ನಾಲ್ಕು ವರ್ಷಗಳ‌ಲ್ಲಿ  ನಾಡಿಗೆ ಬಂದ 143 ಚಿರತೆಗಳ ಸೆರೆ


Team Udayavani, Feb 7, 2018, 7:30 AM IST

06-24.jpg

ಮೈಸೂರು: ಆಹಾರ ಅರಸಿ ನಾಡಿಗೆ ಬರುವ ಚಿರತೆಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರುತ್ತಿದೆ. ಕಳೆದ ನಾಲ್ಕು ವರ್ಷಗಳಲ್ಲಿ ನಾಡಿಗೆ ಬಂದ 143 ಚಿರತೆಗಳನ್ನು ಸೆರೆಹಿಡಿದಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಪರಿಹಾರಾತ್ಮಕ ಕ್ರಮಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆ ಹಾಗೂ ಮೈಸೂರು ಮೃಗಾಲಯದ ಅಧಿಕಾರಿಗಳು ಮುಂದಾಗಿದ್ದಾರೆ.

ನಿಶಾಚರ ಪ್ರಾಣಿಯಾದ ಚಿರತೆ ರಾತ್ರಿ ವೇಳೆಯಲ್ಲಿ ಹೆಚ್ಚಾಗಿ ಸಂಚರಿಸುತ್ತದೆ. ಚಿರತೆಗಳ ಆವಾಸ ಸ್ಥಾನ ಅರಣ್ಯ ಪ್ರದೇಶವಾಗಿದ್ದರೂ ಹೆಚ್ಚು ವನ್ಯಪ್ರಾಣಿಗಳು ಕಂಡುಬರುವ ಪ್ರದೇಶಗಳಲ್ಲೂ ಹೊಂದಿಕೊಳ್ಳಬಲ್ಲದು. ಚಿರತೆಯು ಪ್ರಾಣಿಗಳನ್ನು ಬೇಟೆಯಾಡುವ ಮೂಲಕ ತನ್ನ ಆಹಾರವನ್ನು ಹುಡುಕಿಕೊಳ್ಳುತ್ತದೆ. ಹೆಚ್ಚಾಗಿ ಜಿಂಕೆ, ದನಕರುಗಳು, ನಾಯಿ ಇದರ ಬೇಟೆಯಾಗಿದೆ.

ನಗರೀಕರಣ, ಕೈಗಾರಿಕೀಕರಣ, ರಸ್ತೆ ಹಾಗೂ ರೈಲು ಮಾರ್ಗ, ನೀರಾವರಿ ಯೋಜನೆಗಳು… ಇವುಗಳಿಂದ ಅರಣ್ಯ ನಾಶವಾಗುತ್ತಿದೆ. ಹೀಗಾಗಿ ಚಿರತೆಗೆ ಜಿಂಕೆಗಳನ್ನು ಬೇಟೆಯಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸುಲಭವಾಗಿ ಆಹಾರವನ್ನು ಹುಡುಕಿಕೊಂಡು ಜನವಸತಿ ಪ್ರದೇಶಗಳತ್ತ ಬರುತ್ತಿವೆ ಎಂದು ವನ್ಯಜೀವಿ ತಜ್ಞರು ಮಾಹಿತಿ ನೀಡುತ್ತಾರೆ.

ಅಸಮರ್ಪಕ ವಿಲೇವಾರಿ: ಚಿರತೆಗಳು ನಾಡಿನತ್ತ ಬರಲು ಪ್ರಮುಖ ಕಾರಣ ಅಸಮರ್ಥಕ ವಿಲೇವಾರಿಯಾಗಿದೆ. ಜನವಸತಿ ಪ್ರದೇಶಗಳಲ್ಲಿ ಹಾಗೂ ಅವುಗಳ ಸುತ್ತಮುತ್ತ ಜನರು ನಡೆಸುವ ಧಾರ್ಮಿಕ ಆಚರಣೆಗಳಲ್ಲಿ ಮಿಕ್ಕ ಆಹಾರ ಪದಾರ್ಥಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಾರೆ. ಕಲ್ಯಾಣ ಮಂಟಪ, ಸಮುದಾಯ ಭವನ ಇನ್ನಿತರ ಕಡೆ ನಡೆಯುವ ಸಭೆ-ಸಮಾರಂಭದಲ್ಲಿ ಮಿಕ್ಕ ಆಹಾರ ಪದಾರ್ಥಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುತ್ತಿಲ್ಲ.

ನಗರ  ಮತ್ತು  ಜನವಸತಿ  ಪ್ರದೇಶಗಳಲ್ಲಿ ಘನತ್ಯಾಜ್ಯ ವಸ್ತುಗಳ ಸಮರ್ಪಕ ವಿಲೇವಾರಿ ಇಲ್ಲದಿರುವುದು. ಕಸಾಯಿ ಖಾನೆಗಳಲ್ಲಿನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಎಲ್ಲೆಂದರಲ್ಲಿ ಎಸೆಯುವುದರಿಂದ ಇಂತಹ ಸ್ಥಳಗಳಲ್ಲಿ ಆಹಾರ ತಿನ್ನಲು ನಾಯಿಗಳು ಬರುತ್ತವೆ. ಈ ಸಂದರ್ಭದಲ್ಲಿ ನಾಯಿಗಳನ್ನು ಸುಲಭವಾಗಿ ಬೇಟೆಯಾಡಲು ಚಿರತೆಗಳು ಬರುತ್ತಿರುವುದು ಅಧ್ಯಯನಗಳಿಂದ ದೃಢಪಟ್ಟಿದೆ.

ಮೃಗಾಲಯಕ್ಕೂ ಲಗ್ಗೆ: 2017ರ ಅ.26ರಂದು ಮೈಸೂರು ಮೃಗಾಲಯಕ್ಕೆ ಬಂದಿದ್ದ ಚಿರತೆಯನ್ನು ಸೆರೆ ಹಿಡಿದು ಕಾಡಿಗೆ ಬಿಡಲಾಗಿತ್ತು. ಕೆಲ ದಿನಗಳ ಹಿಂದೆ ಮೈಸೂರಿನ ಜೆ.ಪಿ.ನಗರ ಬಡಾವಣೆಯಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸಾಮಾಜಿಕ ಜಾಲತಾಣದಲ್ಲೂ ಹರಿದಾಡುತ್ತಿದೆ.

ಸಮಾಲೋಚನಾ ಸಭೆ: ಸೂಕ್ತ ಪರಿಹಾರಾತ್ಮಕ ಕ್ರಮಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆ ಹಾಗೂ ಮೈಸೂರು ಮೃಗಾಲಯದ ವತಿಯಿಂದ ಫೆ.8ರಂದು ಸಂಜೆ 4ಗಂಟೆಗೆ ಮೃಗಾಲಯದ ಆವರಣದಲ್ಲಿ ಸಮಾಲೋಚನಾ ಸಭೆ ಏರ್ಪಡಿಸಲಾಗಿದೆ. ಇಲ್ಲಿ ಮೈಸೂರು ಮಹಾ ನಗರಪಾಲಿಕೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಸ್ವಯಂಸೇವಾ ಸಂಸ್ಥೆಗಳು, ಪರಿಸರವಾದಿಗಳು ಹಾಗೂ ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯಲಾಗುತ್ತದೆ. ಚಿರತೆ ಹಾವಳಿ ತಡೆಗೆ ಕೈಗೊಳ್ಳಬೇಕಾದ ಮಾರ್ಗೋಪಾಯಗಳು ಮತ್ತು ನಿರ್ವಹಿಸಬೇಕಾದ ಜವಾಬ್ದಾರಿ ಕುರಿತು ಚರ್ಚೆ ನಡೆಯಲಿದೆ. ಚಿರತೆಗಳ ಆಹಾರ ಪದ್ಧತಿ, ಅವುಗಳ ಚಲನವಲನ, ಸೆರೆ ಹಿಡಿಯುವ ವಿಧಿವಿಧಾನಗಳು ಇತ್ಯಾದಿಗಳ ಬಗ್ಗೆ ಕಿರುಚಿತ್ರದ ಮೂಲಕ ಅಗತ್ಯ ಮಾಹಿತಿ ನೀಡಲಾಗುವುದು ಎಂದು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ತಿಳಿಸಿದ್ದಾರೆ.

ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.