ಭಾರತ- ಪಾಕ್ ದ್ವಿಪಕ್ಷೀಯ ಸರಣಿಗಳು ಮತ್ತೆ ನಡೆಯಬೇಕು: ಯುವರಾಜ್ ಸಿಂಗ್
Team Udayavani, Feb 12, 2020, 1:00 PM IST
ಮುಂಬೈ: ಭಾರತ ಮತ್ತು ಪಾಕಿಸ್ಥಾನಗಳ ನಡುವಿನ ದ್ವಿಪಕ್ಷೀಯ ಸರಣಿಗಳು ಮತ್ತೆ ನಡೆಯಬೇಕು. ಇದು ಕ್ರೀಡೆಗೆ ಉತ್ತಮ ಎಂದು ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಯುವರಾಜ್ ಜೊತೆ ಪಾಕಿಸ್ಥಾನದ ಮಾಜಿ ಆಲ್ ರೌಂಡರ್ ಆಟಗಾರ ಶಾಹೀದ್ ಅಫ್ರಿದಿ ಕೂಡಾ ಭಾರತ- ಪಾಕಿಸ್ಥಾನ ನಡುವಿನ ಸರಣಿ ನಡೆಯಬೇಕೆಂದು ಹೇಳಿದ್ದಾರೆ.
ಸ್ಪೋರ್ಟ್ಸ್ 360 ವೆಬ್ ಸೈಟ್ ಗೆ ಮಾತನಾಡಿದ ಯುವರಾಜ್ ಸಿಂಗ್, ಪಾಕಿಸ್ಥಾನ ವಿರುದ್ಧದ 2004, 2006 ಮತ್ತು 2008ರ ದ್ವಿಪಕ್ಷೀಯ ಸರಣಿಗಳಲ್ಲಿ ನಾನು ಆಡಿರುವುದನ್ನು ನೆನಪಿಸಲು ಖುಷಿಯಾಗುತ್ತಿದೆ. ಮುಂದೆಯೂ ಇದು ಮುಂದುವರಿಯಬೇಕು. ಆದರೆ ಇದೆಲ್ಲಾ ನಮ್ಮ ಕೈಯಲ್ಲಿಲ್ಲ ಎಂದರು.
ನಾವು ಕ್ರೀಡೆಯ ಪ್ರೀತಿಯಿಂದ ಕ್ರಿಕೆಟ್ ಆಡುತ್ತೇವೆ. ಆದರೆ ನಾವು ಯಾರ ವಿರುದ್ದ ಆಡುತ್ತೇವೆ ಎನ್ನುವುದು ನಮ್ಮ ಕೈಯಲ್ಲಿಲ್ಲ. ಆದರೆ ಕ್ರೀಡೆಯ ಬೆಳವಣಿಗೆಯ ಉದ್ದೇಶದಿಂದ ಭಾರತ ಪಾಕಿಸ್ಥಾನ ಕ್ರಿಕೆಟ್ ಆಡಬೇಕು ಎಂದು ಯುವರಾಜ್ ಹೇಳಿದರು.
ಭಾರತ ಪಾಕಿಸ್ಥಾನ ನಡುವೆ 2013ರಿಂದ ಯಾವುದೇ ದ್ವಿಪಕ್ಷೀಯ ಸರಣಿಗಳು ನಡೆದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
Athletics: ಕಿರಿಯರ ಏಷ್ಯನ್ ಆ್ಯತ್ಲೆಟಿಕ್ಸ್ ಜಾವೆಲಿನ್ನಲ್ಲಿ ದೀಪಾಂಶುಗೆ ಬಂಗಾರ
Gukesh: ಚಾಂಪಿಯನ್ ಗುಕೇಶ್ಗೆ ಭವ್ಯ ಸ್ವಾಗತ
MUST WATCH
ಹೊಸ ಸೇರ್ಪಡೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?