1380.96 ಕೋಟಿ ರೂ.ಜಲ ಜೀವನ್‌ ಮಿಷನ್‌ ಯೋಜನೆಗೆ ಸಂಪುಟ ಅಸ್ತು


Team Udayavani, Jul 22, 2022, 10:58 PM IST

1380.96 ಕೋಟಿ ರೂ.ಜಲ ಜೀವನ್‌ ಮಿಷನ್‌ ಯೋಜನೆಗೆ ಸಂಪುಟ ಅಸ್ತು

ಬೆಂಗಳೂರು: ಜಲ ಜೀವನ್‌ ಮಿಷನ್‌ ಯೋಜನೆಯಡಿ ಕೊಪ್ಪಳ, ಬೆಳಗಾವಿ, ಚಾಮ ರಾಜನಗರ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಜನವಸತಿಗಳಲ್ಲಿ ಕುಡಿಯುವ ನೀರು ಕಲ್ಪಿಸುವ 1,380.96 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧು ಸ್ವಾಮಿ, ಕೊಪ್ಪಳ ಗಂಗಾವತಿಯ 26 ಗ್ರಾಮ, ಬೆಳಗಾವಿಯ ಅಥಣಿಯ 8 ಗ್ರಾಮ, ಸವದತ್ತಿಯ 30 ಗ್ರಾಮ, ಚಾಮರಾಜನಗರದ ಕೊಳ್ಳೇಗಾಲ ಹಾಗೂ ಹನೂರು ತಾಲೂಕಿನ 291 ಜನವಸತಿ, ದಾವಣಗೆರೆ ಜಿಲ್ಲೆ ಹೊನ್ನಾಳಿ ಹಾಗೂ ಚನ್ನಗಿರಿ ತಾಲೂಕಿನ 26 ಜನವಸತಿ, ಬಳ್ಳಾರಿ ಜಿಲ್ಲೆ ವಿಜಯನಗರ ತಾಲೂಕಿನ 29 ಗ್ರಾಮಗಳಿಗೆ ಜಲಜೀವನ್‌ ಮಿಷನ್‌ ಅಡಿ ಕುಡಿಯುವ ನೀರು ಪೂರೈಸಲು ಒಪ್ಪಿಗೆ ನೀಡಲಾಗಿದೆ ಎಂದರು.

ರೇಷ್ಮೆ ಇಲಾಖೆಯನ್ನು ಸಮಗ್ರ ಗಣಕೀಕರಣ ಮಾಡಲು 15 ಕೋಟಿ ರೂ. ಯೋಜನೆ, ರಾಜ್ಯದ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1142 ಡಿ ದರ್ಜೆಯ ಸಿಬಂದಿ ಯನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು, ವಿದ್ಯಾ ವಿಕಾಸ ಯೋಜನೆಯಡಿ ಸರಕಾರಿ ಶಾಲೆಗಳ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಶೂ ಮತ್ತು ಸಾಕ್ಸ್‌ ನೀಡುವ 132 ಕೋಟಿ ರೂ. ಯೋಜನೆಗೂ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.

ಕನಿಷ್ಠ ಉದ್ಯೋಗ ಪ್ರಮಾಣ ಪರಿಷ್ಕರಣೆ
ಬೆಂಗಳೂರು: ಕೈಗಾರಿಕೆ ವಲಯದಲ್ಲಿ ಸ್ಥಳೀಯರು ಮತ್ತು ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ “ಕರ್ನಾಟಕ ಉದ್ಯೋಗ ನೀತಿ-2025’ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದ್ದು, ನೂತನ ಉದ್ಯೋಗ ನೀತಿ ಪ್ರಕಾರ, ಮಧ್ಯಮ, ಬೃಹತ್‌ ಹಾಗೂ ಭಾರೀ ಕೈಗಾರಿಕೆಗಳಲ್ಲಿ ಪ್ರಸ್ತುತ ನಿಗದಿಪಡಿಸಿರುವ ಕನಿಷ್ಠ ಉದ್ಯೋಗ ಪ್ರಮಾಣವನ್ನು ಪರಿಷ್ಕರಿಸಲಾಗಿದೆ.

ಕೈಗಾರಿಕೆಗಳನ್ನು ಹೂಡಿಕೆ ಆಧಾರದಲ್ಲಿ ವಿಭಾಗಿಸಲಾಗಿದೆ. ಅದರಂತೆ ಮಧ್ಯಮ ಕೈಗಾರಿಕೆ ಕನಿಷ್ಠ 20 ಜನರಿಗೆ, ಬೃಹತ್‌ ಉದ್ದಿಮೆಯು ಕನಿಷ್ಠ 60, ಮೆಗಾ ಕೈಗಾರಿಕೆಗಳು ಕನಿಷ್ಠ 260, ಅಲ್ಟ್ರಾ ಮೆಗಾ ಇದ್ದರೆ 510 ಹಾಗೂ ಸೂಪರ್‌ ಮೆಗಾ ಕೈಗಾರಿಕೆಯು ಕನಿಷ್ಠ ಸಾವಿರ ಜನರಿಗೆ ಉದ್ಯೋಗ ನೀಡಬೇಕೆಂದು ಸೂಚಿಸಲಾಗಿದೆ.

ಹೆಚ್ಚುವರಿಯಾಗಿ ಹೂಡಿಕೆ ಮಾಡುವ ಪ್ರತಿ ಕನಿಷ್ಠ 10 ಕೋಟಿಯಿಂದ ಗರಿಷ್ಠ 50 ಕೋಟಿ ರೂ. ವರೆಗಿನ ಹೂಡಿಕೆಗೆ ಅನುಗುಣವಾಗಿ 10ರಿಂದ 50 ಜನರಿಗೆ ಉದ್ಯೋಗ ಕಲ್ಪಿಸಬೇಕೆಂದು ನೂತನ ನೀತಿ ತಿಳಿಸುತ್ತದೆ.

ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರು
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸುವುದು ಹಾಗೂ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿಡಲು ಸಂಪುಟ ತೀರ್ಮಾನಿಸಿದೆ.

ಈ ನಿಲ್ದಾಣದ ಉನ್ನತೀಕರಣ ಹಾಗೂ ವಿಸ್ತರಣೆಗಾಗಿ 240 ಎಕ್ರೆ ಜಮೀನನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.