ಪಾದರಾಯನಪುರದಲ್ಲಿ 119 ಜನರು ವಶಕ್ಕೆ: ಗೃಹ ಸಚಿವ ಬೊಮ್ಮಾಯಿ
Team Udayavani, Apr 21, 2020, 12:32 PM IST
ಬೆಂಗಳೂರು: ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 119 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ಆದೇಶದ ಪ್ರಕಾರ ವಶಕ್ಕೆ ಪಡೆದವರನ್ನೆಲ್ಲಾ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ರವಾನೆ ಮಾಡಲಾಗುತ್ತದೆ. ಅವರೆಲ್ಲರನ್ನೂ ನ್ಯಾಷನಲ್ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ ಪ್ರಕಾರ ಬಂಧಿಸಲಾಗಿದೆ. ಆ ಕಾಯ್ದೆಯ ಪ್ರಕಾರ ಅವರನ್ನು ಮ್ಯಾಸಿಸ್ಟ್ರೇಟ್ ಮುಂದೆ ಹಾಜರು ಪಡಿಸುತ್ತೇವೆ. ಅಗತ್ಯವಾದರೆ ರಾಷ್ಟ್ರೀಯ ಭದ್ರತಾ ಕಾಯ್ದೆಯ ಅನ್ವಯ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.
ಡೇಂಜರ್ ಝೋನ್ ನಲ್ಲಿರುವ ಎಲ್ಲಾ ಜಿಲ್ಲೆ ಮತ್ತು ಬೆಂಗಳೂರಿನ ಬಡಾವಣೆಗಳನ್ನು ಸೀಲ್ ಡೌನ್ ಮಾಡಲಾಗುತ್ತದೆ.ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಗೃಹ ಸಚಿವರು ಹೇಳಿದರು.