ಕೋವಿಡ್-19 ಕುರಿತ ಸಂಶೋಧನೆಗೆ 15 ಪ್ರಾಜೆಕ್ಟ್ ಅಂತಿಮಗೊಳಿಸಿದ ಆರೋಗ್ಯ ವಿವಿ
Team Udayavani, Jun 23, 2020, 1:52 PM IST
ಬೆಂಗಳೂರು: ಕೋವಿಡ್-19 ಕುರಿತ ಸಂಶೋಧನೆಗೆ 50 ಪ್ರಾಜೆಕ್ಟ್ ಬಂದಿದ್ದು, ಅದರಲ್ಲಿ 15 ಅಂತಿಮಗೊಳಿಸಿದ್ದು, ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ಸಂಶೋಧನೆ ನಡೆಯಲಿದೆ ಎಂದು ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ಸಚ್ಚಿದಾನಂದ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೀವ್ ಗಾಂಧಿ ವಿವಿಯ 22ನೇ ಘಟಿಕೋತ್ಸವ ಜೂನ್ 25ರಂದು ನಡೆಯಲಿದೆ. ಪಿಎಚ್ ಡಿ ಮತ್ತು ಚಿನ್ನದ ಪದಕ ಪಡೆಯುವವರು ಮಾತ್ರ ಭಾಗವಹಿಸುತ್ತಾರೆ. ಉಳಿದಂತೆ ವಿದ್ಯಾರ್ಥಿಗಳು ಮತ್ತು ಅವರ ಪಾಲಕರು ವರ್ಚುವಲ್ ವ್ಯವಸ್ಥೆ ಮೂಲಕ ಪಾಲ್ಗೊಳ್ಳಲಿದ್ದಾರೆ. ಕೋವಿಡ್-19 ಸುರಕ್ಷತಾ ಕ್ರಮದೊಂದಿಗೆ ಗರಿಷ್ಠ 200 ಜನ ಮೀರಂತೆ ಕಾರ್ಯಕ್ರಮ ನಡೆಯಲಿದೆ ಎಂದು ವಿವರ ನೀಡಿದರು.
ಕೋವಿಡ್-19 ಸಂಶೋಧನೆಗೆ ಪ್ರಸ್ತಾವನೆ ಆಹ್ವಾನಿಸಿದ್ದೆವು. 50 ಪ್ರಸ್ತಾವನೆ ಬಂದಿದ್ದು, ಅದರಲ್ಲಿ 15 ಅಂತಿಮಗೊಳಿಸಿದ್ದೇವೆ. ಇದರಲ್ಲಿ ಪರಿಸರ ಸ್ನೇಹಿ ಗ್ರೀನ್ ಪಿಪಿಇ ಕಿಟ್ ಸಿದ್ಧಪಡಿಡುವ ಒಂದು ವಿಶೇಷ ಪ್ರಸ್ತಾವನೆ ಸೇರಿಕೊಂಡಿದೆ. ಅಲ್ಲದೆ, ವಿದ್ಯಾರ್ಥಿಗಳಿಗಾಗಿ ಐಡಿಯಾಥಾನ್ ಆಯೋಜಿಸಿದ್ದು, ಸೋಂಕು ತಡೆ ಕುರಿತ 200 ಹೊಸ ಐಡಿಯಾಗಳು ಬಂದಿದ್ದು, ಅದರಲ್ಲಿ 28 ಅಂತಿಮಗೊಳಿಸಿದ್ದೇವೆ ಎಂದರು.
ಈ ವರ್ಷ 36,434 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡುತ್ತಿದ್ದೇವೆ. ಒಟ್ಟಾರೆ ಶೇ.82.3ರಷ್ಟು ಫಲಿತಾಂಶ ಬಂದಿದ್ದು, ಕಳೆದ ವರ್ಷಕ್ಕಿಂತ ಸ್ವಲ್ಪ ಕಡಿಮೆಯಿದೆ. ಕೋವಿಡ್-19 ತಡೆ ಸಂಬಂಧ 100 ಕಾರ್ಯಕ್ರಮ ಮಾಡಿ, 2 ಲಕ್ಷ ವಾರಿಯರ್ಸ್ ಗೆ ತರಬೇತಿ ನೀಡಿದ್ದೇವೆ. ಜಿಲ್ಲಾವಾರು ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಒದಗಿಸಿದ್ದೇವೆ. ವೈದ್ಯಕೀಯ ಪರೀಕ್ಷೆ ಸಂಬಂಧ ಜೂನ್ 30ರಂದು ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ನಂತರ ತೀರ್ಮಾನಿಸಲಿದ್ದೇವೆ ಎಂದರು.
ಮೌಲ್ಯಮಾಪನ ಕುಲಸಚಿವ ಡಾ. ಲಿಂಗೇಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ