೆಣಸಾಟದಲ್ಲಿ ಭಜರಂಗ್‌ 3 ಅವಳಿ ಅಂಕಗಳನ್ನು ಸಂಪಾದಿಸಿದರು. ಇದು ಭಜರಂಗ್‌ ಗೆದ್ದ ಸತತ 3ನೇ ವಿಶ್ವ ಚಾಂಪಿಯನ್‌ಶಿಪ್‌ ಪದಕ.

ಅನಂತರದ 57 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ರವಿ ಕುಮಾರ್‌ ದಹಿಯಾ ಇರಾನ್‌ನ ರೇಝ ಅಹ್ಮದಲಿ ವಿರುದ್ಧ 6-3 ಅಂತರದ ಮೇಲುಗೈ ಸಾಧಿಸಿದರು.

ಸುಶೀಲ್‌ ಕುಮಾರ್‌ಗೆ ಸೋಲು
ಎಂಟು ವರ್ಷಗಳ ಬಳಿಕ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ಗೆ ಮರಳಿದ, ಅವಳಿ ಒಲಿಂಪಿಕ್‌ ಪದಕ ವಿಜೇತ ಸುಶೀಲ್‌ ಕುಮಾರ್‌ ಮೊದಲ ಸುತ್ತಿನಲ್ಲೇ ಸೋತು ಹೊರಬಿದ್ದರು. ಶುಕ್ರವಾರದ 74 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಅಜರ್‌ಬೈಜಾನ್‌ನ ಖಾಜಿಮುರಾದ್‌ ಗಜಿಯೇವ್‌ 11-9 ಅಂತರದಿಂದ ಭಾರತೀಯನನ್ನು ಮಣಿಸಿದರು.

ವಿರಾಮದ ವೇಳೆ 9-4 ಅಂತರದಿಂದ ಮುಂದಿದ್ದ ಸುಶೀಲ್‌ ಕುಮಾರ್‌ ಮೇಲುಗೈ ಸಾಧಿಸುವ ಎಲ್ಲ ಸೂಚನೆ ನೀಡಿದ್ದರು. ಆದರೆ ಅನಂತರ ಸತತ 7 ಅಂಕಗಳನ್ನು ಬುಟ್ಟಿಗೆ ಹಾಕಿಕೊಂಡ ಗಜಿಯೇವ್‌ ಭಾರತೀಯನ ಮೇಲೆ ತಿರುಗಿ ಬಿದ್ದರು. ದ್ವಿತೀಯ ಅವಧಿಯಲ್ಲಿ ಸುಶೀಲ್‌ ಕುಮಾರ್‌ಗೆ ಒಂದೂ ಅಂಕ ಗಳಿಸಲಾಗಲಿಲ್ಲ.

ಗಜಿಯೇವ್‌ ಫೈನಲ್‌ ಪ್ರವೇಶಿಸಿದರೆ ಸುಶೀಲ್‌ ಕುಮಾರ್‌ ರೆಪಿಶೇಜ್‌ ಸುತ್ತಿನಲ್ಲಿ ಕಂಚಿನ ಪದಕ ಹಾಗೂ ಒಲಿಂಪಿಕ್‌ ಅರ್ಹತಾ ಸ್ಪರ್ಧೆಯ ರೇಸ್‌ನಲ್ಲಿ ಉಳಿಯಲಿದ್ದಾರೆ.

ಪರ್ವೀನ್‌, ಸುಮಿತ್‌ ಪರಾಭವ
ಕೂಟದ 7ನೇ ದಿನದ ಸ್ಪರ್ಧೆಯಲ್ಲಿ 2ನೇ ಸುತ್ತಿಗೆ ಏರಿದ ಏಕೈಕ ಭಾರತೀಯನೆಂದರೆ ಪರ್ವೀನ್‌. ಅವರು 92 ಕೆಜಿ ವಿಭಾಗದಲ್ಲಿ ಕೊರಿಯಾದ ಸೆ ಚಾಂಗ್‌ಜೆ ವಿರುದ್ಧ 12-1 ಅಂತರದ ಗೆಲುವು ಸಾಧಿಸಿದರು. ಆದರೆ ಮುಂದಿನ ಸುತ್ತಿನಲ್ಲಿ ಉಕ್ರೇನಿನ ಲಿಯುಬೊಮಿರ್‌ ಸಗಲಿಯುಕ್‌ ಕೈಯಲ್ಲಿ 0-8 ಅಂತರದಿಂದ ಎಡವಿ ಹೊರಬಿದ್ದರು.

ಕಾಮನ್‌ವೆಲ್ತ್‌ ಗೇಮ್ಸ್‌ ಬಂಗಾರ ಪದಕ ವಿಜೇತ ಸುಮಿತ್‌ ಮಲಿಕ್‌ 125 ಕೆಜಿ ಫ್ರೀಸ್ಟೈಲ್‌ ವಿಭಾಗದ ಮೊದಲ ಸುತ್ತಿನಲ್ಲೇ ಸೋತರು. ಅವರನ್ನು ಹಂಗೇರಿಯ ಡ್ಯಾನಿಲ್‌ ಲಿಗೆಟಿ 2-0 ಅಂತರದಿಂದ ಹಿಮ್ಮೆಟ್ಟಿಸಿದರು. 70 ಕೆಜಿ ಫ್ರೀಸ್ಟೈಲ್‌ನಲ್ಲಿ ಕರಣ್‌ ಮೋರ್‌ ಕೂಡ ಮೊದಲ ಸುತ್ತಿನ ಆಘಾತಕ್ಕೆ ಸಿಲುಕಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.