ಯೂತ್‌ ಒಲಿಂಪಿಕ್ಸ್‌: ಜೂಡೋ: ಭಾರತಕ್ಕೆ ಮೊದಲ ಬೆಳ್ಳಿ


Team Udayavani, Oct 9, 2018, 11:57 AM IST

tababi-devi.jpg

ಬ್ಯೂನಸ್‌ ಐರೆಸ್‌ (ಆರ್ಜೆಂಟೀನಾ): ಯೂತ್‌ ಒಲಿಂಪಿಕ್ಸ್‌ ಗೇಮ್ಸ್‌ನ ಜೂಡೋ ಸ್ಪರ್ಧೆಯಲ್ಲಿ ಭಾರತ ಮೊದಲ ಪದಕ ಜಯಿಸಿದೆ. ಒಲಿಂಪಿಕ್ಸ್‌ ಮಟ್ಟದಲ್ಲಿ ದೇಶಕ್ಕೆ ಮೊದಲ ಪದಕ ತಂದಿತ್ತ ಸಾಧಕಿಯಾಗಿ ಮೂಡಿಬಂದವರು 16ರ ಹರೆಯದ ತಂಗ್‌ಜಮ್‌ ತಬಾಬಿದೇವಿ.

ಜೂಡೋ ಸ್ಪರ್ಧೆಯಲ್ಲಿ ತಂಗ್‌ಜಮ್‌ ತಬಾಬಿದೇವಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಒಲಿಂಪಿಕ್ಸ್‌ ಮಟ್ಟದಲ್ಲಿ ಪ್ರಪ್ರಥಮ ಜೂಡೋ ಪದಕ ತಂದಿತ್ತಿದ್ದಾರೆ. ವನಿತೆಯರ 44 ಕೆಜಿ ವಿಭಾಗದ ಸ್ಪರ್ಧೆಯ ಫೈನಲ್‌ ಪಂದ್ಯದಲ್ಲಿ ತಬಾಬಿದೇವಿ ವೆನೆಜುವೆಲ್ಲಾದ ಮರಿಯಾ ಗಿಮಿನೆಜ್‌ ವಿರುದ್ಧ 0-11 ಅಂಕಗಳಿಂದ ಸೋಲುವ ಮೂಲಕ ಬೆಳ್ಳಿಗೆ ತೃಪ್ತಿಪಟ್ಟರು. ಭಾರತ ಇಲ್ಲಿಯವರೆಗೆ ಒಲಿಂಪಿಕ್ಸ್‌ನ ಹಿರಿಯರ ಅಥವಾ ಯೂತ್‌ ವಿಭಾಗದ ಜೂಡೋ ಸ್ಪರ್ಧೆಯಲ್ಲಿ ಪದಕ ಗೆದ್ದಿರಲಿಲ್ಲ.
 
16  ವರ್ಷದ ತಬಾಬಿದೇವಿ ಸೆಮಿಫೈನಲ್‌ನಲ್ಲಿ ಕ್ರೊವೇಶಿಯಾದ ಅನಾವಿಕ್ಟೋರಿಜಾ ಪುಲ್ಜಿಜ್‌ ವಿರುದ್ಧ 10-0 ಅಂಕಗಳಿದ ಗೆಲುವು ದಾಖಲಿಸಿ ಫೈನಲ್‌ ಪ್ರವೇಶಿಸಿದ್ದರು. ಈ ಮೂಲಕ ಭಾರತ ಯೂತ್‌ ಒಲಿಂಪಿಕ್ಸ್‌ನ ಆರಂಭಿಕ ದಿನ 2 ಬೆಳ್ಳಿ ಪದಕ ಜಯಿಸಿತು.

ಶೂಟಿಂಗ್‌: ಮಾನೆಗೆ ಬೆಳ್ಳಿ
ಆರಂಭಿಕ ದಿನ ಭಾರತದ ಶೂಟರ್‌ ತುಷಾರ್‌ ಮಾನೆ ಬೆಳ್ಳಿ ಪದಕ ಜಯಿಸಿದ್ದರು. ಪುರುಷರ 10 ಮೀ. ಏರ್‌ ರೈಫ‌ಲ್‌ ವಿಭಾಗದಲ್ಲಿ ತುಷಾರ್‌ ಒಟ್ಟು 247.5 ಅಂಕಗಳನ್ನು ಸಂಪಾದಿಸುವ ಮೂಲಕ ಈ ಸಾಧನೆಗೈದರು. ರಶ್ಯದ ಗ್ರಿಗೊರಿ ಸ್ಯಾಮ್‌ ಕೋವ್‌ 249.2 ಅಂಕಗಳೊಂದಿಗೆ ಚಿನ್ನ, ಸರ್ಬಿಯದ ಅಲೆಕ್ಸಾ ಮಿಟ್ರೊವಿಕ್‌ 227. 9 ಅಂಕ ಪಡೆದು ಕಂಚಿನ ಪದಕ ಜಯಿಸಿದರು. ಅರ್ಹತಾ ಸುತ್ತಿನಲ್ಲಿ 623.7 ಅಂಕ ಪಡೆದ ತುಷಾರ್‌ 3ನೇ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದಿದ್ದರು.

ಪುರುಷರ ಸ್ವಿಮ್ಮಿಂಗ್‌ನ 100 ಮೀ. ಬ್ಯಾಕ್‌ ಸ್ಟ್ರೋಕ್‌ ವಿಭಾಗದ ಅರ್ಹತಾ ಸುತ್ತಿನಲ್ಲಿ ರಾಷ್ಟ್ರೀಯ ಚಾಂಪಿಯನ್‌ ಶ್ರೀಹರಿ ನಟರಾಜನ್‌ 9ನೇ ಸ್ಥಾನ ಪಡೆದು ಫೈನಲ್‌ಗೇರಲು ವಿಫ‌ಲರಾದರು. ಅಗ್ರ 8 ಸ್ಪರ್ಧಿಗಳು ಮಾತ್ರ ಫೈನಲ್‌ ಪ್ರವೇಶಿಸುತ್ತಾರೆ. ಶ್ರೀಹರಿ 56 ನಿಮಿಷ 48 ಸೆಕೆಂಡ್‌ಗಳಲ್ಲಿ ಈಜಿ ಗುರಿ ತಲುಪಿದ್ದರು. 

ಮೆಹುಲಿ ಬೆಳ್ಳಿ ಸಾಧನೆ
ಸೋಮವಾರ ನಡೆದ ವನಿತೆಯರ 10 ಮೀ. ಏರ್‌ರೈಫ‌ಲ್‌ ಶೂಟಿಂಗ್‌ ಸ್ಪರ್ಧೆಯಲ್ಲಿ ಮೆಹುಲಿ ಘೋಷ್‌ ಬೆಳ್ಳಿ ಪದಕ ಗೆದ್ದರು.13 ಕ್ರೀಡೆಗಳಲ್ಲಿ 46 ಭಾರತೀಯ ಕ್ರೀಡಾಪಟುಗಳ ಸ್ಪರ್ಧಿಸತ್ತಿದ್ದು, ಇದೇ ಮೊದಲ ಬಾರಿಗೆ ಯೂತ್‌ ಒಲಿಂಪಿಕ್ಸ್‌ ಭಾರತ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 2014ರಲ್ಲಿ ಚೀನದಲ್ಲಿ ನಡೆದ ಕೂಟದಲ್ಲಿ ಭಾರತ ಕೇವಲ 2 ಪದಕ ಗೆದ್ದಿತ್ತು. 2010ರ ಆರಂಭಿಕ ಯೂತ್‌ ಒಲಿಂಪಿಕ್ಸ್‌ ಕೂಟದಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿ ಭಾರತ 6 ಬೆಳ್ಳಿ ಹಾಗೂ 2 ಕಂಚಿನ ಪದಕ ಜಯಿ ಸಿತ್ತು.  

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.