ಒಂದೇ ದಿನ 1243 ಆಸ್ತಿ ನೋಂದಣಿ
Team Udayavani, Apr 30, 2020, 1:00 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭವಾಗಿದ್ದು, ಬುಧವಾರ 1243 ಆಸ್ತಿ ನೋಂದಣಿಯಾಗಿದೆ. 3.23 ಕೋಟಿ ರೂ. ಮುದ್ರಾಂಕ ಶುಲ್ಕ ಹಾಗೂ 69 ಲಕ್ಷ ರೂ. ನೋಂದಣಿ ಶುಲ್ಕ ಸೇರಿದಂತೆ ಒಟ್ಟು 3.92 ಕೋಟಿ ರೂ. ಸಂಗ್ರಹವಾಗಿದೆ. ಬೆಂಗಳೂರು ಸೇರಿದಂತೆ ಕೆಂಪು ವಲಯದಲ್ಲಿದ್ದ ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆಯ ಉಪನೋಂದಣಾಧಿಕಾರಿ ಕಚೇರಿಗಳು ಕಳೆದ ಶುಕ್ರವಾರದಿಂದ (ಏ.24) ಕಾರ್ಯಾರಂಭವಾಗಿದ್ದವು. ಇದೀಗ ಬೆಂಗಳೂರಿನ 42 (ಕಂಟೈನ್ ಮೆಂಟ್ ವಲಯದಲ್ಲಿರುವರಿಂದ ಬೇಗೂರು ಉಪನೋಂದಣಾಧಿಕಾರಿ ಕಚೇರಿ ತೆರೆದಿಲ್ಲ) ಸೇರಿದಂತೆ ರಾಜ್ಯಾದ್ಯಂತ ಇರುವ ಎಲ್ಲ ಉಪನೋಂದಣಾಧಿಕಾರಿ ಕಚೇರಿಗಳು ಕಾರ್ಯಾರಂಭವಾಗಿವೆ.
ಏ. 24ರಿಂದ ಆಸ್ತಿ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ದಿನ ಕೇವಲ 10 ಲಕ್ಷ ರೂ. ಶುಲ್ಕ ಸಂಗ್ರಹವಾಗಿತ್ತು. ಮಂಗಳವಾರ ಕೂಡ ಒಂದು ಕೋಟಿ ರೂ. ಶುಲ್ಕ ಸಂಗ್ರಹವಾಗಿತ್ತು. ಬುಧವಾರ ರಾಜ್ಯಾದ್ಯಂತ 1242 ಆಸ್ತಿ ನೋಂದಣಿಯಾಗಿದ್ದು, ಒಟ್ಟು 3.92 ಕೋಟಿ ರೂ. ಸಂಗ್ರಹವಾಗಿದೆ. ಮುಂದಿನ ದಿನಗಳಲ್ಲಿ ಆಸ್ತಿ ನೋಂದಣಿ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಮೂಲಗಳು ತಿಳಿಸಿವೆ. ಸಾಮಾನ್ಯ ಸಂದರ್ಭದಲ್ಲಿ ಮಾಸಿಕ ಸುಮಾರು 1000 ಕೋಟಿ ರೂ.ನಷ್ಟು ಮುಂದ್ರಾಂಕ ಮತ್ತು ನೋಂದಣಿ ಶುಲ್ಕ ಸಂಗ್ರಹವಾಗುತ್ತಿತ್ತು. ನಿತ್ಯ 7000ಕ್ಕೂ ಹೆಚ್ಚು ಆಸ್ತಿ ನೋಂದಣಿ ಮೂಲಕ 30ರಿಂದ 40 ಕೋಟಿ ರೂ. ಶುಲ್ಕ ಸಂಗ್ರಹವಾಗುತ್ತಿತ್ತು. ಲಾಕ್ ಡೌನ್ ಜಾರಿಯಲ್ಲಿರುವುದರಿಂದ ನೋಂದಣಿ ಕಡಿಮೆ
ಇದೆ. ಬೆಂಗಳೂರಿನಲ್ಲೂ ಆಸ್ತಿ ನೋಂದಣಿ ಕಡಿಮೆ ಇದೆ ಎಂದು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ