ರಾಜ್ಯದಲ್ಲಿ 1.15 ಲಕ್ಷ ಜನ ಕ್ವಾರಂಟೈನ್‌


Team Udayavani, May 24, 2020, 7:32 AM IST

rajya-1

ಬೆಂಗಳೂರು: ಕೊರೊನಾ ಲಾಕ್‌ಡೌನ್‌ ಸಡಿಲಿಕೆಯಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, 1,15,558 ಜನರನ್ನು ಸರ್ಕಾರ ಅಧಿಕೃತ ಕ್ವಾರಂಟೈನ್‌ ಮಾಡಿದೆ. ಕಲಬುರ್ಗಿಯಲ್ಲಿ ಅತಿ ಹೆಚ್ಚು 30,707 ಜನರನ್ನು ಸಾಂಸ್ಥಿಕ  ಕ್ವಾರಂಟೈನ್‌ ಮಾಡಲಾಗಿದೆ. ನಂತರದ ಸ್ಥಾನದಲ್ಲಿ ವಿಜಯಪುರ 13,516, ಯಾದಗಿರಿಯಲ್ಲಿ 12,854 ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಅಂದರೆ ಕೇವಲ 61 ಜನರನ್ನುಕ್ವಾರಂಟೈನ್‌  ಮಾಡಲಾಗಿದ್ದು, ಬೆಂಗಳೂ ರು ಗ್ರಾಮಾಂತರ 192 ಹಾಗೂ ದಾವಣಗೆರೆ 231 ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ.

ಕ್ವಾರಂಟೈನ್‌ ಸಮಸ್ಯೆ: ಹೊರ ರಾಜ್ಯಗಳಿಂದ ಬರುವ ವಲಸೆ ಕಾರ್ಮಿಕರು, ಪ್ರವಾಸಿಗರು ಹಾಗೂ ವಿದ್ಯಾರ್ಥಿ  ಗಳನ್ನು ಕಡ್ಡಾಯ ಕ್ವಾರಂಟೈನ್‌ಗೆ ಒಳಪಡಿಸಲು ನಿಗದಿಪಡಿಸಿದ ಆಸ್ಪತ್ರೆಗಳು ಸಾಲದಂತಾಗಿದೆ. ಹಿಂದುಳಿ ದ ವರ್ಗದ  ಇಲಾಖೆ ಹಾಗೂ ಸಮಾಜಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತ ಇಲಾಖೆಗೆ ಸಂಬಂಧಿಸಿರುವ ಹಾಸ್ಟೆಲ್‌ ಗಳನ್ನು ಹಾಗೂ ಸರ್ಕಾರಿ ಶಾಲೆಗಳನ್ನು ಕ್ವಾರಂಟೈನ್‌ ಕೇಂದ್ರಗಳನ್ನಾಗಿ ಪರಿವರ್ತಿಸಿದ್ದು, ನಗರ ಪ್ರದೇಶ, ತಾಲೂಕು ಕೇಂದ್ರಗಳು  ಹಾಗೂ ಹೋಬಳಿ ಮಟ್ಟದಲ್ಲಿರುವ ಹಾಸ್ಟೇಲ್‌ಗ‌ಳು, ಸಮುದಾಯ ಭವನಗ ಳಲ್ಲಿಯೂ ಕ್ವಾರಂಟೈನ್‌ ಮಾಡಿದರೂ ಕೆಲವು ಜಿಲ್ಲೆಗಳಲ್ಲಿ ಜಾಗ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ರಾಜ್ಯ ಸರ್ಕಾರಕ್ಕೆ ಕ್ವಾರಂಟೈನ್‌ ಮಾಡುವುದೇ  ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಬೀದರ್‌, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ವಲಸಿಗರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಿದ್ದು ಈ ಜಿಲ್ಲೆಗಳಲ್ಲಿ ಪ್ರತಿ ದಿನ 2 ರಿಂದ 3 ಸಾವಿರ ಜನರು ವಲಸಿಗರು  ಆಗಮಿಸು ತ್ತಿದ್ದು, ಅವರೆಲ್ಲರನ್ನೂ ಕಡ್ಡಾಯವಾಗಿ ಕ್ವಾರಂಟೈನ್‌ ಮಾಡುವುದು ಜಿಲ್ಲಾಡಳಿತಗಳಿಗೂ ಸವಾಲಾಗಿದೆ. ಈ ನಡುವೆ ಸರ್ಕಾರ ಗರ್ಭಿಣಿಯರು, 10 ವರ್ಷದ ಒಳಗಿನ ಮಕ್ಕಳು, 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಕ್ಯಾನ್ಸರ್‌, ಕಿಡ್ನಿ ವೈಫಲ್ಯದಂತಹ ಗಂಭೀರ ರೋಗ  ಗಳಿಂದ ಬಳಲುತ್ತಿರುವ ರೋಗಿಗಳನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸದೆ ಅವರನ್ನು ಮನೆಗೆ ಕಳುಹಿಸಿ ಹೋಮ್‌ ಕ್ವಾರಂಟೈನ್‌ಗೆ ಒಳಗಾಗುವಂತೆ ಸೂಚಿಸಲಾಗುತ್ತಿದೆ.

ಕ್ವಾರಂಟೈನ್‌ ಅವಧಿ ಕಡಿತ: ಹೊರ ರಾಜ್ಯಗಳಿಂದ ಬರುವವರನ್ನು 14 ದಿನ ಕ್ವಾರಂಟೈನ್‌ ಮಾಡಲು ಕಷ್ಟವಾಗುತ್ತಿರುವುದರಿಂದ ವಿಶೇಷವಾಗಿ ಹೆಚ್ಚು ಕೊರೊನಾ ಸೋಂಕಿತರಿರುವ ರಾಜ್ಯಗಳಾದ ದೆಹಲಿ, ಮಹಾರಾಷ್ಟ್ರ, ತಮಿಳುನಾಡು, ಗುಜರಾತ್‌, ರಾಜಸ್ಥಾನ, ಹಾಗೂ ಮಧ್ಯಪ್ರದೇಶಗಳಿಂದ ಆಗಮಿಸುವ ವಲಸಿಗರನ್ನು 14 ದಿನಗಳ ಬದಲು 7 ದಿನ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಿ, 7 ದಿನ ಹೋಮ್‌ ಕ್ವಾರಂಟೈನ್‌ ಮಾಡಲು ಸರ್ಕಾರ ತೀರ್ಮಾನಿಸಿದೆ. ಹಾಗೂ  ವ್ಯಾಪಾರದ ಮೇಲೆ ಪ್ರವಾಸ ಮಾಡುವವರು ಐಸಿಎಂಆರ್‌ ಗುರುತಿಸಿರುವ ಆಸ್ಪತ್ರೆಗಳಿಂದ ತಪಾಸಣೆ ವರದಿ ಪಡೆದುಕೊಂಡರೆ ಅಂಥವರನ್ನು ಯಾವುದೇ ಕ್ವಾರಂಟೈನ್‌ಗೆ ಒಳಪಡಿಸದಿರಲು ಸರ್ಕಾರ ನಿರ್ಧರಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.