14 ಶಾಸಕರು ರಾಜೀನಾಮೆ ಕೊಟ್ಟಿದ್ದೇವೆ, HDK ವಿರುದ್ಧ ಅಸಮಾಧಾನ;ವಿಶ್ವನಾಥ್
Team Udayavani, Jul 6, 2019, 6:26 PM IST
ಬೆಂಗಳೂರು: ಸರ್ಕಾರ ನಡೆಸುವವರ ಧೋರಣೆ ವಿರುದ್ಧ ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ. ಬಳ್ಳಾರಿ ಜಿಲ್ಲೆ ವಿಜಯನಗರ ಶಾಸಕ ಆನಂದ್ ಸಿಂಗ್ ಸೇರಿದಂತೆ ನಾವು ಒಟ್ಟು 14 ಮಂದಿ ರಾಜೀನಾಮೆ ನೀಡಿದ್ದೇವೆ ಎಂದು ಎಚ್.ವಿಶ್ವನಾಥ್ ತಿಳಿಸಿದ್ದಾರೆ.
ಶನಿವಾರ ಸಂಜೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸ್ಪೀಕರ್ ಗೆ ನಮ್ಮ ರಾಜೀನಾಮೆ ಸಲ್ಲಿಸಿದ್ದೇವೆ. ನಮ್ಮ ರಾಜೀನಾಮೆ ಅಂಗೀಕರಿಸುವ ವಿಶ್ವಾಸ ಇದೆ ಎಂದರು.
ಮೈತ್ರಿ ಸರ್ಕಾರ ತನ್ನ ಸ್ವಂತ ಶಾಸಕರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹಾಳು ಮಾಡಿದ್ದಾರೆ. ಇದು ಸಣ್ಣ ವಿಷಯ ಆದರೂ ಮಹತ್ವದ್ದು, ಶಿಕ್ಷಣ ಸಚಿವರ ಆಯ್ಕೆಯೂ ಸರಿ ಇಲ್ಲ ಎಂದು ಆರೋಪಿಸಿದರು.
ಪೊಲೀಸ್ ಭದ್ರತೆಯಲ್ಲಿ ತೆರಳಿದ ಅತೃಪ್ತ ಶಾಸಕರು:
ರಾಜ್ಯಪಾಲ ವಜೂಭಾಯ್ ವಾಲಾ ಅವರನ್ನು ಭೇಟಿಯಾದ ಅತೃಪ್ತ ಶಾಸಕರು, ಡಿಕೆ ಶಿವಕುಮಾರ್ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರಿಗೆ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಗೆ ರಾಜ್ಯಪಾಲರು ಸೂಚನೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ