ಮಳೆ ಕೊರತೆಯಿಂದ 10 ಲಕ್ಷ ಹೆಕ್ಟೇರ್‌ ಬೆಳೆ ಹಾನಿ


Team Udayavani, Sep 25, 2017, 9:42 AM IST

25-STATE-8.jpg

ಬೆಂಗಳೂರು: ಸತತ ಮೂರು ವರ್ಷ ಬರದಿಂದ ಬಳಲುತ್ತಿದ್ದ ರಾಜ್ಯದಲ್ಲಿ ಈ ಬಾರಿ ವಾಡಿಕೆ ಮಳೆಯಾಗಿದೆ. ಆದಾಗ್ಯೂ ಮಳೆ ಕೊರತೆಯಿಂದ ಹತ್ತು ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆ ಭಾಗಶಃ ಹಾನಿಯಾಗಿದೆ. 

ರಾಜ್ಯಾದ್ಯಂತ ವಾಡಿಕೆ ಮಳೆಯಿಂದ ಪ್ರಮುಖ ಜಲಾಶಯಗಳು ಭರ್ತಿಯಾಗುತ್ತಿವೆ. ಕುಡಿಯುವ ನೀರಿನ ಬವಣೆಯೂ ನೀಗಿದೆ. ಆದರೆ, ಕೃಷಿ ಕ್ಷೇತ್ರದ ಮೇಲಿನ ಬರದ ಛಾಯೆ ಮಾತ್ರ ಸಂಪೂರ್ಣವಾಗಿ ಸರಿದಿಲ್ಲ. ಸಕಾಲದಲ್ಲಿ ಮಳೆಯಾಗದಿದ್ದರಿಂದ ಒಟ್ಟಾರೆ ಬಿತ್ತನೆ ಪ್ರದೇಶದಲ್ಲಿ ಶೇ. 20ರಷ್ಟು ಬೆಳೆ ಬಾಧಿತ ವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಇದುವರೆಗೆ 60.46 ಲಕ್ಷ ಹೆಕ್ಟೇರ್‌
ಪ್ರದೇಶದಲ್ಲಿ ಬಿತ್ತನೆಯಾಗಿದೆ. ಈ ಪೈಕಿ 10.60 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ದ ಬೆಳೆ ಮಳೆ ಅಭಾವದಿಂದ ಬಾಧಿತವಾಗಿದೆ ಎಂದು ಕೃಷಿ ಇಲಾಖೆ ಅಂದಾಜು ಮಾಡಿದೆ.  ಈ ಮಧ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ, 9 ಲಕ್ಷ ಹೆಕ್ಟೇರ್‌ ಬಿತ್ತನೆ ಪ್ರಮಾಣ ಕೂಡ ಕಡಿಮೆ ಯಾಗಿದೆ. ಇದೆಲ್ಲದರ ಪರಿಣಾಮ ವಾಡಿಕೆ ಮಳೆ ನಡುವೆಯೂ ಉತ್ಪಾದನೆ ಗಣನೀಯ ವಾಗಿ ಕುಂಠಿತಗೊಳ್ಳುವ ಸಾಧ್ಯತೆ ಇದೆ. ಒಂದು
ವೇಳೆ ಮಳೆ ಇದೇ ರೀತಿ ಮುಂದುವರಿದರೆ, ಕೊಂಚ ಚೇತರಿಸಿಕೊಳ್ಳುವ ಸಾಧ್ಯತೆಯಿದೆ ಎಂದೂ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ದುಪ್ಪಟ್ಟು ನಷ್ಟ; ರೈತರ ಅಳಲು: ಮಳೆಯ ಕಣ್ಣಾಮುಚ್ಚಾಲೆಯಿಂದ ರೈತರಿಗೆ ದುಪ್ಪಟ್ಟು ನಷ್ಟವಾಗಿದೆ. ಆರಂಭದಲ್ಲಿ ಉತ್ತಮ ಮಳೆಯಾ ಯಿತು. ಹವಾಮಾನ ತಜ್ಞರು ಕೂಡ ವಾಡಿಕೆ ಮಳೆ ಮುನ್ಸೂಚನೆ ನೀಡಿದರು. ಈ ಹಿನ್ನೆಲೆ ಯಲ್ಲಿ ರೈತರು ಸಾಲ ಮಾಡಿ, ಬಿತ್ತನೆ ಬೀಜ, ಗೊಬ್ಬರ ತಂದು ಬಿತ್ತನೆ ಮಾಡಿದರು. ಆದರೆ, ಅದು ಹೂವು ಬಿಡುವ ಅಥವಾ ಕಾಯಿಕಟ್ಟುವ ಸಂದರ್ಭದಲ್ಲೇ ಮಳೆ ಕೈಕೊಟ್ಟಿತು. ಪರಿಣಾಮ ಬೆಳೆ ಒಣಗಲು ಶುರುವಾಯಿತು. ಈಗ ಸಾಕಷ್ಟು ಮಳೆಯಾಗಿದ್ದರೂ ನಿರೀಕ್ಷಿತ ಪ್ರಮಾಣದ ಇಳುವರಿ ಬರುವುದಿಲ್ಲ ಎಂದು ವಿವಿಧ ಜಿಲ್ಲೆಗಳ ರೈತರು ಅಲವತ್ತುಕೊಳ್ಳುತ್ತಾರೆ.

ಕೃಷಿ ಇಲಾಖೆ ಅಂಕಿ-ಅಂಶಗಳ ಪ್ರಕಾರ ಹಾವೇರಿ, ಚಿತ್ರದುರ್ಗ ಮತ್ತು ಬೆಳಗಾವಿ, ಹಾಸನ, ರಾಯಚೂರು, ತುಮಕೂರು,
ಕಲಬುರಗಿ, ಯಾದಗಿರಿಯಲ್ಲಿ ಅತಿ ಹೆಚ್ಚು ಪ್ರದೇಶ ಮಳೆ ಅಭಾವದಿಂದ ಬಾಧಿತವಾಗಿದೆ. ಹಾಗಾಗಿ, ಈ ಭಾಗದ ರೈತರಿಗೆ ಇದರ ಪರಿಣಾಮ ತುಸು ಜೋರಾಗಿಯೇ ತಟ್ಟಲಿದೆ.

ವಾರದ ಮಳೆಯಿಂದ ಆಶಾದಾಯಕ:
ಮುಖ್ಯವಾಗಿ ಭತ್ತ, ರಾಗಿಯಂತಹ ಆಹಾರ ಧಾನ್ಯಗಳಿಗೆ ಹೊಡೆತ ಬಿದ್ದಿರುವುದು ನಿಜ. ಆದರೆ, ಕಳೆದ ಒಂದು ವಾರದಿಂದ ಬೀಳುತ್ತಿರುವ ಮಳೆ ಆಶಾದಾಯಕವಾಗಿದೆ. ಈ ಮಳೆಯಿಂದ ಬೆಳೆಗಳು ತಕ್ಕಮಟ್ಟಿಗೆ ಚೇತರಿಸಿ ಕೊಳ್ಳುವ ಸಾಧ್ಯತೆಯಿದೆ. ಆಗ, ಬೆಳೆಗಳ ಬಾಧಿತ ಪ್ರಮಾಣ ತಗ್ಗಬಹುದೆಂದು ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಪ್ರಕಾಶ್‌ ಕಮ್ಮರಡಿ ವಿಶ್ವಾಸ ವ್ಯಕ್ತಪಡಿಸುತ್ತಾರೆ. ರಾಜ್ಯದಲ್ಲಿ ಬಿತ್ತನೆ ಗುರಿ ಇರುವುದು 73 ಲಕ್ಷ  ಕ್ಟೇರ್‌. ವಾಡಿಕೆ ಬಿತ್ತನೆ ವಿಸ್ತೀರ್ಣ 65.74 ಲಕ್ಷ ಹೆಕ್ಟೇರ್‌. ಕಳೆದ ವರ್ಷ ಇದೇ ಅವಧಿ ಯಲ್ಲಿ 69.75 ಲಕ್ಷ ಬಿತ್ತನೆಯಾಗಿತ್ತು. ಆದರೆ, ಈ ಬಾರಿ ಇದುವರೆಗೆ 60.46 ಲಕ್ಷ ಹೆಕ್ಟೇರ್‌ ಬಿತ್ತನೆಯಾಗಿದೆ. ಮುಂಗಾರಿನ ಕೃಷಿ ಉತ್ಪಾದನೆ ಗುರಿ 100.8 ಲಕ್ಷ ಟನ್‌. ಇದರಲ್ಲಿ ಶೆ. 20ರಿಂದ 25ರಷ್ಟು ಕುಂಠಿತವಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. 

781.6 ಮಿ.ಮೀ. ವಾಡಿಕೆ ಮಳೆ 
ರಾಜ್ಯದಲ್ಲಿ ಜೂನ್‌ 1ರಿಂದ ಸೆ. 22ರವರೆಗಿನ ವಾಡಿಕೆ ಮಳೆ 781.6 ಮಿ.ಮೀ. ಬಿದ್ದ ಮಳೆ 712 ಮಿ.ಮೀ. ಅಂತರ ಶೇ. 9ರಷ್ಟು ಇರುವುದರಿಂದ ವಾಡಿಕೆ ಮಳೆ ಎಂದು ಪರಿಗಣಿಸಲಾಗುವುದು. ಪ್ರದೇಶವಾರು ಮಳೆ ಪ್ರಮಾಣ ಹೀಗಿದೆ (ಮಿ.ಮೀ.ಗಳಲ್ಲಿ). 

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.