ನಾವು ವಿಶ್ವ ಕನ್ನಡಿಗರು ಒಕ್ಕೂಟದಿಂದ ಸಿಎಂ ಪರಿಹಾರ ನಿಧಿಗೆ 10 ಲಕ್ಷ ರೂ. ದೇಣಿಗೆ


Team Udayavani, May 31, 2020, 1:31 PM IST

ನಾವು ವಿಶ್ವ ಕನ್ನಡಿಗರು ಒಕ್ಕೂಟದಿಂದ ಸಿಎಂ ಪರಿಹಾರ ನಿಧಿಗೆ 10 ಲಕ್ಷ ರೂ. ದೇಣಿಗೆ

ಅಮೆರಿಕದ ಕನ್ನಡ ಒಕ್ಕೂಟ ಆಯೋಜಿಸಿದ್ದ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಾಲ್ಗೊಂಡರು

ಬೆಂಗಳೂರು: ಕೋವಿಡ್-19 ಸೋಂಕು ನಿಭಾಯಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಭಾರತದಲ್ಲಿರುವ ನಿಮ್ಮವರ ಕಾಳಜಿ ರಕ್ಷಣೆ ಬಗ್ಗೆ ಆತಂಕ ಬೇಡ ನಮ್ಮ ಸರ್ಕಾರ ಇದೆ. ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಅಮೆರಿಕದಲ್ಲಿರುವ ಅನಿವಾಸಿ ಕನ್ನಡಿಗರಿಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.

ನಾವು ವಿಶ್ವ ಕನ್ನಡಿಗರು (ನಾವಿಕ) ಅಮೆರಿಕದ ಕನ್ನಡ ಒಕ್ಕೂಟ ಆಯೋಜಿಸಿದ್ದ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಾವಿಕದ ಬಂಧುಗಳು ನೀಡಿರುವ 10 ಲಕ್ಷ ರೂ. ದೇಣಿಗೆಗೆ ಸರ್ಕಾರದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಕೋವಿಡ್ ಲಾಕ್‌ಡೌನ್‌, ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಸಂದರ್ಭದಲ್ಲಿ ಅಮೆರಿಕದಲ್ಲಿರುವ ನಮ್ಮವರಿಗೆ ಧೈರ್ಯ ಹೇಳಿ, ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿರುವ ನಾವಿಕ ಬಳಗಕ್ಕೆ ಅಭಿನಂದನೆ. ವೀಡಿಯೋ ಕಾನ್ಫರೆನ್ಸ್ ಮೂಲಕ ‘ನಾವಿಕ’, ಅಮೆರಿಕ ಕನ್ನಡಿಗರ ಕೈ ಹಿಡಿಯುತ್ತಿದೆ. ಪರಿಣಿತರಿಂದ ಕೋವಿಡ್ ಮಾಹಿತಿ, ಮುನ್ನೆಚ್ಚರಿಕಾ ಸಲಹೆಗಳನ್ನು ನೀಡುತ್ತಿರುವುದು ಒಳ್ಳೆಯ ಕೆಲಸ.  ಸೋಂಕು ದೀರ್ಘಕಾಲ ನಮ್ಮೊಂದಿಗೆ ಇರುವುದರಿಂದ ಆರೋಗ್ಯ, ಆರ್ಥಿಕ ಸಮಸ್ಯೆ ಎದುರಿಸಲು ಪರಸ್ಪರ ಸಹಕಾರ ಬಹಳ ಮುಖ್ಯ.  ಇಂಥ ಸನ್ನಿವೇಶದಲ್ಲಿ ನಮ್ಮ ಬೆಂಬಲ ನಿಮಗೆ ಸದಾ ಇರುತ್ತದೆ. ಇಲ್ಲಿರುವ ನಿಮ್ಮ ಆಪ್ತರ ರಕ್ಷಣೆ ನಮ್ಮ ಜವಾಬ್ದಾರಿಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಲಾಗುತ್ತಿದೆ.  ಮೂಲಸೌಕರ್ಯದ ಕೊರತೆಯನ್ನು ಹಿಮ್ಮೆಟ್ಟಿ ಇಡೀ ವಿಶ್ವದ ಗಮನ ಸೆಳೆದಿರುವ ಭಾರತ, ಇಂದು ಇತರ ರಾಷ್ಟ್ರಗಳಿಗೆ ಪ್ರೇರಣೆ ನೀಡುವಂತಾಗಿದೆ. ನಿಮ್ಮ ಜನ್ಮಭೂಮಿ ಬಗ್ಗೆ ಹೆಮ್ಮೆ ಪಡುವಂತ ಕೆಲಸ ಆಗುತ್ತಿದೆ‌‌ ಎಂದು ಹೇಳಿದರು.

ಲಾಕ್‌ಡೌನ್‌ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಕಲ್ಪಿಸಲಾಗಿದೆ.  ವೈರಾಣು ಪತ್ತೆ ಪ್ರಯೋಗಾಲಯದ ಸಂಖ್ಯೆ 3 ತಿಂಗಳ ಅವಧಿಯಲ್ಲಿ 2ರಿಂದ 60ಕ್ಕೆ ಹೆಚ್ಚಿಸಲಾಗಿದೆ. ಪಿಪಿಇ ಕಿಟ್‌, ಎನ್‌ 95 ಮಾಸ್ಕ್‌, ವೆಂಟಿಲೇಟರ್‌ಗಳ ತಯಾರಿಕೆಯಲ್ಲಿ ಸ್ವಾಲಂಬನೆ ಸಾಧಿಸಿ, ಬೇರೆ ದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಬೆಳೆದಿದ್ದೇವೆ. ತಂತ್ರಜ್ಞಾನ ಬಳಸಿಕೊಂಡು ಆರೋಗ್ಯ ಸಿಬ್ಬಂದಿ ಕೊರತೆ ನೀಗಿಸಲಾಗಿದೆ. ಟೆಲಿಮೆಡಿಸನ್‌, ಟೆಲಿಕನ್ಸಲ್ಟೇಷನ್‌ ಮೂಲಕ ವೈದ್ಯಕೀಯ ಸಲಹೆ ನೀಡಲಾಗುತ್ತಿದೆ. ರಿಮೋಟ್‌ ಐಸಿಯು ವ್ಯವಸ್ಥೆ ಇದೆ. ಜತೆಗೆ ಹೊಸ ಟೆಸ್ಟಿಂಗ್ ವಿಧಾನ, ಹೊಸ ಉಪಕರಣಗಳ ಸಂಶೋಧನೆಗೆ ಪ್ರೋತ್ಸಾಹ ನೀಡಲಾಗುತ್ತಿದೆ,”ಎಂದು ಮಾಹಿತಿ ನೀಡಿದರು.

ಲಾಕ್‌ಡೌನ್‌ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗಿಲ್ಲ. ಮುಂದೆಯೂ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಲಾಗಿದೆ. ಗ್ರಾಮ, ತಾಲೂಕು, ಜಿಲ್ಲಾ ಮಟ್ಟದಲ್ಲೂ ಆರೋಗ್ಯ ಸಮೀಕ್ಷೆ ನಡೆಸಿ ಆ ಮಾಹಿತಿಯನ್ನು ಡಿಜಿಟಲೈಸ್‌ ಮಾಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.