ಯುವಿ… ಕೋಟ್ಯಂತರ ಭಾರತೀಯರ ಸ್ಫೂರ್ತಿ


Team Udayavani, Jun 11, 2019, 5:46 AM IST

yuvi-7

ಭಾರತೀಯ ಕ್ರಿಕೆಟಿನ ಅಸಾಮಾನ್ಯ ಪ್ರತಿಭೆಯೊಂದು ತೆರೆಮರೆಗೆ ಸರಿದಿದೆ. ವಿಶ್ವ ಕ್ರಿಕೆಟಿನಲ್ಲಿ ಸಿಕ್ಸರ್‌ ಕಿಂಗ್‌ ಆಗಿ ಮೆರೆದಾಡಿದ, ಮಾರಕ ಕ್ಯಾನ್ಸರ್‌ ಅನ್ನೇ ಗೆದ್ದು ಬಂದ, ಭಾರತದ 2 ವಿಶ್ವಕಪ್‌ ಗೆಲುವುಗಳ ರೂವಾರಿಯೆನಿಸಿಕೊಂಡ ಅದ್ವಿತೀಯ ಹೋರಾಟಗಾರ ಯುವರಾಜ್‌ ಸಿಂಗ್‌ ಆಟ ಇನ್ನು ನೋಡಲು ಸಿಗುವುದಿಲ್ಲ.

ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬ ರಾಗಿ, ಅತ್ಯುತ್ತಮ ಎಡಗೈ ಬ್ಯಾಟ್ಸ್‌ಮನ್‌, ಆರಂಭದ ದಿನಗಳಲ್ಲಿ ಅಷ್ಟೇ ಉತ್ತಮ ಕ್ಷೇತ್ರರಕ್ಷಕನಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ ರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಯುವಿ, ಕ್ಯಾನ್ಸರ್‌ ವಿರುದ್ಧದ ಹೋರಾಟದಲ್ಲಿ ಗೆದ್ದು ಬಂದು, ಮತ್ತೆ ತಂಡಕ್ಕೆ ಕಮ್‌ ಬ್ಯಾಕ್‌ ಮಾಡಿರುವುದು ಅವರಲ್ಲಿನ ಶ್ರೇಷ್ಠ ಹೋರಾಟಗಾರ ಇದ್ದ ಎನ್ನುವುದಕ್ಕೆ ನಿದರ್ಶನ.

ಯುವರಾಜ್‌ ಸಿಂಗ್‌ ಬದುಕು ಕೇವಲ ಕ್ರಿಕೆಟಿಗೆ ಮಾತ್ರ ಸಂಬಂಧಿಸಿದ್ದಲ್ಲ. ಇವರು ಕೋಟ್ಯಂತರ ಭಾರತೀಯರಿಗೆ ಸ್ಫೂರ್ತಿ. ಬದುಕಿನಲ್ಲೂ, ಕ್ರಿಕೆಟ್‌ ಅಂಗಳದಲ್ಲೂ ಸಾಕಷ್ಟು ಏರಿಳಿತ ಕಂಡರೂ, ಯಾವುದಕ್ಕೂ ಅಂಜದೇ, ದಿಟ್ಟತನ ತೋರಿ ಸೈ ಎನಿಸಿಕೊಂಡಿರುವುದು ಸಾಮಾನ್ಯ ಸಾಧನೆಯೇನಲ್ಲ.

ಮಹೋನ್ನತ ಗೆಲುವಿನ ರೂವಾರಿ
ಯುವರಾಜ್‌ ಭಾರತೀಯ ಕ್ರಿಕೆಟ್‌ ತಂಡದ ಹಲವು ಮಹೋನ್ನತ ಗೆಲುವುಗಳಲ್ಲಿ ಪ್ರಮುಖ ರೂವಾರಿಯಾಗಿ ಗುರುತಿಸಿಕೊಂಡವರು. ಅದರಲ್ಲೂ 2011ರ ವಿಶ್ವಕಪ್‌ ಸಾಹಸವಂತೂ ಅಮೋಘ.

ಮಾರಕ ಕ್ಯಾನ್ಸರ್‌ ದಾಳಿ ನಡೆಸಿದರೂ ಹೊರ ಜಗತ್ತಿಗೆ ತಿಳಿಯದಂತೆ ಗೌಪ್ಯ ವಾಗಿಟ್ಟುಕೊಂಡು, ವೀರೋಚಿತ ಆಲ್‌ರೌಂಡರ್‌ ಆಟದ ಮೂಲಕ ಸರಣಿಶ್ರೇಷ್ಠ ಪ್ರಶಸ್ತಿಯೊಂದಿಗೆ ಭಾರತಕ್ಕೆ ದ್ವಿತೀಯ ವಿಶ್ವಕಪ್‌ ತಂದುಕೊಡುವಲ್ಲಿ ಯುವಿ ಪಾತ್ರ ಮುಖ್ಯವಾಗಿತ್ತು.

ಕೆಣಕಿದ್ದಕ್ಕೆ ಸಿಕ್ಸರ್‌ ಉತ್ತರ!
ಕ್ರಿಕೆಟ್‌ ಅಂಗಳದಲ್ಲಿ ದಾಖಲಾದ ಸಾಧನೆಗಳು ಸಾವಿರ ಕಾಲಕ್ಕೂ ಮಾಸುವುದಿಲ್ಲ. ಅದರಲ್ಲೂ 2007ರ ಟಿ-20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಯುವಿ ಇಂಗ್ಲೆಂಡಿನ ಸ್ಟುವರ್ಟ್‌ ಬ್ರಾಡ್‌ ಬೌಲಿಂಗ್‌ನಲ್ಲಿ ಒಂದೇ ಓವರ್‌ನಲ್ಲಿ ಆರು ಸಿಕ್ಸರ್‌ ಸಿಡಿಸುವುದರೊಂದಿಗೆ, ತನ್ನನ್ನು ಕೆಣಕಿದ ಆ್ಯಂಡ್ರೂé ಫ್ಲಿಂಟಾಫ್ಗೆ ತಿರುಗೇಟು ನೀಡಿರುವುದು ಇನ್ನೂ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದೇ ಉಳಿದಿದೆ.

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.