WPL; ಡೆಲ್ಲಿಗೆ 25 ರನ್‌ ಜಯ : ಶರಣಾದ ಆರ್‌ಸಿಬಿ


Team Udayavani, Feb 29, 2024, 11:22 PM IST

1-wqeqwe

ಬೆಂಗಳೂರು: ಬೌಲಿಂಗ್‌ ಮತ್ತು ಬ್ಯಾಟಿಂಗ್‌ನಲ್ಲಿ ಉತ್ತಮ ನಿರ್ವ ಹಣೆ ನೀಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಗುರುವಾರದ ವನಿತಾ ಪ್ರೀಮಿಯರ್‌ ಲೀಗ್‌ನ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ ಬೆಂಗಳೂರು ತಂಡವನ್ನು 25 ರನ್ನುಗಳಿಂದ ಸೋಲಿಸಿದೆ.

ಗೆಲ್ಲಲು 195 ರನ್‌ ಗಳಿಸುವ ಕಠಿನ ಗುರಿ ಪಡೆದ ಆರ್‌ಸಿಬಿ ತಂಡವು ಆರಂಭಿಕ ಆಟಗಾರ್ತಿ ಸ್ಮತಿ ಮಂಧನಾ ಅವರ ಹೋರಾಟದ ಅರ್ಧಶತಕದ ಬಳಿಕ ಕುಸಿತ ಕಂಡಿದ್ದರಿಂದ ಅಂತಿಮವಾಗಿ 20 ಓವರ್‌ಗಳಲ್ಲಿ 9 ವಿಕೆಟಿಗೆ 169 ರನ್‌ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು. ಈ ಮೊದಲು ಆರಂಭಿಕ ಆಟಗಾರ್ತಿ ಶಫಾಲಿ ವರ್ಮ ಅವರ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 5 ವಿಕೆಟಿಗೆ 194 ರನ್ನುಗಳ ಉತ್ತಮ ಮೊತ್ತ ಪೇರಿಸಿತ್ತು.

ಡೆಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಎರಡನೇ ಗೆಲುವು ದಾಖಲಿಸಿದರೆ ಆರ್‌ಸಿಬಿಗೆ ಇದು ಮೊದಲ ಸೋಲು ಆಗಿದೆ. ಈ ಮೊದಲು ನಡೆದ ಎರಡು ಪಂದ್ಯಗಳಲ್ಲಿ ಆರ್‌ಸಿಬಿ ಜಯ ಸಾಧಿಸಿತ್ತು.

ಮಂಧನಾ ಕ್ರೀಸ್‌ನಲ್ಲಿ ಇರುವಷ್ಟು ಸಮಯ ಆರ್‌ಸಿಬಿ ಗೆಲ್ಲಬಹುದೆಂದು ಭಾವಿಸಲಾಗಿತ್ತು. ಆದರೆ ಅವರು 74 ರನ್‌ ಗಳಿಸಿ ಕ್ಯಾಪ್‌ ಎಸೆತದಲ್ಲಿ ಔಟಾಗುವುದರೊದಿಗೆ ಆರ್‌ಸಿಬಿ ಕುಸಿಯತೊಡಗಿತು. ಮಂಧನಾ 43 ಎಸೆತ ಎದುರಿಸಿದ್ದು 10 ಬೌಂಡರಿ ಮತ್ತು 3 ಸಿಕ್ಸರ್‌ ಬಾರಿಸಿದ್ದರು.

ಶಫಾಲಿ ಅರ್ಧಶತಕ
ಈ ಮೊದಲು ಶಫಾಲಿ ವರ್ಮ ಅವರ ಅರ್ಧಶತಕ ಮತ್ತು ಅಲಿಸ್‌ ಕ್ಯಾಪ್ಸೆ ಅವರ 46 ರನ್‌ ನೆರವಿನಿಂದ ಡೆಲ್ಲಿ ತಂಡವು ಉತ್ತಮ ಮೊತ್ತ ಪೇರಿಸುವಂತಾಯಿತು. ಶಫಾಲಿ ಮತ್ತು ಕ್ಯಾಪ್ಸೆ ಅವರು ದ್ವಿತೀಯ ವಿಕೆಟಿಗೆ 82 ರನ್ನುಗಳ ಜತೆಯಾಟ ನಡೆಸಿದ್ದರು. ಇನ್ನಿಂಗ್ಸ್‌ನ ಅಂತ್ಯದಲ್ಲಿ ಮಾರಿಜಾನೆ ಕ್ಯಾಪ್‌ ಮತ್ತು ಜೆಸ್‌ ಜೋನಾಸೆನ್‌ ಬಿರುಸಿನ ಆಟವಾಡಿ ಐದನೇ ವಿಕೆಟಿಗೆ 58 ರನ್‌ ಪೇರಿಸಿದ್ದರು.

ಯುಪಿಗೆ ಗುಜರಾತ್‌ ಸವಾಲು
ಡಬ್ಲ್ಯುಪಿಎಲ್‌ ಅಂಕಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನದಲ್ಲಿರುವ ಯುಪಿ ವಾರಿಯರ್ಸ್‌ ಮತ್ತು ಗುಜರಾತ್‌ ಜೈಂಟ್ಸ್‌ ಶುಕ್ರವಾರ ಚಿನ್ನಸ್ವಾಮಿಯಲ್ಲಿ ಮುಖಾಮುಖೀಯಾಗಲಿವೆ. ಪ್ರಸಕ್ತ ಕೂಟದಲ್ಲಿ ಎರಡೂ ತಂಡಗಳು ಮೊದಲ ಬಾರಿ ಹೋರಾಡುತ್ತಿವೆ. ಕಳೆದ ಬಾರಿಯ ಕೂಟದಲ್ಲಿ ಗುಜರಾತ್‌ ವಿರುದ್ಧ ಯುಪಿ ಮೇಲುಗೈ ಹೊಂದಿತ್ತು.

ಪ್ರಸ್ತುತ ಕೂಟದಲ್ಲಿ ಯುಪಿ ಒಟ್ಟು ಮೂರು ಪಂದ್ಯಗಳನ್ನಾಡಿ 1 ಜಯ ಸಾಧಿಸಿ, 2 ಪಂದ್ಯಗಳಲ್ಲಿ ಸೋತಿದೆ. ಗುಜರಾತ್‌ ಎರಡು ಪಂದ್ಯಗಳನ್ನಾಡಿ ಎರಡರಲ್ಲೂ ಸೋತಿದೆ. ಗುಜರಾತ್‌ ಪರ ಹರ್ಲೀನ್‌ ದೇವಲ್‌ ಕಳೆದ 10 ಪಂದ್ಯಗಳಲ್ಲಿ 232 ರನ್‌, ಆಶ್ಲೇ ಗಾರ್ಡನರ್‌ 10 ಪಂದ್ಯಗಳಲ್ಲಿ 226 ರನ್‌ ಗಳಿಸಿದ್ದಾರೆ. ತಂಡದ ಪರ ಗಾರ್ಡನರ್‌ ಬೌಲಿಂಗ್‌ನಲ್ಲೂ ಮಿಂಚಿ 11 ವಿಕೆಟ್‌ ಪಡೆದಿದ್ದಾರೆ. ತನುಜಾ ಕನ್ವರ್‌ 8 ವಿಕೆಟ್‌ ಗಳಿಸಿದ್ದಾರೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.