ಶೀಘ್ರ 1ಲಕ್ಷ ಪೊಲೀಸರ ಭರ್ತಿ: ಎಂ.ಬಿ.ಪಾಟೀಲ್
Team Udayavani, Jun 24, 2019, 3:00 AM IST
ಮುದ್ದೇಬಿಹಾಳ: ಎಲ್ಲ ಠಾಣೆಗಳಲ್ಲಿ ಪೊಲೀಸರ ಕೊರತೆ ಇದ್ದು, ಇದನ್ನು ನೀಗಿಸಲು ಶೀಘ್ರವೇ 1 ಲಕ್ಷ ಪೊಲೀಸರನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಈಗಾಗಲೇ ಸ್ಕೇರ್ಸಿಟಿ ಯೋಜನೆಯಡಿ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಪ್ರಗತಿಯಲ್ಲಿದೆ. ಮೈಸೂರು, ಹುಬ್ಬಳ್ಳಿ, ಧಾರವಾಡ, ಮಂಗಳೂರು ನಗರಗಳನ್ನೂ ಈ ಯೋಜನೆಯಡಿ ಸೇರಿಸಲು ಪ್ರಸ್ತಾವನೆ ಕಳಿಸಲಾಗಿದೆ.
ಬ್ರಿಟಿಷರು, ರಾಜ ಮಹಾರಾಜರ ಕಾಲದಲ್ಲಿದ್ದ ಪೊಲೀಸ್ ಬ್ಯಾಂಡ್ ಸೇವೆ ನಶಿಸುತ್ತಿದ್ದು, ಇದನ್ನು ಉಳಿಸಿ ಪ್ರೋತ್ಸಾಹಿಸಲು ಮತ್ತು ಬ್ಯಾಂಡ್ಗೆ ಉತ್ತೇಜನ ಕೊಡಲು ಭತ್ಯೆ ನೀಡುವ ಚಿಂತನೆ ನಡೆದಿದೆ ಎಂದರು. ಔರಾದ್ಕರ್ ಸಮಿತಿ ವರದಿಯ ಅನುಷ್ಠಾನ ಕಾರ್ಯ ರೂಪದಲ್ಲಿದ್ದು, ಬೇಡಿಕೆ ಈಡೇರಿಸಲು 830 ಕೋಟಿ ರೂ.ಆರ್ಥಿಕ ಹೊರೆ ಆಗುತ್ತದೆ.
ಈ ಬಗ್ಗೆ ಅಂತಿಮ ರೂಪ ನೀಡಲು ಸಿಎಂ 15 ದಿನಗಳ ಕಾಲಾವಕಾಶ ನೀಡಿದ್ದಾರೆ. ಗೃಹ ಮತ್ತು ಹಣಕಾಸು ಇಲಾಖೆ ನಡುವೆ ಚರ್ಚೆ ಪ್ರಗತಿಯಲ್ಲಿದ್ದು, 8-10 ದಿನಗಳಲ್ಲಿ ಅಂತಿಮಗೊಂಡು 15-20 ದಿನಗಳಲ್ಲಿ ಪೊಲೀಸರಿಗೆ ಸಿಹಿ ಸುದ್ದಿ ಸಿಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ