ಅಂಡರ್-19 ಏಕದಿನ ಕ್ರಿಕೆಟ್: ಜೈಸ್ವಾಲ್ ಶತಕ; ಭಾರತಕ್ಕೆ 3-2 ಸರಣಿ
Team Udayavani, Aug 11, 2018, 8:40 AM IST
ಮೊರಟುವಾ (ಶ್ರೀಲಂಕಾ): ಆರಂಭಕಾರ ಯಶಸ್ವಿ ಜೈಸ್ವಾಲ್ ಅವರ ಅಜೇಯ ಶತಕ ಸಾಹಸದಿಂದ ಆತಿಥೇಯ ಶ್ರೀಲಂಕಾ ವಿರುದ್ಧದ 5ನೇ ಹಾಗೂ ಕೊನೆಯ ಅಂಡರ್-19 ಏಕದಿನ ಪಂದ್ಯವನ್ನು 8 ವಿಕೆಟ್ಗಳಿಂದ ಭರ್ಜರಿಯಾಗಿ ಗೆದ್ದ ಭಾರತ ಸರಣಿಯನ್ನು 3-2 ಅಂತರದಿಂದ ತನ್ನದಾಗಿಸಿಕೊಂಡಿದೆ.
ಮೊರಟುವಾದಲ್ಲಿ ಶುಕ್ರವಾರ ನಡೆದ ಈ ಮುಖಾಮುಖೀಯಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ 9 ವಿಕೆಟಿಗೆ 212 ರನ್ ಗಳಿಸಿದರೆ, ಭಾರತ 42.4 ಓವರ್ಗಳಲ್ಲಿ ಎರಡೇ ವಿಕೆಟಿಗೆ 214 ರನ್ ಬಾರಿಸಿ ಗೆದ್ದು ಬಂದಿತು. ಆಗ ಯಶಸ್ವಿ ಜೈಸ್ವಾಲ್ 114 ರನ್ ಬಾರಿಸಿ ಔಟಾಗದೆ ಉಳಿದಿದ್ದರು. 128 ಎಸೆತಗಳ ಈ ಆಕರ್ಷಕ ಇನ್ನಿಂಗ್ಸ್ ವೇಳೆ 8 ಬೌಂಡರಿ ಹಾಗೂ 3 ಸಿಕ್ಸರ್ ಸಿಡಿಯಲ್ಪಟ್ಟಿತು. ಮತ್ತೂಬ್ಬ ಆರಂಭಕಾರ ದೇವದತ್ ಪಡಿಕ್ಕಲ್ 38 ರನ್ ಮಾಡಿದರು. ಇವರಿಬ್ಬರ 15.5 ಓವರ್ಗಳ ಮೊದಲ ವಿಕೆಟ್ ಜತೆಯಾಟದಲ್ಲಿ 71 ರನ್ ಒಟ್ಟುಗೂಡಿತು. ವನ್ಡೌನ್ ಬ್ಯಾಟ್ಸ್ ಮನ್ ಪವನ್ ಶಾ 36 ರನ್, ನಾಯಕ ಆರ್ಯನ್ ಜುಯಾಲ್ ಔಟಾಗದೆ 22 ರನ್ ಹೊಡೆದರು.
ಶ್ರೀಲಂಕಾ ಪರ ಓಪನರ್ ನಿಶಾನ್ ಮದುಶಂಕ ಫೆರ್ನಾಂಡೊ 95 ರನ್, ನುವನಿಂದು ಫೆರ್ನಾಂಡೊ 56 ರನ್ ಹೊಡೆದರು. ಭಾರತದ 6 ಬೌಲರ್ಗಳು ವಿಕೆಟ್ ಕಿತ್ತು ಮಿಂಚಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?