ಪಾಕಿಸ್ಥಾನ ತಂಡ ಬ್ಯಾಟಿಂಗ್‌ ಕೋಚ್‌ ಆಗಿ ಯೂನಿಸ್‌ ಖಾನ್‌ ಆಯ್ಕೆ


Team Udayavani, Jun 10, 2020, 10:03 AM IST

ಪಾಕಿಸ್ಥಾನ ತಂಡ ಬ್ಯಾಟಿಂಗ್‌ ಕೋಚ್‌ ಆಗಿ ಯೂನಿಸ್‌ ಖಾನ್‌ ಆಯ್ಕೆ

ಕರಾಚಿ: ಮುಂಬರುವ ಇಂಗ್ಲೆಂಡ್‌ ಪ್ರವಾಸಕ್ಕಾಗಿ ಪಾಕಿಸ್ಥಾನ ಕ್ರಿಕೆಟ್‌ ಮಂಡಳಿ (ಪಿಸಿಬಿ)ಯು ಮಾಜಿ ಯೂನಿಸ್‌ ಖಾನ್‌ ಅವರನ್ನು ರಾಷ್ಟ್ರೀಯ ತಂಡದ ಬ್ಯಾಟಿಂಗ್‌ ಕೋಚ್‌ ಆಗಿ ನೇಮಕ ಮಾಡಿದೆ. ಮಾತ್ರವಲ್ಲದೇ ಸ್ಪಿನ್‌ ಕೋಚ್‌ ಆಗಿ ಮುಷ್ತಾಕ್‌ ಅಹ್ಮದ್‌ ಅವರನ್ನು ಕರೆಸಿಕೊಂಡಿದೆ.

42ರ ಹರೆಯದ ಯೂನಿಸ್‌ ಅವರು ತನ್ನ ಜೀವನಶ್ರೇಷ್ಠ 313 ರನ್‌ ಸಹಿತ ಆಡಿದ 118 ಟೆಸ್ಟ್‌ಗಳಿಂದ 10,099 ರನ್‌ ಸಿಡಿಸಿದ್ದಾರೆ. ಯಶಸ್ವಿ ಕ್ರಿಕೆಟ್‌ ಬಾಳ್ವೆ ವೇಳೆ ಅವರು 313 ರನ್‌ ಸಿಡಿಸಿದ ಬಳಿಕ ಐಸಿಸಿ ರ್‍ಯಾಂಕಿಂಗ್‌ನಲ್ಲಿ ವಿಶ್ವದ ನಂಬರ್‌ ವನ್‌ ಸ್ಥಾನ ವನ್ನು ಏರಿದ್ದರು.

ಪಾಕಿಸ್ಥಾನ ತಂಡವು ಮೂರು ಪಂದ್ಯಗಳ ಟೆಸ್ಟ್‌ ಸರಣಿಗಾಗಿ ಜುಲೈ 30ರಿಂದ ಇಂಗ್ಲೆಂಡಿಗೆ ಪ್ರಯಾಣಿಸಲಿದೆ. ಆಬಳಿಕ ಆ. 29ರಿಂದ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ.

ಅಸಾಮಾನ್ಯ ಬ್ಯಾಟಿಂಗ್‌ ದಾಖಲೆ ಮಾಡಿದ ಕ್ರಿಕೆಟಿಗರಾದ ಯೂನಿಸ್‌ ಖಾನ್‌ ಅವರು ರಾಷ್ಟ್ರೀಯ ತಂಡದ ಬ್ಯಾಟಿಂಗ್‌ ಕೋಚ್‌ ಹುದ್ದೆ ಸ್ವೀಕರಿಸಲು ಒಪ್ಪಿಕೊಂಡಿರುವುದು ನಮಗೆ ರೋಮಾಂಚನ ನೀಡಿದೆ ಎಂದು ಪಿಸಿಬಿ ಮುಖ್ಯ ಕಾರ್ಯನಿರ್ವಾಹಕ ವಸೀಮ್‌ಖಾನ್‌ ಹೇಳಿದ್ದಾರೆ.

ಹಾಲಿ ಆಟಗಾರರ ಪಾಲಿಗೆ ಯೂನಿಸ್‌ ರೋಲ್‌ ಮಾಡೆಲ್‌ ಆಗಿದ್ದಾರೆ. ಮಾತ್ರವಲ್ಲದೇ ಎಲ್ಲರಿಂದಲೂ ಗೌರವಿಸಲ್ಪಡುವ ಕ್ರಿಕೆಟಿಗರಾಗಿದ್ದಾರೆ. ಅವರ ಉಪಸ್ಥಿತಿ ಮತ್ತು ಮಾರ್ಗದರ್ಶನದಿಂದತಂಡವು ಬಹಳಷ್ಟು ಪ್ರಯೋಜನ ಪಡೆಯಲಿದೆ ಎಂದು ಅವರು ತಿಳಿಸಿದರು.

ಪಾಕಿಸ್ಥಾನ ಪರ 52 ಟೆಸ್ಟ್‌ ಆಡಿರುವ ಮಾಜಿ ಲೆಗ್‌ ಸ್ಪಿನ್ನರ್‌ ಮುಷ್ತಾಕ್‌ ಅಹ್ಮದ್‌ 185 ವಿಕೆಟ್‌ ಕಿತ್ತ ಸಾಧನೆ ಮಾಡಿದ್ದಾರೆ. ಅವರು ತಂಡದ ಮೆಂಟರ್‌ ಮತ್ತು ಸ್ಪಿನ್‌ ಕೋಚ್‌ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಅವರು ಈ ಹಿಂದೆ ಇಂಗ್ಲೆಂಡ್‌ ಮತ್ತು ವೆಸ್ಟ್‌ಇಂಡೀಸ್‌ ತಂಡದ ಬೌಲಿಂಗ್‌ ಕೋಚ್‌ ಆಗಿ ಮಾರ್ಗದರ್ಶನ ನೀಡಿದ್ದರು.

ಇಂಗ್ಲೆಂಡ್‌ ದೀರ್ಘ‌ ಸಮಯದಿಂದ ಕೌಂಟಿ ಕ್ರಿಕೆಟ್‌ ನಲ್ಲಿ ಆಡಿದ ಅನುಭವದಿಂದಾಗಿ ಮುಷ್ತಾಕ್‌ ಅವರು ಇಂಗ್ಲೆಂಡಿನ ಪರಿಸ್ಥಿತಿಯನ್ನು ಉಳಿದವರಿಗಿಂತ ಚೆನ್ನಾಗಿ ಅರಿತಿದ್ದಾರೆ ಎಂದು ವಸೀಮ್‌ ಹೇಳಿದರು.

ಸ್ಪಿನ್ನರ್‌ಗಳಿಗೆ ಮಾರ್ಗದರ್ಶನ ನೀಡುವುದರ ಜತೆ ಮುಷ್ತಾಕ್‌ ಅವರು ಪಂದ್ಯದ ಯೋಜನೆ ಮತ್ತು ಸಿದ್ಧತೆ ಬಗ್ಗೆ ಮಿಸ್ಬಾ ಅವರಿಗೆ ನೆರವಾಗಲಿದ್ದಾರೆ ಎಂದು ವಸೀಮ್‌ ವಿವರಿಸಿದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.