ಗ್ರಾಮ ವಿಕಾಸ ಯೋಜನೆಯಡಿ 100 ಕೋಟಿ ರೂ. ಬಿಡುಗಡೆ
Team Udayavani, Feb 22, 2020, 3:05 AM IST
ಬೆಂಗಳೂರು: ಸುವರ್ಣ ಗ್ರಾಮೋದಯದಡಿ ಮುಖ್ಯ ಮಂತ್ರಿ ಗ್ರಾಮ ವಿಕಾಸ ಯೋಜನೆ ಅನುಷ್ಠಾನದಲ್ಲಿರುವ ಗ್ರಾಮಗಳಿಗೆ 100 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. 400 ಕೋಟಿ ರೂ. ಮೊತ್ತದ ಯೋಜನೆಯ ನಾಲ್ಕನೇ ಹಾಗೂ ಕೊನೆಯ ಕಂತಿನ ಭಾಗವಾಗಿ 100 ಕೋಟಿ ರೂ. ಹಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ವತಿಯಿಂದ ಬಿಡುಗಡೆ ಮಾಡಲಾಗಿದೆ.
ರಾಜ್ಯದ 189 ಗ್ರಾಮೀಣ ವಿಧಾನಸಭೆ ಕ್ಷೇತ್ರಗಳ 990 ಗ್ರಾಮಗಳಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದ್ದು 100 ಕೋಟಿ ರೂ. ಅನುದಾನ ಎಲ್ಲ ಗ್ರಾಮಗಳಿಗೆ ಹಂಚಿಕೆಯಾಗಲಿದೆ. ಗ್ರಾಮ ವಿಕಾಸ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನವನ್ನು ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಆಯ್ಕೆ ಮಾಡಿದ ಗ್ರಾಮಗಳ ಅನುಮೋದಿತ ಗ್ರಾಮಾಭಿವೃದ್ಧಿ ಯೋಜನೆಯ ಕಾಮಗಾರಿಗಳ ಅನುಷ್ಟಾನಕ್ಕಾಗಿ ಮಾತ್ರ ವಿನಿಯೋಗಿಸಬೇಕು.
ಯೋಜನೆಯ ಆರ್ಥಿಕ ಹಾಗೂ ಭೌತಿಕ ಪ್ರಗತಿ ವರದಿಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ವಿಧಾನಸಭೆ ಕ್ಷೇತ್ರಾವಾರು ಕ್ರೋಢೀಕರಿಸಿ ಉಪಯುಕ್ತತಾ ಪತ್ರವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿ ಕಾರಿಗಳು ಇಲಾಖೆಗೆ ಸಲ್ಲಿಸಬೇಕು. ಗ್ರಾಮ ಪಂಚಾಯಿತಿಗಳು ಕಾಮಗಾರಿ ಬಿಲ್ಲುಗಳ ಹಣ ಪಾವತಿಸುವಾಗ ಸಂಬಂಧಪಟ್ಟ ಅನುಷ್ಠಾನ ಸಂಸ್ಥೆಗಳು ಗಾಂಧಿ ಸಾಕ್ಷಿ ಕಾಯಕ ತಂತ್ರಾಂಶದಲ್ಲಿ ಕಡ್ಡಾಯವಾಗಿ ಎಲ್ಲ ಮಾಹಿತಿ ಅಳವಡಿಸಬೇಕು. ಗ್ರಾಪಂಗಳು ಪೂರ್ಣಗೊಂಡ ಕಾಮಗಾರಿಗಳ ಹಣವನ್ನು ಚೆಕ್ ಮೂಲಕ ಮಾತ್ರ ಪಾವತಿಸಬೇಕು. ನಗದು ಪಾವತಿಸುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ