14 ದಿನದ ಬಂದ್: ಅಂತಾರಾಜ್ಯ ಸಂಚಾರಕ್ಕೂ ನಿರ್ಬಂಧ, ಮದ್ಯ ಖರೀದಿಗೆ ಅವಕಾಶ; ಏನಿದೆ? ಏನಿರಲ್ಲ?
14 ದಿನದ ಲಾಕ್ ಡೌನ್ ಅವಧಿಯಲ್ಲಿ ಏನಿದೆ? ಏನಿಲ್ಲ?
Team Udayavani, Apr 26, 2021, 2:51 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ತಪ್ಪಿಸಲು ರಾಜ್ಯ ಸರ್ಕಾರ 14 ದಿನಗಳ ಕಾಲ ಸಂಪೂರ್ಣ ಬಂದ್ ಮಾಡಿ ಆದೇಶಿಸಿದೆ. ಮಂಗಳವಾರ (ಎ.27) ರಿಂದ ಅನ್ವಯವಾಗುವಂತೆ 14 ದಿನಗಳ ಕಾಲ ಲಾಕ್ ಡೌನ್ ಮಾಡಿ ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ.
ಈ ಸಮಯದಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಸೇರಿದಂತೆ ಯಾವುದೇ ಸಾರಿಗೆ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಅಂತಾರಾಜ್ಯ ಮತ್ತು ಅಂತರ್ ಜಿಲ್ಲಾ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಸರಕು ಸಾಗಾಣೆ ವಾಹನಗಳಿಗೆ ಅವಕಾಶ ಇರುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
ಇದನ್ನೂ ಓದಿ:ಹೆಚ್ಚುತ್ತಿರುವ ಕೋವಿಡ್: ‘ರಾಜ್ಯದಲ್ಲಿ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್’
ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಹಾಲು, ತರಕಾರಿ, ಹಣ್ಣು ಹಂಪಲು ಮುಂತಾದ ಅಗತ್ಯ ವಸ್ತುಗಳ ಖರೀದಿ ಮತ್ತು ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಮದ್ಯ ಖರೀದಿಗೂ ಅವಕಾಶವನ್ನು ಬೆಳಿಗ್ಗೆ 6 ರಿಂದ 10 ಗಂಟೆಯವರಗೆ ಅವಕಾಶ ನೀಡಲಾಗಿದೆ.
ಮೆಡಿಕಲ್ ಶಾಪ್, ಬ್ಯಾಂಕ್, ಎಟಿಎಂ ಸೇವೆ, ರಕ್ತನಿಧಿ ಕೇಂದ್ರ, ಆಸ್ಪತ್ರೆ, ಕ್ಲಿನಿಕ್ಗಳು ಲಾಕ್ ಡೌನ್ ಅವಧಿಯಲ್ಲೂ ತೆರೆದಿರುತ್ತದೆ.
ಇದನ್ನೂ ಓದಿ: ನಿತ್ಯ 5000 ಜನರಿಗೆ ಊಟ : ವಲಸೆ ಕಾರ್ಮಿಕರ ಹಸಿವು ನೀಗಿಸಿದ ಬಾಲಿವುಡ್ ನಟ ಸಲ್ಮಾನ್ ಖಾನ್
ಗಾರ್ಮೆಂಟ್ ವಲಯವನ್ನು ಬಿಟ್ಟು ಎಲ್ಲ ಉತ್ಪಾದನಾ ವಲಯ, ಕನ್ಸಟ್ರಕ್ಸನ್ ವಲಯಕ್ಕೆ ಅವಕಾಶ ನೀಡಲಾಗಿದೆ. ಕೋವಿಡ್ ಪೀಡಿತರಿಗೆ ಆಮ್ಲಕನಕದ ಕೊರತೆ ಇಲ್ಲ. ಯಾರೂ ಚಿಂತಿಸುವುದು ಬೇಡ. ಅಂಗಡಿ ಮುಂಗಟ್ಟುಕಾರರು ಈ ನಿಯಮಗಳನ್ನು ಪಾಲಿಸಿ, ಪೊಲೀಸ್ ಬಲ ಪ್ರಯೋಗಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ನಡೆಯಲಿದ್ದ ಎಲ್ಲ ಬಗೆಯ ಚುನಾವಣೆಗಳನ್ನೂ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…