WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ


Team Udayavani, Jun 6, 2023, 11:12 AM IST

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

ಲಂಡನ್: ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೂನ್ 7 ಬುಧವಾರದಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಟೆಸ್ಟ್ ಕ್ರಿಕೆಟ್ ನ ಅತ್ಯುನ್ನತ ಪ್ರಶಸ್ತಿಗಾಗಿ ಕಾದಾಡಲಿದೆ.

ಭಾರತದ ಅಗ್ರ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಸದ್ಯ ಉತ್ತಮ ಫಾರ್ಮ್ ನಲ್ಲಿದ್ದಾರೆ. ಐಪಿಎಲ್ ನಲ್ಲೂ ಭರ್ಜರಿಯಾಗಿ ಬ್ಯಾಟ್ ಬೀಸಿ ಸತತ ಶತಕ ಬಾರಿಸಿದ್ದ ವಿರಾಟ್ ಅದೇ ಜೋಶ್ ನಲ್ಲಿ ಡಬ್ಲ್ಯೂಟಿಸಿ ಫೈನಲ್ ಗೆ ಆಗಮಿಸಿದ್ದಾರೆ.

ವಿರಾಟ್ ಸದಾ ಆಸೀಸ್ ವಿರುದ್ಧ ಬ್ಯಾಟ್ ಮಾಡುವುದನ್ನು ಆನಂದಿಸುತ್ತಾರೆ. ಆಸ್ಟ್ರೇಲಿಯಾ ವಿರುದ್ಧದ 24 ಟೆಸ್ಟ್‌ ಗಳಲ್ಲಿ ಅವರು 48.26 ಸರಾಸರಿಯಲ್ಲಿ 1,979 ರನ್ ಗಳಿಸಿದ್ದಾರೆ. ಇದರಲ್ಲಿ ಅವರು ಎಂಟು ಶತಕಗಳು ಮತ್ತು ಐದು ಅರ್ಧಶತಕಗಳನ್ನು ಬಾರಿಸಿದ್ದಾರೆ. ಕಾಂಗರೂಗಳ ವಿರುದ್ದ ಅವರ ಅತ್ಯುತ್ತಮ ಸ್ಕೋರ್ 186. ಆಸ್ಟ್ರೇಲಿಯಾ ವಿರುದ್ಧ ಎಲ್ಲಾ ಸ್ವರೂಪಗಳಲ್ಲಿ ವಿರಾಟ್ 92 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು 50.97 ಸರಾಸರಿಯಲ್ಲಿ 4,945 ರನ್ ಗಳಿಸಿದ್ದಾರೆ. ಒಟ್ಟಾರೆ ಅವರು ಆಸೀಸ್ ವಿರುದ್ಧ 16 ಶತಕ ಮತ್ತು 24 ಅರ್ಧಶತಕಗಳನ್ನು ಗಳಿಸಿದ್ದಾರೆ.

ವಿರಾಟ್ ಕೊಹ್ಲಿ ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಆಡುವುದನ್ನು ಆನಂದಿಸುತ್ತಾರೆ. 15 ನಾಕೌಟ್ ಪಂದ್ಯಗಳಲ್ಲಿ 16 ಇನ್ನಿಂಗ್ಸ್‌ ಗಳಲ್ಲಿ ವಿರಾಟ್ 51.66 ಸರಾಸರಿಯಲ್ಲಿ 620 ರನ್ ಗಳಿಸಿದ್ದಾರೆ. ಅವರು ನಾಕೌಟ್ ಪಂದ್ಯಗಳಲ್ಲಿ ಆರು ಅರ್ಧಶತಕಗಳನ್ನು ಗಳಿಸಿದ್ದಾರೆ, ಅತ್ಯುತ್ತಮ ಸ್ಕೋರ್ ಅಜೇಯ 96. ಅವರು ಟೆಸ್ಟ್ ಫೈನಲ್ ಪಂದ್ಯದಲ್ಲಿ ದೊಡ್ಡ ರನ್ ಗಳಿಸಿದರೆ, ಅವರು ಸಚಿನ್ ತೆಂಡೂಲ್ಕರ್ (14 ನಾಕೌಟ್ ಇನ್ನಿಂಗ್ಸ್‌ಗಳಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳೊಂದಿಗೆ 657 ರನ್) ಮತ್ತು ರಿಕಿ ಪಾಂಟಿಂಗ್ (18 ಇನ್ನಿಂಗ್ಸ್‌ನಲ್ಲಿ ಮೂರು ಶತಕ ಮತ್ತು ಒಂದು ಅರ್ಧಶತಕದೊಂದಿಗೆ 731) ಮೀರಿ ಐಸಿಸಿಯ ನಾಕೌಟ್ ‘ಕಿಂಗ್’ ಆಗಲಿದ್ದಾರೆ.

ಇದನ್ನೂ ಓದಿ:VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

ಇಂಗ್ಲೆಂಡ್‌ ನಲ್ಲಿ ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಪ್ರಸ್ತುತ ರಾಹುಲ್ ದ್ರಾವಿಡ್ ಹೆಸರಿನಲ್ಲಿದೆ. 46 ಪಂದ್ಯಗಳಲ್ಲಿ ದ್ರಾವಿಡ್ 55.10 ಸರಾಸರಿಯಲ್ಲಿ 2,645 ರನ್ ಗಳಿಸಿದ್ದಾರೆ. ಇದರಲ್ಲಿ ಒಟ್ಟು ಎಂಟು ಶತಕಗಳು ಮತ್ತು 15 ಅರ್ಧಶತಕಗಳಿವೆ. ಸಚಿನ್ 43 ಪಂದ್ಯಗಳಲ್ಲಿ ಏಳು ಶತಕ ಮತ್ತು 12 ಶತಕಗಳೊಂದಿಗೆ 2,626 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ವಿರಾಟ್ 56 ಪಂದ್ಯಗಳಲ್ಲಿ ಮೂರು ಶತಕ ಮತ್ತು 18 ಅರ್ಧಶತಕಗಳೊಂದಿಗೆ 40.85 ಸರಾಸರಿಯಲ್ಲಿ 2,574 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಅಗ್ರಸ್ಥಾನಕ್ಕೇರಲು ವಿರಾಟ್‌ಗೆ ಕೇವಲ 72 ರನ್‌ಗಳ ಅಗತ್ಯವಿದೆ.

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.