ಪಿಯು ಪರೀಕ್ಷೆ ಸಿದ್ಧತೆಗೆ 10 ನಿಮಿಷದ ವೀಡಿಯೋ

ವಿದ್ಯಾರ್ಥಿಗಳ ವಾಟ್ಸ್‌ಆ್ಯಪ್‌ಗೆ ಲಿಂಕ್‌ ಕಳುಹಿಸುವ ಚಿಂತನೆ

Team Udayavani, Jan 18, 2022, 7:10 AM IST

thumb 4

ಬೆಂಗಳೂರು: ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಪಾಠಕ್ಕೆ ಸಂಬಂಧಿಸಿದ ಅಂಶಗಳನ್ನು ಸುಲಭವಾಗಿ ಮನನ ಮಾಡಿಕೊಳ್ಳಲು ಹಾಗೂ ನೆನಪಿನಲ್ಲಿಟ್ಟುಕೊಳ್ಳಲು ಪೂರಕವಾಗಿ ಪಿಯು ಇಲಾಖೆಯು ಪ್ರತಿ ಅಧ್ಯಾಯಕ್ಕೆ ಸಂಬಂಧಿಸಿದ ಹತ್ತು ನಿಮಿಷದ ವೀಡಿಯೋಗಳನ್ನು ಪ್ರಕಟಿಸಲು ಮುಂದಾಗಿದೆ.

ಆನ್‌ಲೈನ್‌ ತರಗತಿಗಳ ವೀಡಿಯೋಗಳು ಈಗಾಗಲೇ ಇಲಾಖೆ ವೆಬ್‌ಸೈಟ್‌ನಲ್ಲಿ ಹಾಗೂ ಕೇಂದ್ರ ಸರಕಾರದ ದೀಕ್ಷಾ ಆ್ಯಪ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ವಿದ್ಯಾರ್ಥಿಗಳು ಪೂರ್ಣಪಾಠಕ್ಕೆ ಈ ವೀಡಿಯೋಗಳನ್ನು ಕೇಳಬಹುದು. ಇವುಗಳನ್ನು ಹೊರತುಪಡಿಸಿ ಹೊಸ ವೀಡಿಯೋಗಳನ್ನು ಸಿದ್ಧಪಡಿಸಲಾಗುತ್ತದೆ. ಇವುಗಳನ್ನು ವಾಟ್ಸ್‌ ಆ್ಯಪ್‌ ಮೂಲಕವೇ ವಿದ್ಯಾರ್ಥಿಗಳಿಗೆ ಲಿಂಕ್‌ ಕಳಿಸಿ ಸುಲಭವಾಗಿ ಸಿಗುವಂತೆ ಮಾಡುವುದು ಇಲಾಖೆ ಉದ್ದೇಶವಾಗಿದೆ.
ಮೊಬೈಲ್‌ ನೆಟ್‌ವರ್ಕ್‌ ಮತ್ತು ಇಂಟರ್‌ನೆಟ್‌ ಡೇಟಾ ಸಮಸ್ಯೆಯಿಂದ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಗ್ರಾಮೀಣ ಭಾಗದಲ್ಲಿ ಮಕ್ಕಳು ಆನ್‌ಲೈನ್‌ ತರಗತಿಗಳನ್ನು ಕೇಳಲು ಸಮಸ್ಯೆಯಾಗಿದ್ದು, ಅಂಥವರಿಗೆ ವೀಡಿಯೋ ಸಹಾಯವಾಗಲಿದೆ. ವಾಟ್ಸ್‌ಆ್ಯಪ್‌ ಮೂಲಕವೇ ಲಿಂಕ್‌ ಕಳುಹಿಸುವುದರಿಂದ ನೆಟ್‌ವರ್ಕ್‌ ಇರುವಲ್ಲಿ ಡೌನ್‌ಲೋಡ್‌ ಮಾಡಿ ಸಮಯ ಸಿಕ್ಕಾಗ ಕೇಳಬಹುದಾಗಿದೆ.

ಲಾಕ್‌ಡೌನ್‌ ಸಮಯದಲ್ಲಿ ಭೌತಿಕ ತರಗತಿಗಳನ್ನು ನಡೆಸಲು ಅವಕಾಶವಿಲ್ಲದಿದ್ದರಿಂದ ಆನ್‌ಲೈನ್‌ ಮೂಲಕ ಬೋಧಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿ ಗಳು ಗಂಟೆಗಟ್ಟಲೆ ಕುಳಿತು ಪಾಠ ಕೇಳ ಬೇಕಿತ್ತು. ಇದರಿಂದ ಕೆಲವು ವಿದ್ಯಾರ್ಥಿಗಳಿಗೆ ಕಿರಿಕಿರಿಯಾಗುತ್ತಿತ್ತು.

ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಅರ್ಧ ಗಂಟೆ, ಮುಕ್ಕಾಲು ಗಂಟೆ ಕುಳಿತ ಪಾಠ ಕೇಳುವ ಬದಲು ಕೇವಲ ಹತ್ತು ನಿಮಿಷಗಳಲ್ಲಿ ಅಧ್ಯಾಯಕ್ಕೆ ಸಂಬಂಧಿಸಿದ ಅಂಶಗಳನ್ನು ಸಂಕ್ಷಿಪ್ತವಾಗಿ ತಿಳಿಸುವ ಮತ್ತು ಪರೀಕ್ಷೆಗೆ ಸಂಬಂಧಿಸಿದ ಅಂಶಗಳು ವೀಡಿಯೋದಲ್ಲಿ ಇರಲಿವೆ. ವಿವಿಧ ಸಂಸ್ಥೆಗಳ ಸಾಮಾಜಿಕ ಜವಾಬ್ದಾರಿ ನಿಧಿ (ಸಿಎಸ್‌ಆರ್‌) ಬಳಸಿಕೊಂಡು ವೀಡಿಯೋ ಮಾಡಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದು ಬಂದಿದೆ.

ಸಿಎಸ್‌ಆರ್‌ ನಿಧಿ ಉಪಯೋಗ
ವೃತ್ತಿಪರ ಉಪನ್ಯಾಸಕರಿಂದಲೇ ವೀಡಿಯೋ ಮಾಡಿಸ ಲಾಗುವುದು. ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉಪಯೋಗವಾಗಲಿದೆ. ವಿದ್ಯಾರ್ಥಿಗಳು ಒಂದು ಬಾರಿ ಓದಿದ ಬಳಿಕ ಮತ್ತೊಮ್ಮೆ ಕೇಳುವುದರಿಂದ ಹೆಚ್ಚು ನೆನಪಿನಲ್ಲಿ ಉಳಿಯಲಿದೆ. ಕೆಲವೊಂದು ಸಂಸ್ಥೆಗಳ ಜತೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಆದಷ್ಟು ಬೇಗ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತದೆ ಎನ್ನುತ್ತಾರೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಆರ್‌. ಸ್ನೇಹಲ್‌.

ಆನ್‌ಲೈನ್‌ನಲ್ಲಿ ಅರ್ಧ, ಮುಕ್ಕಾಲು ಗಂಟೆ ತರಗತಿ ಕೇಳಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಮತ್ತು ಪರೀಕ್ಷಾ ದೃಷ್ಟಿಯಿಂದ ಹತ್ತು ನಿಮಿಷಗಳ ವೀಡಿಯೋಗಳನ್ನು ಮಾಡಲು ಸಿದ್ಧತೆ ನಡೆಸಲಾಗುತ್ತಿದೆ.
– ಆರ್‌. ಸ್ನೇಹಲ್‌, ಪಿಯು ಇಲಾಖೆ ನಿರ್ದೇಶಕಿ

-ಎನ್‌.ಎಲ್‌. ಶಿವಮಾದು

ಟಾಪ್ ನ್ಯೂಸ್

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.