Zimbabwe; ಕ್ಯಾನ್ಸರ್ ಹೋರಾಟದಲ್ಲಿ ಕೊನೆಯುಸಿರೆಳೆದ ದಿಗ್ಗಜ ಆಲ್ ರೌಂಡರ್ ಹೀತ್ ಸ್ಟ್ರೀಕ್


Team Udayavani, Sep 3, 2023, 12:52 PM IST

Zimbabwe; ಕ್ಯಾನ್ಸರ್ ಹೋರಾಟದಲ್ಲಿ ಕೊನೆಯುಸಿರೆಳೆದ ದಿಗ್ಗಜ ಆಲ್ ರೌಂಡರ್ ಹೀತ್ ಸ್ಟ್ರೀಕ್

ಹರಾರೆ: ಜಿಂಬಾಬ್ವೆ ತಂಡದ ಮಾಜಿ ನಾಯಕ, ದಿಗ್ಗಜ ಆಲೌ ರೌಂಡರ್ ಹೀತ್ ಸ್ಟ್ರೀಕ್ ಅವರು ಇಂದು (ಸೆ.03) ಕೊನೆಯುಸಿರೆಳೆದಿದ್ದಾರೆ. ಹಲವು ಕಾಲದಿಂದ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸುತ್ತಿದ್ದ ಸ್ಟ್ರೀಕ್ ಇಂದು ಅಸುನೀಗಿದ್ದಾರೆ ಎಂದು ವರದಿ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಹೀತ್ ಸ್ಟ್ರೀಕ್ ಅವರು ನಿಧನರಾಗಿದ್ದಾರೆ ಎಂದು ಸುಳ್ಳು ಸುದ್ದಿ ಹರಿದಾಡಿತ್ತು. ಬಳಿಕ ಮಾಜಿ ಜಿಂಬಾಬ್ವೆ ಆಟಗಾರ ಹೆನ್ರಿ ಒಲಾಂಗ ಅವರು ಸ್ಪಷ್ಟನೆ ನೀಡಿ ಸುದ್ದಿಯನ್ನು ಅಲ್ಲಗಳೆದಿದ್ದರು. ಆದರೆ ಇದೀಗ ಸ್ಟ್ರೀಕ್ ನಿಧನದ ಸುದ್ದಿಯನ್ನು ಅವರ ಪತ್ನಿಯೇ ಖಚಿತಪಡಿಸಿದ್ದಾರೆ.

ಈ ಸುದ್ದಿಯನ್ನು ಖಚಿತಪಡಿಸಲು ಪತ್ನಿ ನಾಡಿನ್ ಸ್ಟ್ರೀಕ್ ತಮ್ಮ ಫೇಸ್‌ಬುಕ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

“ಈ ಮುಂಜಾನೆ, 3 ನೇ ಸೆಪ್ಟೆಂಬರ್ 2023 ರ ಭಾನುವಾರದಂದು, ನನ್ನ ಜೀವನದ ಅತ್ಯಂತ ದೊಡ್ಡ ಪ್ರೀತಿ ಮತ್ತು ನನ್ನ ಸುಂದರ ಮಕ್ಕಳ ತಂದೆ, ತಮ್ಮ ಮನೆಯಿಂದ ದೇವತೆಗಳ ಜೊತೆಯಲ್ಲಿರಲು ಕೊಂಡೊಯ್ಯಲ್ಪಟ್ಟರು. ಅಲ್ಲಿ ಅವರು ತಮ್ಮ ಕೊನೆಯ ದಿನಗಳನ್ನು ಕಳೆಯಲು ಬಯಸಿದ್ದರು. ಅವರು ಏಕಾಂಗಿಯಾಗಿ ಹೋಗಲಿಲ್ಲ, ಅವರು ಪ್ರೀತಿ ಮತ್ತು ಶಾಂತಿಯಿಂದ ಆವರಿಸಿದದ್ದರು” ಎಂದು ಅವರು ಬರೆದಿದ್ದಾರೆ.

ಸ್ಟ್ರೀಕ್ ಜಿಂಬಾಬ್ವೆ ಅವರ ಆಡಿದ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು. 65 ಟೆಸ್ಟ್‌ಗಳು ಮತ್ತು 189 ಏಕದಿನ ಪಂದ್ಯಗಳಲ್ಲಿ, ಸ್ಟ್ರೀಕ್ 455 ವಿಕೆಟ್‌ ಗಳನ್ನು ಪಡೆದಿದ್ದಾರೆ. 23 ಬಾರಿ ನಾಲ್ಕು-ವಿಕೆಟ್‌ ಗಳ ಮತ್ತು ಎಂಟು ಐದು-ವಿಕೆಟ್‌ ಗಳ ಗೊಂಚಲು ಪಡೆದ ಸಾಧನೆ ಅವರದ್ದು.

ಬ್ಯಾಟಿಂಗ್ ನಲ್ಲೂ ಪ್ರದರ್ಶನ ತೋರಿದ್ದ ಸ್ಟ್ರೀಕ್ ಟೆಸ್ಟ್ ಮತ್ತು ಏಕದಿನಗಳಲ್ಲಿ ಕ್ರಮವಾಗಿ 1990 ಮತ್ತು 2943 ರನ್ ಗಳಿಸಿದರು. ಅವರು ಒಂದು ಶತಕ ಮತ್ತು 24 ಅರ್ಧ ಶತಕಗಳನ್ನು ಬಾರಿಸಿದ್ದಾರೆ.

1993 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಸ್ಟ್ರೀಕ್ ಅವರು 2005 ರವರೆಗೆ ಆಡಿದರು. ಜಿಂಬಾಬ್ವೆಗಾಗಿ ಅವರ ಕೊನೆಯ ಮತ್ತು ಅಂತಿಮ ಅಂತಾರಾಷ್ಟ್ರೀಯ ಪ್ರದರ್ಶನವು ಸೆಪ್ಟೆಂಬರ್ 2005 ರಲ್ಲಿ ಹರಾರೆ ಸ್ಪೋರ್ಟ್ಸ್ ಕ್ಲಬ್‌ ನಲ್ಲಿ ಭಾರತದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನಡೆದಿತ್ತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.