ಮಾಜಿ ಅಂಡರ್19 ನಾಯಕ, ಸೌರಾಷ್ಟ್ರದ ಯುವ ಆಟಗಾರ ಹೃದಯಾಘಾತದಿಂದ ನಿಧನ!
Team Udayavani, Oct 16, 2021, 11:50 AM IST
ಅಹಮದಾಬಾದ್: ಭಾರತೀಯ ಅಂಡರ್ 19 ಕ್ರಿಕೆಟ್ ತಂಡದ ಮಾಜಿ ನಾಯಕ, ಸೌರಾಷ್ಟ್ರದ ಯುವ ಬ್ಯಾಟ್ಸಮನ್ ಅವಿ ಬರೋಟ್ ಅವರು ಶುಕ್ರವಾರ ನಿಧನರಾದರು. 2019-20ರಲ್ಲಿ ರಣಜಿ ಟ್ರೋಫಿ ಗೆದ್ದ ಸೌರಾಷ್ಟ್ರ ತಂಡದ ಸದಸ್ಯನಾಗಿದ್ದ ಅವಿ ಬರೋಟ್, 29ನೇ ವಯಸ್ಸಿನಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅ.15ರ ಸಂಜೆ ತೀವ್ರ ಹೃದಯಾಘಾತದಿಂದ ಅವಿ ನಿಧನರಾದರು ಎಂದು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ತಿಳಿಸಿದೆ.
ಬಲಗೈ ಬ್ಯಾಟ್ಸಮನ್ ಮತ್ತು ಆಫ್ ಸ್ಪಿನ್ನರ್ ಆಗಿದ್ದ ಅವಿ ಬರೋಟ್ ತಲಾ 38 ಪ್ರಥಮ ದರ್ಜೆ ಮತ್ತು ಲಿಸ್ಟ್ ಎ ಪಂದ್ಯಗಳನ್ನಾಡಿದ್ದರು. 20 ಟಿ20 ಪಂದ್ಯಗಳನ್ನಾಡಿದ್ದರು.
ವಿಕೆಟ್ ಕೀಪಿಂಗ್ ಕೂಡಾ ಬಲ್ಲ ಅವಿ, ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 1547 ರನ್, ಲಿಸ್ಟ್ ಎ ಕ್ರಿಕೆಟ್ ನಲ್ಲಿ 1030 ರನ್ ಮತ್ತು ಟಿ20 ಪಂದ್ಯಗಳಲ್ಲಿ 717 ರನ್ ಗಳಿಸಿದ್ದಾರೆ.
ಇದನ್ನೂ ಓದಿ:ಕೊನೆಗೂ ಫಲ ನೀಡಿತು ಗಂಗೂಲಿ ಪ್ರಯತ್ನ: ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ
2011ರಲ್ಲಿ ಅವಿ ಬರೋಟ್ ಅವರು ಭಾರತೀಯ ಅಂಡರ್ 19 ತಂಡದ ನಾಯಕರಾಗಿದ್ದರು. ಈ ವರ್ಷದ ಸೈಯದ್ ಮುಷ್ತಾಕ್ ಅಲಿ ಕೂಟದಲ್ಲಿ ಕೇವಲ 53 ಎಸೆತಗಳಲ್ಲಿ 122 ರನ್ ಬಾರಿಸಿ ಗಮನ ಸೆಳೆದಿದ್ದರು.
Avi Barot’s breathtaking hundred and all-round effort from the bowling attack power Saurashtra to a clinical 90-run win over Goa in Indore. ?? #GOAvSAU #SyedMushtaqAliT20
Watch the highlights of the match ??https://t.co/WXBsO9XMRc pic.twitter.com/RN3MBuBV0c
— BCCI Domestic (@BCCIdomestic) January 15, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ