ಪಿಯು ಕಾಲೇಜುಗಳ 1357 ಉಪನ್ಯಾಸಕರಿಗೆ ಕೆಲಸವಿಲ್ಲ!


Team Udayavani, Sep 2, 2017, 8:50 AM IST

02-RAJYA-5.jpg

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಲಾ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿರುವುದರಿಂದ ಆ ವಿಷಯಗಳ ಬೋಧನೆ ಮಾಡುವ ಉಪನ್ಯಾಸಕರು ಇಲಾಖೆಗೆ “ಹೊರೆಯಾದಂತಾಗಿದೆ. ರಾಜ್ಯದ 150ಕ್ಕೂ ಅಧಿಕ ಪದವಿ ಪೂರ್ವ ಕಾಲೇಜುಗಳಲ್ಲಿ 1,357 ಉಪನ್ಯಾಸಕರಿಗೆ ಕೆಲಸ ಇಲ್ಲದಂತಾಗಿದ್ದು, ಅವರನ್ನು ಎಲ್ಲಿ ನಿಯೋಜಿಸಬೇಕು ಎಂಬುದು ಇಲಾಖೆಗೆ ತಲೆ ಬಿಸಿಯಾಗಿದೆ.

ಶೂನ್ಯ ದಾಖಲಾತಿ ಅಥವಾ 10ಕ್ಕಿಂತ ಕಡಿಮೆ ಮಕ್ಕಳು ದಾಖಲಾಗಿರುವ ಸರ್ಕಾರಿ ಪಿಯು ಕಾಲೇಜುಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಅದೇ ರೀತಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದು, ಕಾರ್ಯಭಾರ ಇಲ್ಲದೇ ಇರುವ ಉಪನ್ಯಾಸಕರನ್ನು ಪತ್ತೆ ಹಚ್ಚಿ, ಜಿಲ್ಲೆಯ ಒಳಗೆ ಅಗತ್ಯವಿರುವ ಶಾಲೆಗೆ ನಿಯೋಜಿಸುವ ಕೆಲಸ ಪಿಯು ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಹಂತದಲ್ಲಿ ನಡೆಯುತ್ತಿದೆ. ಆದರೆ, ಹೆಚ್ಚುವರಿ ಉಪನ್ಯಾಸಕರ ಸಂಖ್ಯೆ
ಹೆಚ್ಚಾಗಿರುವುದರಿಂದ ಆಯಾ ವಿಷಯವಾರು ಉಪನ್ಯಾಸಕರನ್ನು ಅದೇ ಜಿಲ್ಲೆಯೊಳಗೆ ನಿಯೋಜನೆ ಮಾಡುವುದು ಇಲಾಖೆಗೆ ಸವಾಲಾಗಿದೆ.

ರಾಜ್ಯದ ವಿವಿಧ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ಪಿಯು ಕಾಲೇಜಿನ ಹೆಚ್ಚುವರಿ ಉಪನ್ಯಾಸಕರ ಪಟ್ಟಿ ಸಿದ್ಧವಾಗಿದೆ. ಹಾಸನದಲ್ಲಿ 145, ದಕ್ಷಿಣ ಕನ್ನಡದಲ್ಲಿ 112, ತುಮಕೂರಿನಲ್ಲಿ 98, ಬಳ್ಳಾರಿಯಲ್ಲಿ 95, ಮೈಸೂರಿನಲ್ಲಿ 88, ಉಡುಪಿಯಲ್ಲಿ 82, ಮಂಡ್ಯದಲ್ಲಿ 73, ಶಿವಮೊಗ್ಗದಲ್ಲಿ 64, ಚಿಕ್ಕಮಗಳೂರಿನಲ್ಲಿ 54, ರಾಯಚೂರಿನಲ್ಲಿ 51, ಚಿಕ್ಕಬಳ್ಳಾಪುರದಲ್ಲಿ 44, ಬಾಗಲಕೋಟೆಯಲ್ಲಿ 42, ಕಲಬುರಗಿಯಲ್ಲಿ 41, ಕೊಪ್ಪಳದಲ್ಲಿ 34, ಹಾವೇರಿಯಲ್ಲಿ 33, ಉತ್ತರ ಕನ್ನಡದಲ್ಲಿ 30 ಹೀಗೆ ವಿವಿಧ ಜಿಲ್ಲೆಯಲ್ಲಿ ಒಟ್ಟು 1357 ಹೆಚ್ಚುವರಿ ಉಪನ್ಯಾಸಕರ ಹುದ್ದೆ ಇದೆ. 

ಜಿಲ್ಲಾವಾರು ಪಿಯು ಇಲಾಖೆ ಉಪ ನಿರ್ದೇಶಕರು ಕ್ರೋಡೀಕರಿಸಿರುವ ಮಾಹಿತಿ ಪ್ರಕಾರ, ಕಲಾ ಮತ್ತು ವಿಜ್ಞಾನ ವಿಭಾಗದ ಹೆಚ್ಚುವರಿ ಉಪನ್ಯಾಸಕರ ಸಂಖ್ಯೆ ಹೆಚ್ಚಿದೆ. ವಾಣಿಜ್ಯ ವಿಭಾಗಕ್ಕೆ ವಿದ್ಯಾರ್ಥಿಗಳ ಕೊರತೆಯಿಲ್ಲ. ಹೀಗಾಗಿ, ಹೆಚ್ಚುವರಿ ಶಿಕ್ಷಕರ ಸಂಖ್ಯೆಯೂ ಅಷ್ಟೇನೂ ಇಲ್ಲ. 

ವಿದ್ಯಾರ್ಥಿಗಳ ಸಂಖ್ಯೆ ಕುಸಿತ: ಸರ್ಕಾರಿ ಪಿಯು ಕಾಲೇಜಿನ ವಿಜ್ಞಾನ ಮತ್ತು ಕಲಾ ವಿಭಾಗದಲ್ಲಿ ವಿದ್ಯಾರ್ಥಿಗಳ ಪ್ರವೇಶ ಕಡಿಮೆಯಾಗಿದೆ. ಕಳೆದ ನಾಲ್ಕೈದು ವರ್ಷದಿಂದ ಈ ಎರಡೂ ವಿಭಾಗದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಲೇ ಇದೆ. ಕೆಲವೊಂದು ಕಾಲೇಜಿನಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗವನ್ನು ಉಳಿಸಿಕೊಂಡು ಕಲಾ ವಿಭಾಗ ಮುಚ್ಚಿದ್ದಾರೆ. ಕಲಾ ವಿಭಾಗಕ್ಕೆ ಸೇರಿದ ವಿದ್ಯಾರ್ಥಿಗಳನ್ನು ಸಮೀಪದ ಶಾಲೆಗೆ ವರ್ಗಾಯಿಸಿದ್ದಾರೆ. ವಿದ್ಯಾರ್ಥಿಗಳೇ ಇಲ್ಲದ 17 ಕಾಲೇಜುಗಳನ್ನು ಸ್ಥಳಾಂತರಿಸಲಾಗಿದೆ.

ವಾಣಿಜ್ಯಕ್ಕೆ ಬೇಡಿಕೆ: ರಾಜ್ಯಾದ್ಯಂತ ವಾಣಿಜ್ಯ ವಿಭಾಗಕ್ಕೆ ಬೇಡಿಕೆ ಹೆಚ್ಚಾಗಿದ್ದು, ಬಹುತೇಕ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನೇ ಸೇರಿಕೊಳ್ಳುತ್ತಿದ್ದಾರೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ ಬಹುತೇಕ ಎಲ್ಲಾ ಜಿಲ್ಲೆಗಳ ಸರ್ಕಾರಿ ಪಿಯು ಕಾಲೇಜಿನಲ್ಲಿ ಈ ವರ್ಷದಿಂದ ವಾಣಿಜ್ಯ ವಿಭಾಗ ತೆರೆಯಲಾಗಿದೆ. ವಾಣಿಜ್ಯ ವಿಭಾಗ ಇಲ್ಲದ ಗ್ರಾಮೀಣ ಪ್ರದೇಶದ ಸರ್ಕಾರಿ ಪಿಯು ಕಾಲೇಜಿನಲ್ಲೂ ವಾಣಿಜ್ಯ ವಿಭಾಗಕ್ಕೆ ಸರ್ಕಾರ ಅನುಮೋದನೆ ನೀಡಿದೆ.

ವಿದ್ಯಾರ್ಥಿಗಳ ಪ್ರವೇಶದ ಆಧಾರದಲ್ಲಿ ಹೆಚ್ಚುವರಿ ಉಪನ್ಯಾಸಕರ ಪಟ್ಟಿ ತಯಾರಿಸಲು ಜಿಲ್ಲಾ ಉಪ ನಿರ್ದೇಶಕರಿಗೆ ಸೂಚಿಸಿದ್ದು, ಹೆಚ್ಚುವರಿ ಉಪನ್ಯಾಸಕರನ್ನು ಜಿಲ್ಲೆಯ ಒಳಗೆ ನಿಯೋಜಿಸಲಾಗುತ್ತದೆ. ಉಪನ್ಯಾಸಕರ ವರ್ಗಾವಣೆ ಸಂಬಂಧ ಸರ್ಕಾರದಿಂದ ಯಾವುದೇ ಸೂಚನೆ
ಬಂದಿಲ್ಲ. 
ಸಿ.ಶಿಖಾ, ನಿರ್ದೇಶಕಿ, ಪಿಯು ಇಲಾಖೆ

ರಾಜು ಖಾರ್ವಿ ಕೊಡೇರಿ 

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.