WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ


Team Udayavani, Jun 6, 2023, 11:12 AM IST

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

ಲಂಡನ್: ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೂನ್ 7 ಬುಧವಾರದಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಟೆಸ್ಟ್ ಕ್ರಿಕೆಟ್ ನ ಅತ್ಯುನ್ನತ ಪ್ರಶಸ್ತಿಗಾಗಿ ಕಾದಾಡಲಿದೆ.

ಭಾರತದ ಅಗ್ರ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಸದ್ಯ ಉತ್ತಮ ಫಾರ್ಮ್ ನಲ್ಲಿದ್ದಾರೆ. ಐಪಿಎಲ್ ನಲ್ಲೂ ಭರ್ಜರಿಯಾಗಿ ಬ್ಯಾಟ್ ಬೀಸಿ ಸತತ ಶತಕ ಬಾರಿಸಿದ್ದ ವಿರಾಟ್ ಅದೇ ಜೋಶ್ ನಲ್ಲಿ ಡಬ್ಲ್ಯೂಟಿಸಿ ಫೈನಲ್ ಗೆ ಆಗಮಿಸಿದ್ದಾರೆ.

ವಿರಾಟ್ ಸದಾ ಆಸೀಸ್ ವಿರುದ್ಧ ಬ್ಯಾಟ್ ಮಾಡುವುದನ್ನು ಆನಂದಿಸುತ್ತಾರೆ. ಆಸ್ಟ್ರೇಲಿಯಾ ವಿರುದ್ಧದ 24 ಟೆಸ್ಟ್‌ ಗಳಲ್ಲಿ ಅವರು 48.26 ಸರಾಸರಿಯಲ್ಲಿ 1,979 ರನ್ ಗಳಿಸಿದ್ದಾರೆ. ಇದರಲ್ಲಿ ಅವರು ಎಂಟು ಶತಕಗಳು ಮತ್ತು ಐದು ಅರ್ಧಶತಕಗಳನ್ನು ಬಾರಿಸಿದ್ದಾರೆ. ಕಾಂಗರೂಗಳ ವಿರುದ್ದ ಅವರ ಅತ್ಯುತ್ತಮ ಸ್ಕೋರ್ 186. ಆಸ್ಟ್ರೇಲಿಯಾ ವಿರುದ್ಧ ಎಲ್ಲಾ ಸ್ವರೂಪಗಳಲ್ಲಿ ವಿರಾಟ್ 92 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು 50.97 ಸರಾಸರಿಯಲ್ಲಿ 4,945 ರನ್ ಗಳಿಸಿದ್ದಾರೆ. ಒಟ್ಟಾರೆ ಅವರು ಆಸೀಸ್ ವಿರುದ್ಧ 16 ಶತಕ ಮತ್ತು 24 ಅರ್ಧಶತಕಗಳನ್ನು ಗಳಿಸಿದ್ದಾರೆ.

ವಿರಾಟ್ ಕೊಹ್ಲಿ ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಆಡುವುದನ್ನು ಆನಂದಿಸುತ್ತಾರೆ. 15 ನಾಕೌಟ್ ಪಂದ್ಯಗಳಲ್ಲಿ 16 ಇನ್ನಿಂಗ್ಸ್‌ ಗಳಲ್ಲಿ ವಿರಾಟ್ 51.66 ಸರಾಸರಿಯಲ್ಲಿ 620 ರನ್ ಗಳಿಸಿದ್ದಾರೆ. ಅವರು ನಾಕೌಟ್ ಪಂದ್ಯಗಳಲ್ಲಿ ಆರು ಅರ್ಧಶತಕಗಳನ್ನು ಗಳಿಸಿದ್ದಾರೆ, ಅತ್ಯುತ್ತಮ ಸ್ಕೋರ್ ಅಜೇಯ 96. ಅವರು ಟೆಸ್ಟ್ ಫೈನಲ್ ಪಂದ್ಯದಲ್ಲಿ ದೊಡ್ಡ ರನ್ ಗಳಿಸಿದರೆ, ಅವರು ಸಚಿನ್ ತೆಂಡೂಲ್ಕರ್ (14 ನಾಕೌಟ್ ಇನ್ನಿಂಗ್ಸ್‌ಗಳಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳೊಂದಿಗೆ 657 ರನ್) ಮತ್ತು ರಿಕಿ ಪಾಂಟಿಂಗ್ (18 ಇನ್ನಿಂಗ್ಸ್‌ನಲ್ಲಿ ಮೂರು ಶತಕ ಮತ್ತು ಒಂದು ಅರ್ಧಶತಕದೊಂದಿಗೆ 731) ಮೀರಿ ಐಸಿಸಿಯ ನಾಕೌಟ್ ‘ಕಿಂಗ್’ ಆಗಲಿದ್ದಾರೆ.

ಇದನ್ನೂ ಓದಿ:VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

ಇಂಗ್ಲೆಂಡ್‌ ನಲ್ಲಿ ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಪ್ರಸ್ತುತ ರಾಹುಲ್ ದ್ರಾವಿಡ್ ಹೆಸರಿನಲ್ಲಿದೆ. 46 ಪಂದ್ಯಗಳಲ್ಲಿ ದ್ರಾವಿಡ್ 55.10 ಸರಾಸರಿಯಲ್ಲಿ 2,645 ರನ್ ಗಳಿಸಿದ್ದಾರೆ. ಇದರಲ್ಲಿ ಒಟ್ಟು ಎಂಟು ಶತಕಗಳು ಮತ್ತು 15 ಅರ್ಧಶತಕಗಳಿವೆ. ಸಚಿನ್ 43 ಪಂದ್ಯಗಳಲ್ಲಿ ಏಳು ಶತಕ ಮತ್ತು 12 ಶತಕಗಳೊಂದಿಗೆ 2,626 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ವಿರಾಟ್ 56 ಪಂದ್ಯಗಳಲ್ಲಿ ಮೂರು ಶತಕ ಮತ್ತು 18 ಅರ್ಧಶತಕಗಳೊಂದಿಗೆ 40.85 ಸರಾಸರಿಯಲ್ಲಿ 2,574 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಅಗ್ರಸ್ಥಾನಕ್ಕೇರಲು ವಿರಾಟ್‌ಗೆ ಕೇವಲ 72 ರನ್‌ಗಳ ಅಗತ್ಯವಿದೆ.

ಟಾಪ್ ನ್ಯೂಸ್

ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Sapta Sagaradaache Ello second part release postponed; Side 1 came to OTT

Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

1-wsadasd

Asian Games ಇಂದಿನಿಂದ ಆ್ಯತ್ಲೆಟಿಕ್ಸ್‌ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

1-wdsa

Asian Games ವೈಯಕ್ತಿಕ ಡ್ರೆಸ್ಸೇಜ್‌: ಅನುಷ್‌ಗೆ ಕಂಚು

1-qwqwqwe

Asian Games ಟೆನಿಸ್‌: ಬೋಪಣ್ಣ-ಭೋಸಲೆಗೆ ಕಂಚು ಖಚಿತ; ರಾಮ್‌ಕುಮಾರ್‌-ಮೈನೆನಿ ಫೈನಲಿಗೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

totapuri 2 review

Totapuri 2 review; ತೋತಾಪುರಿಯ ‘ಘಮ’ ಮತ್ತು ಕಾಡುವ ‘ಸುಮ’!

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.