RCB ಮೇಲೆ ತುಂಬಾ ಸಿಟ್ಟು ಬಂದಿತ್ತು..: ಮನ ಬಿಚ್ಚಿ ಮಾತನಾಡಿದ ಯುಜಿ ಚಾಹಲ್


Team Udayavani, Jul 16, 2023, 12:32 PM IST

ಆರ್ ಸಿಬಿ ಮೇಲೆ ತುಂಬಾ ಸಿಟ್ಟು ಬಂದಿತ್ತು..: ಮನ ಬಿಚ್ಚಿ ಮಾತನಾಡಿದ ಯುಜಿ ಚಾಹಲ್

ಮುಂಬೈ: ಐಪಿಎಲ್ ನ ಪ್ರಸಿದ್ದ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯಲ್ಲಿ ಸುಮಾರು ಎಂಟು ವರ್ಷ ಆಡಿದ್ದ ಲೆಗ್ ಸ್ಪಿನ್ನರ್ ಯುಜಿವೇಂದ್ರ ಚಾಹಲ್ ಅವರು ಸದ್ಯ ರಾಜಸ್ಥಾನ ರಾಯಲ್ಸ್ ಪರವಾಗಿ ಆಡುತ್ತಿದ್ದಾರೆ. 2022ರ ಹರಾಜಿನಲ್ಲಿ ಆರ್ ಸಿಬಿಯು ಚಾಹಲ್ ಅವರನ್ನು ಕೈಬಿಟ್ಟು ಲಂಕಾದ ಸ್ಪಿನ್ನರ್ ವಾನಿಂದು ಹಸರಂಗ ಅವರನ್ನು ಖರೀದಿ ಮಾಡಿತ್ತು.

ಆರ್ ಸಿಬಿ ತಂಡದಿಂದ ಹೊರಬಂದ ಬಳಿಕ ಚಾಹಲ್ ರಾಜಸ್ಥಾನ ತಂಡದ ಪರ ಅದ್ಭುತ ಪ್ರದರ್ಶನ ಮುಂದುವರಿಸಿದ್ದರು. ಇದೀಗ ತನ್ನನ್ನು ಬೆಂಗಳೂರು ಫ್ರಾಂಚೈಸಿ ಕಡೆಗಣಿಸಿದರ ಬಗ್ಗೆ ಲೆಗ್ಗಿ ಹೇಳಿಕೊಂಡಿದ್ದಾರೆ.

ದಿ ರಣ್ವೀರ್ ಶೋ ಕಾರ್ಯಕ್ರಮದಲ್ಲಿ ಮಾತನಾಡಿದ ಯುಜಿ, ನನ್ನು ತಂಡದಿಂದ ಕೈಬಿಡುವಾಗ ಯಾರೊಬ್ಬರೂ ಏನೂ ಹೇಳಿಲ್ಲ. ಸರಿಯಾದ ಸಂವಹನವೇ ನಡೆದಿಲ್ಲ. ನನಗೆ ಫ್ರಾಂಚೈಸಿ ಬಗ್ಗೆ ಸಿಟ್ಟ ಬಂದಿತ್ತು ಎಂದಿದ್ದಾರೆ.

“ನಾನು ಆರ್ ಸಿಬಿ ಗಾಗಿ ಸುಮಾರು 140 ಪಂದ್ಯಗಳನ್ನು ಆಡಿದ್ದೇನೆ, ಆದರೆ ನನ್ನ ಜೊತೆ ಸರಿಯಾಗಿ ಮಾತುಕತೆ ನಡೆಸಿಲ್ಲ. ಅವರು ಹರಾಜಿನಲ್ಲಿ ನನಗಾಗಿ ಎಲ್ಲವನ್ನೂ ಮಾಡುತ್ತಾರೆ ಎಂದು ಅವರು ನನಗೆ ಭರವಸೆ ನೀಡಿದರು. ಅದರ ನಂತರ ನನಗೆ ತುಂಬಾ ಕೋಪ ಬಂದಿತು, ನಾನು 8 ವರ್ಷಗಳ ಕಾಲ ಅವರಿಗಾಗಿ ಆಡಿದ್ದೇನೆ. ಚಿನ್ನಸ್ವಾಮಿ ಸ್ಟೇಡಿಯಂ ನನ್ನ ಅಚ್ಚುಮೆಚ್ಚಿನ ಗ್ರೌಂಡ್” ಎಂದು ರಣವೀರ್ ಅಲ್ಲಾಬಾಡಿಯಾ ಶೋನಲ್ಲಿ ಹೇಳಿಕೊಂಡಿದ್ದಾರೆ.

ಕೆಲವರು ನಾನು ಹೆಚ್ಚು ಹಣ ಡಿಮ್ಯಾಂಡ್ ಮಾಡಿದ್ದೇನೆ ಎಂದು ಹೇಳುತ್ತಾರೆ. ಆದರೆ ನಾನು ಯಾವ ಹಣವನ್ನೂ ಕೇಳಲಿಲ್ಲ. ನನಗೆ ನನ್ನ ಯೋಗ್ಯತೆ ಬಗ್ಗೆ ಗೊತ್ತು. ಐಪಿಎಲ್ ಆರಂಭವಾಗಿ ಅವರ ಜೊತೆಗಿನ ಮೊದಲ ಪಂದ್ಯದಲ್ಲೂ ನಾನು ಆರ್ ಸಿಬಿ ಕೋಚ್ ಗಳ ಜತೆ ಮಾತನಾಡಲಿಲ್ಲ. ಬಳಿಕ ಹರಾಜಿನಲ್ಲಿ ಏನು ಬೇಕಾದರೂ ಸಂಭವಿಸಬಹುದು ಎಂದು ನಾನು ಅರ್ಥಮಾಡಿಕೊಂಡೆ ಎಂದು ಚಾಹಲ್ ಹೇಳಿದರು.

2022ರ ರಾಜಸ್ತಾನ ರಾಯಲ್ಸ್ ಪರ ಆಡಿದ ಯುಜಿ ಚಾಹಲ್ 27 ವಿಕೆಟ್ ಕಿತ್ತು ಸೀಸನ್ ನ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ ಎಂಬ ಸಾಧನೆ ಮಾಡಿದ್ದರು.

ಟಾಪ್ ನ್ಯೂಸ್

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.