ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ : ಭಾರತೀಯರ ನೀರಸ ಪ್ರದರ್ಶನ

ಗ್ರೀಕೊ ರೋಮನ್‌ನಲ್ಲಿ ನೆಲಕಚ್ಚಿದ ನಾಲ್ವರು ಸ್ಪರ್ಧಿಗಳು

Team Udayavani, Sep 14, 2019, 7:52 PM IST

kusti

ನುರ್‌ ಸುಲ್ತಾನ್‌ (ಕಜಕಸ್ತಾನ್‌): ವಿಶ್ವದ ದಿಗ್ಗಜ ಕುಸ್ತಿ ಪಟುಗಳ ವಿರುದ್ಧ ಪ್ರಬಲ ಪೈಪೋಟಿ ನಡೆಸುವ ಭಾರತದ ಕನಸಿಗೆ ಮೊದಲ ದಿನವೇ ಹಿನ್ನಡೆಯಾಗಿದೆ. ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನ ಮೊದಲ ದಿನ ಭಾರತದ ನಾಲ್ವರು ಸ್ಪರ್ಧಿಗಳು ಗ್ರೀಕೋ ರೋಮನ್‌ ಪುರುಷರ ವಿಭಾಗದಲ್ಲಿ ಕ್ರಮವಾಗಿ ಮೊದಲ ಸುತ್ತಿನಲ್ಲೇ ಸೋತು ಹೊರಬಿದ್ದಿದ್ದಾರೆ. ಇದರಿಂದ ಭಾರತ ಮೊದಲ ದಿನ ಕೂಟದಲ್ಲಿ ಶುಭಾರಂಭ ಮಾಡಲಾಗದೆ ನಿರಾಶೆ ಅನುಭವಿಸಿತು.

ಮೊದಲ ಸುತ್ತಿನಲ್ಲಿ ಭಾರೀ ಕುಸಿತ:
ಒಲಿಂಪಿಕ್ಸ್‌ಯೇತರ ವಿಭಾಗದಲ್ಲಿ ಸ್ಪರ್ಧಿಸಿದ್ದ ಭಾರತದ ಸ್ಪರ್ಧಿಗಳಿಂದ ನಿರೀಕ್ಷಿತ ಪ್ರದರ್ಶನ ಹೊರಹೊಮ್ಮಲಿಲ್ಲ. ಏಷ್ಯನ್‌ ಚಾಂಪಿಯನ್‌ಶಿಪ್‌ ಬೆಳ್ಳಿಯ ಪದಕ ವಿಜೇತ ಹರ್‌ಪ್ರೀತ್‌ ಸಿಂಗ್‌ (82 ಕೆ.ಜಿ), ಸಾಗರ್‌ (63 ಕೆ.ಜಿ) ಹಾಗೂ ಮಂಜೀತ್‌ (55 ಕೆ.ಜಿ) ಒಂದು ಅಂಕವನ್ನೂ ಗಿಟ್ಟಿಸಿಕೊಳ್ಳಲೂ ಸಾಧ್ಯವಾಗದೆ ಎದುರಾಳಿಗಳಿಗೆ ಕ್ರಮವಾಗಿ ಶರಣಾದರು.

ಹರ್‌ಪ್ರೀತ್‌ 5-0 ಅಂಕಗಳ ಅಂತರದಿಂದ ಚೆಕ್‌ ಗಣರಾಜ್ಯದ ನೊವಾಕ್‌ ವಿರುದ್ಧ ಸೋಲು ಅನುಭವಿಸಿದರು. ವಿಶ್ವ ಚಾಂಪಿಯನ್‌ ಅಜರ್‌ಬೈಜನ್‌ನ ಎಲ್ಡಂಝಿ ಅಜಿಝಿÉ ವಿರುದ್ಧ ಮಂಜೀತ್‌ ಹೀನಾಯ ಸೋಲು ಅನುಭವಿಸಿದರು. ಮತ್ತೂಂದು ಸೆಣಸಾಟದಲ್ಲಿ ಸಾಗರ್‌ ಕೇವಲ ಎರಡನೇ ನಿಮಿಷದಲ್ಲಿ ಆತಿಥೇಯ ಕಜಕಸ್ತಾನದ ಅಲ್ಮತ್‌ ಕೆಬಿಸ್‌ಪಾಯೆವ್‌ ವಿರುದ್ಧ ಹೀನಾಯ ಸೋಲು ಕಂಡರು. ಭಾರತೀಯರು ವಿಶ್ವ ಮಟ್ಟಕ್ಕೆ ಬೇಕಾಗಿದ್ದ ಅನುಭವದ ಕೊರತೆಯಿಂದಾಗಿ ಸೋಲು ಅನುಭವವಿಸುವಂತಾಯಿತು.

ಗಮನ ಸೆಳೆದ ಯೋಗೇಶ್‌
ಇರುವುದರಲ್ಲಿ 72 ಕೆ.ಜಿ ವಿಭಾಗದಲ್ಲಿ ಯೋಗೇಶ್‌ ಮಾತ್ರ ಪ್ರಬಲ ಹೋರಾಟ ನೀಡಲು ಸಾಧ್ಯವಾಯಿತು. ರೋಚಕ ಸೆಣಸಿನಲ್ಲಿ 5-6 ಅಂಕಗಳ ಅಂತರದಿಂದ ಅಮೆರಿಕದ ರೆಮಂಡ್‌ ಅಂಥೋನಿ ಬಂಕರ್‌ ವಿರುದ್ಧ ಸೋಲು ಅನುಭವಿಸಿದರು. ಸೋಲಿನಲ್ಲೂ ಯೋಗೇಶ್‌ ಪರಾಕ್ರಮ ಆಟ ಪ್ರದರ್ಶಿಸಿದ್ದು ವಿಶೇಷವಾಗಿತ್ತು. ಇದು ಅಲ್ಪ ಮಟ್ಟಿಗೆ ಭಾರತೀಯ ಅಭಿಮಾನಿಗಳಿಗೆ ಸಮಾಧಾನ ತಂದ ಸುದ್ದಿ. ಯೋಗೇಶ್‌ ಮೊದಲ ಸುತ್ತಿನಲ್ಲಿ 4-0 ಅಂಕಗಳ ಅಂತರದಿಂದ ಹಿನ್ನಡೆ ಅನುಭವಿಸಿದ್ದರು. ಆದರೆ ನಂತರದ ಹಂತದಲ್ಲಿ ಯೋಗೇಶ್‌ ಪ್ರಬಲ ಆಟ ಪ್ರದರ್ಶಿಸಿದರು. 5-4 ಅಂತರದ ಮುನ್ನಡೆ ಪಡೆದಿದ್ದರು. ಆದರೆ ಕೊನೆಯ ಹಂತದಲ್ಲಿ ಎಡವಿದ್ದರಿಂದ ಕೇವಲ 2 ಅಂಕದಿಂದ ಸೋಲು ಅನುಭವಿಸಬೇಕಾಯಿತು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.