ಹರ್ಯಾಣ ಪೊಲೀಸರಿಂದ ಮಾಜಿ ಆಟಗಾರ ಯುವರಾಜ್ ಸಿಂಗ್ ಬಂಧನ!
Team Udayavani, Oct 18, 2021, 8:42 AM IST
ಚಂಡೀಗಢ: ಮಾಜಿ ಆಟಗಾರ, ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಅವರನ್ನು ಹರ್ಯಾಣ ಪೊಲೀಸರು ಬಂಧಿಸಿದ್ದಾರೆ. ಬಳಿಕ ಮಧ್ಯಂತರ ಜಾಮೀನಿನ ಮೇಲೆ ಯುವರಾಜ್ ಸಿಂಗ್ ಅವರನ್ನು ಬಿಡುಗಡೆ ಮಾಡಲಾಗಿದೆ.
2020ರಲ್ಲಿ ಲೈವ್ ವಿಡಿಯೋದಲ್ಲಿ ಜಾತಿನಿಂದನೆ ಮಾಡಿದ ಕಾರಣಕ್ಕಾಗಿ ಯುವರಾಜ್ ಸಿಂಗ್ ಅವರನ್ನು ಬಂಧಿಸಲಾಗಿದೆ. 2020ರ ಜೂನ್ ನಲ್ಲಿ ರೋಹಿತ್ ಶರ್ಮಾ ಜೊತೆ ಇನ್ಸ್ಟಾಗ್ರಾಮ್ ಲೈವ್ ವಿಡಿಯೋದಲ್ಲಿ ಯುವರಾಜ್ ಸಿಂಗ್ ಅವರು ಮಾತನಾಡುತ್ತಿದ್ದರು. ಈ ವೇಳೆ ಯುಜುವೇಂದ್ರ ಚಾಹಲ್ ಬಗ್ಗೆ ಮಾತನಾಡುವ ಭರದಲ್ಲಿ ಜಾತಿನಿಂದನೆ ಮಾಡುವಂತಹ ಶಬ್ಧವನ್ನು ಬಳಸಿದ್ದರು. ಬಳಿಕ ಇದು ವಿವಾದವಾದಾಗ ಯುವರಾಜ್ ಕ್ಷಮೆ ಕೇಳಿದ್ದರು.
“ನ್ಯಾಯಾಲಯದ ಆದೇಶದಂತೆ ಯುವರಾಜ್ ಸಿಂಗ್ ಅವರನ್ನು ಬಂಧಿಸಲಾಯಿತು ಮತ್ತು ನಂತರ ಶನಿವಾರ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು” ಎಂದು ಹರಿಯಾಣದ ಹನ್ಸಿಯ ಹಿರಿಯ ಪೊಲೀಸ್ ಅಧಿಕಾರಿ ನಿತಿಕಾ ಗಹ್ಲೌತ್ ತಿಳಿಸಿದರು. ಆದರೆ, ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ರನ್ನು ಬಂಧಿಸಲಾಗಿಲ್ಲ ಎಂದು ಯುವಿ ಅವರ ಪ್ರತಿನಿಧಿ ಶಜ್ಮೀನ್ ಕಾರಾ ಹೇಳಿದ್ದಾರೆ.
ಇದನ್ನೂ ಓದಿ:ಇಂದು ಭಾರತ-ಇಂಗ್ಲೆಂಡ್ ಅಭ್ಯಾಸ ಪಂದ್ಯ
ಫೆಬ್ರವರಿಯಲ್ಲಿ ಹರಿಯಾಣದ ದಲಿತ ಕಾರ್ಯಕರ್ತನೊಬ್ಬ ನೀಡಿದ ದೂರಿನ ಮೇರೆಗೆ, ತಾರತಮ್ಯವನ್ನು ನಿಷೇಧಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಆತನನ್ನು ಬಂಧಿಸುವಂತೆ ಕೋರಿತ್ತು. ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
“ಅಕ್ಟೋಬರ್ 6 ರಂದು, ಯುವರಾಜ್ ಸಿಂಗ್ ಅವರನ್ನು ತನಿಖೆಗೆ ಒಳಪಡಿಸಲು ಪೊಲೀಸರಿಗೆ ಸೂಚಿಸಲಾಗಿತ್ತು. ನಿನ್ನೆ ಯುವರಾಜ್ ಸಿಂಗ್ ಹಿಸಾರ್ ನಲ್ಲಿ ಪೊಲೀಸರ ಮುಂದೆ ಶರಣಾದರು, ನಂತರ ಆವನನ್ನು ಎರಡು ಮೂರು ಗಂಟೆಗಳ ಕಾಲ ಪ್ರಶ್ನಿಸಲಾಯಿತು ಮತ್ತು ನಂತರ ಬಂಧಿಸಲಾಯಿತು. ನಂತರ ಅವರನ್ನು ಜಾಮೀನು ಬಾಂಡ್ ಗಳಲ್ಲಿ ಬಿಡುಗಡೆ ಮಾಡಲಾಯಿತು” ಎಂದು ಕಾರ್ಯಕರ್ತ ರಜತ್ ಕಲ್ಸನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ