ಬಿಸಿಸಿಐ ಒಡಂಬಡಿಕೆ ಯುವರಾಜ್‌ ಸಿಂಗ್‌ ಹೊರಕ್ಕೆ?


Team Udayavani, Mar 1, 2018, 6:30 AM IST

Yuvrai-1520155.jpg

ಹೊಸದಿಲ್ಲಿ: ಬಿಸಿಸಿಐ ಶೀಘ್ರವೇ ಕ್ರಿಕೆಟಿಗರ ವಾರ್ಷಿಕ ಒಡಂಬಂಡಿಕೆಯ ಯಾದಿಯನ್ನು ಪ್ರಕಟಿಸಲಿದ್ದು, ಇದರಿಂದ ಕೆಲವು ಹಿರಿಯ ಆಟಗಾರರು ಹೊರಬೀಳುವ ಸಾಧ್ಯತೆ ಇದೆ. 

ಮುಖ್ಯವಾಗಿ ಟೀಮ್‌ ಇಂಡಿಯಾದಿಂದ ಬೇರ್ಪಟ್ಟಿರುವ ಯುವರಾಜ್‌ ಸಿಂಗ್‌ ಅವರಿಗೆ ಇದರ ಬಿಸಿ ತಟ್ಟಬಹುದು.
2019ರ ತನಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮುಂದುವರಿಯುವುದಾಗಿ ಹೇಳಿರುವ ಯುವರಾಜ್‌ ಸಿಂಗ್‌, 2017ರ ವೆಸ್ಟ್‌ ಇಂಡೀಸ್‌ ಪ್ರವಾಸದ ಬಳಿಕ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ. 

ಯುವಿ ಮುಂದಿನ ವರ್ಷದ ವಿಶ್ವಕಪ್‌ ಪಂದ್ಯಾವಳಿಯನ್ನು ಗುರಿಯಾಗಿಸಿಕೊಂಡರೂ ಈಗಿನ ಸ್ಥಿತಿಯಲ್ಲಿ ಅವರು ಮತ್ತೆ ಟೀಮ್‌ ಇಂಡಿಯಾವನ್ನು ಸೇರಿಕೊಳ್ಳುವುದು ಅಷ್ಟು ಸುಲಭವಲ್ಲ. ಭಾರತದಲ್ಲೀಗ ಯುವ ಆಟಗಾರರ ಪ್ರಮಾಣ ಜಾಸ್ತಿಯಾಗಿದ್ದು, ಅವಕಾಶ ಪಡೆದವರೆಲ್ಲರೂ ಇದನ್ನು ಬಾಚಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಯುವರಾಜ್‌ ಹಾದಿ ಸುಗಮವಲ್ಲ ಎಂದೇ ಭಾವಿಸಬೇಕಾಗುತ್ತದೆ. ಆದರೆ ಇತ್ತೀಚೆಗೆ ಸುರೇಶ್‌ ರೈನಾ ಟಿ20 ತಂಡಕ್ಕೆ ಮರಳಿದ್ದನ್ನು ಕಂಡಾಗ ಯುವಿಗೂ ಇಂಥದೊಂದು ಅವಾಕಶ ಲಭಿಸಬಹುದೇ ಎಂಬ ಪ್ರಶ್ನೆಯೊಂದು ಮೂಡಿದರೆ ಆಶ್ಚರ್ಯವಿಲ್ಲ.

ದೇಶಿ ಕ್ರಿಕೆಟ್‌ನಲ್ಲೂ ವೈಫ‌ಲ್ಯ
ಯುವರಾಜ್‌ ಸಿಂಗ್‌ ದೇಶಿ ಕ್ರಿಕೆಟ್‌ನಲ್ಲೂ ಗಮನಾರ್ಹ ಸಾಧನೆ ದಾಖಲಿಸಿಲ್ಲ. ಸಯ್ಯದ್‌ ಮುಷ್ತಾಕ್‌ ಅಲಿ ಟೂರ್ನಿಯ 9 ಪಂದ್ಯಗಳಿಂದ ಗಳಿಸಿದ್ದು ಕೇವಲ 208 ರನ್‌ ಮಾತ್ರ. ವಿಜಯ್‌ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲೂ ಯುವಿ ವಿಫ‌ಲರಾಗಿದ್ದರು (172 ರನ್‌). ದೇವಧರ್‌ ಟ್ರೋಫಿ ಪಂದ್ಯಾವಳಿಯ ಯಾವ ತಂಡದಲ್ಲೂ ಯುವರಾಜ್‌ ಕಾಣಿಸಿಕೊಂಡಿಲ್ಲ. ಇದನ್ನೆಲ್ಲ ಗಮನಿಸಿದಾಗ ಬಿಸಿಸಿಐ ಒಡಂಬಡಿಕೆ ವ್ಯಾಪ್ತಿಯಿಂದಲೂ ಈ ಹಿರಿಯ ಸವ್ಯಸಾಚಿ ಹೊರಗುಳಿಯುವುದು ಬಹುತೇಖ ಖಚಿತ ಎಂದೇ ಹೇಳಬೇಕಾಗುತ್ತದೆ. ಕಳೆದ ಋತುವಿನ ಒಡಂಬಡಿಕೆಯಲ್ಲಿ ಯುವರಾಜ್‌ “ಬಿ ಗ್ರೇಡ್‌’ನಲ್ಲಿ ಸ್ಥಾನ ಸಂಪಾದಿಸಿದ್ದರು.

ಟರ್ಬನೇಟರ್‌ ಖ್ಯಾತಿಯ ಹರ್ಭಜನ್‌ ಸಿಂಗ್‌ ಕೂಡ ಇತ್ತೀಚಿನ ಕೆಲವು ವರ್ಷಗಳಿಂದ ಸುದ್ದಿಯಲ್ಲಿಲ್ಲ. 37ರ ಹರೆಯದ ಭಜ್ಜಿ 2016ರ ಬಳಿಕ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿಲ್ಲ. ಕಳೆದ ಸಾಲಿನಲ್ಲೇ ಹರ್ಭಜನ್‌ ಅವರನ್ನು ಒಡಂಬಡಿಕೆಯ ವ್ಯಾಪ್ತಿಯಿಂದ ಕೈಬಿಡಲಾಗಿತ್ತು. ಈ ಬಾರಿ ಮರಳುವ ಯಾವುದೇ ಸಾಧ್ಯತೆ ಇಲ್ಲ.

“ಸಿ’ ಗ್ರೇಡ್‌ನ‌ಲ್ಲಿದ್ದ ಆಶಿಷ್‌ ನೆಹ್ರಾ ಈಗಾಗಲೇ ವಿದಾಯ ಹೇಳಿದ್ದಾರೆ. ಹಾಗೆಯೇ ಅಂಬಾಟಿ ರಾಯುಡು, ಅಮಿತ್‌ ಮಿಶ್ರಾ, ಜಯಂತ್‌ ಯಾದವ್‌, ಮನ್‌ದೀಪ್‌ ಸಿಂಗ್‌ ಮುಂದುವರಿಯುವ ಬಗ್ಗೆ ಅನುಮಾನವಿದೆ. ಇವರ ಸ್ಥಾನದಲ್ಲಿ ಇತ್ತೀಚಿನ ಅಂಡರ್‌-19 ವಿಶ್ವಕಪ್‌ನಲ್ಲಿ ಮಿಂಚಿದ ಯುವ ಆಟಗಾರರು ಕಾಣಿಸಿಕೊಳ್ಳಬಹುದು.

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.