ಮಳೆ ಹಾನಿ: ಸ್ಥಳಕ್ಕೆ ಭೇಟಿ ನೀಡಲು ಜಿಲ್ಲಾಧಿಕಾರಿಗಳಿಗೆ ಸಚಿವ ಅಶೋಕ್ ಸೂಚನೆ
ಬೆಳೆನಷ್ಟ ಪರಿಹಾರಕ್ಕೆ 130 ಕೋಟಿ ರೂ. ಬಿಡುಗಡೆ
Team Udayavani, Nov 19, 2021, 8:00 PM IST
ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆಯಿಂದ ಬಹಳಷ್ಟು ಬೆಳೆ ಹಾನಿಯಾಗಿದ್ದು ಜಿಲ್ಲಾಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ನಷ್ಟದ ಅಂದಾಜು ಕುರಿತು ಮಾಹಿತಿ ಪಡೆಯಲು ಸೂಚಿಸಲಾಗಿದೆ.130 ಕೋಟಿ ರೂ. ಬೆಳೆ ನಷ್ಟ ಪರಿಹಾರಕ್ಕೆ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ವರದಿ ಕೊಟ್ಟ ನಂತರ ಪರಿಹಾರ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮಳೆಯಿಂದ ಹಳೆ ಮೈಸೂರು ಭಾಗದಲ್ಲಿ ರಾಗಿಗೆ ಹಾನಿಯಾಗಿದೆ.ಬೆಳಗಾವಿ, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಕಬ್ಬು, ಈರುಳ್ಳಿ ಸೇರಿ ಇತರೆ ಬೆಳೆಗಳಿಗೆ ಹಾನಿಯಾಗಿದೆ. ಈ ಕುರಿತು ಪ್ರಾಥಮಿಕ ಮಾಹಿತಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.
ಚುನಾವಣಾ ನೀತಿ ಸಂಹಿತೆ ಯಿಂದ ನಾವು ಸ್ಥಳ ಪರಿಶೀಲನೆ ಹೋಗಲು ಆಗಲ್ಲ ಅದಕ್ಕಾಗಿ ಶಾಸಕರು, ಸಚಿವರ ಕರೆದುಕೊಂಡು ಹೋಗದೆ ಅಧಿಕಾರಿಗಳ ತಂಡ ಹೋಗಿ ಪರಿಶೀಲನೆ ಮಾಡಬೇಕು ಎಂದು ತಿಳಿಸಲಾಗಿದೆ ಎಂದರು.
ಇದನ್ನೂ ಓದಿ:ಆಸ್ಪತ್ರೆಗೆ ಬಂದು ಗೋಳಾಡಿ ದೇವರ ವಿಗ್ರಹಕ್ಕೆ ಬ್ಯಾಂಡೇಜ್ ಮಾಡಿಸಿದ ಅರ್ಚಕ!
ಮಳೆಯಿಂದ ಮನೆ ಬಿದ್ದಿದ್ದರೆ ತಕ್ಷಣ 10 ಸಾವಿರ ರೂ. ಪರಿಹಾರ ಕೊಡಬೇಕು ಎಂದು ಸೂಚಿಸಲಾಗಿದೆ. ಬೆಳೆ ಪರಿಹಾರಕ್ಕೆ 130 ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಸಮಸ್ಯೆ ಉಂಟಾಗಿರುವ ಜಿಲ್ಲೆಗಳನ್ನು ಈಗಾಗಲೇ ಗುರುತು ಮಾಡಿದ್ದೇವೆ. ರೈತರ ಖಾತೆಗಳಿಗೆ ಬೆಳೆ ಪರಿಹಾರದ ಹಣ ತಲುಪಲಿದೆ ಎಂದು ಹೇಳಿದರು.
ಎನ್ಡಿಆರ್ಎಫ್, ಎಸ್ಡಿಆರ್ಎಫ್ನಡಿ ಹಣ ಬಿಡುಗಡೆ ಮಾಡಲಾಗುವುದು. ಯಾವ ಯಾವ ಬೆಳೆಗೆ ಯಾವ ಯಾವ ಪರಿಹಾರ ಅನ್ನೋದರ ಬಗ್ಗೆ ಈಗಾಗಲೇ ಬೆಲೆ ನಿಗದಿಯಾಗಿದೆ. ಕಾಫಿ ಬೆಳೆಗಳನ್ನು ಪರಿಹಾರ ಸಿಗುವ ಬಗ್ಗೆ ಕೇಂದ್ರಕ್ಕೆ ಪತ್ತ ಬರೆಯುತ್ತೇನೆ ಎಂದು ತಿಳಿಸಿದರು.
ಕೇಂದ್ರದಿಂದ ಈಗಾಗಲೇ 8 ವರ್ಷಗಳಲ್ಲಿ ಎನ್ಡಿಆರ್ಎಫ್ನಡಿ 13,519 ಕೋಟಿ ರೂ. ಎಸ್ಡಿಆರ್ಎಫ್ನಡಿ 2922 ಕೋಟಿ ರೂ. ಬಿಡುಗಡೆಯಾಗಿದೆ. 1,51,429 ರೈತರಿಗೆ ಇನ್ಪುಟ್ ಸಬ್ಸಿಡಿ ಜುಲೈ ಆಗಸ್ಟ್ವರೆಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ