ನೆರೆಪರಿಹಾರ ಹಣವನ್ನೇ ನೀಡಿಲ್ಲ, 1610 ಕೋಟಿ ರೂ ಪ್ಯಾಕೇಜ್ ದೋಖಾ ಪ್ರಾಜೆಕ್ಟ್; HDK ಆರೋಪ
Team Udayavani, May 10, 2020, 1:53 PM IST
ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಸಂಕಷ್ಟ ಅನುಭವಿಸಿರುವ ಶ್ರಮಿಕ ವರ್ಗಕ್ಕೆ ಸರಕಾರ ಘೋಷಿಸಿರುವ 1610 ಕೋಟಿ ರೂ. ಪ್ಯಾಕೇಜ್ ದೋಖಾ ಪ್ರಾಜೆಕ್ಟ್ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಹಿಂದೆ ನೆರೆ ಹಾವಳಿಯಲ್ಲಿ ಮನೆ ಕಳೆದುಕೊಂಡವರಿಗೆ ಐದು ಲಕ್ಷ ಕೊಡುತ್ತೇವೆ ಎಂದರು. ಆದರೆ ಎಷ್ಟು ಜನರಿಗೆ ಎಷ್ಟು ಹಣ ನೀಡಿದ್ದಾರೆ ಎಂದು ಪ್ರಶ್ನಿಸಿದರು. ನೆರೆ ಪರಿಹಾರದಲ್ಲೂ ಜನರಿಗೆ ಮೋಸವಾಗಿದೆ. ಅದೇ ಈಗಲೂ ಮುಂದುವರಿಯುತ್ತದೆ ಎಂದರು.
ನಾನು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ರೈತರ ಸಾಲಮನ್ನಾ ಮಾಡುವಾಗ ಸರಿಯಾದ ಮಾಹಿತಿಯೊಂದಿಗೆ ನೀಡಿದ್ದೆ. ಆದರೆ ಈಗ ಯಾರು ಅರ್ಹರು, ಫಲಾನುಭವಿಗಳ ಆಯ್ಕೆ ಮಾನದಂಡ, ಮಾರ್ಗಸೂಚಿ ಇದ್ಯಾವುದೂ ಇಲ್ಲದೆ ಬರೀ ಘೋಷಣೆ ಮಾಡಲಾಗಿದೆ ಹಾಗಾಗಿ ಇದು ಘೋಷಣೆಯಾಗಿಯೇ ಇರಲಿದೆ ಎಂದರು.
ಸರಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿಲ್ಲ. ಕೋವಿಡ್-19 ಹೆಸರಿನಲ್ಲಿ ಜನರಿಗೆ ದೋಖಾ ಮಾಡುತ್ತಿದೆ ಎಂದು ಗಂಭೀರ ಆರೋಪಗಳನ್ನು ಮಾಡಿದರು.
ಬೆಳಗಾವಿಯ ಗಡಿಯಲ್ಲಿ 3-4 ಕಿ.ಮೀಟರ್ ನಲ್ಲಿ ಸಾವಿರಾರು ಕಾರ್ಮಿಕರು ಸೇರಿದ್ದಾರೆ. ಆದರೆ ಅವರಿಗೆ ಸರಕಾರದಿಂದ ಸರಿಯಾದ ನಿರ್ದೇಶನ ನೀಡುತ್ತಿಲ್ಲ. ಒಬ್ಬೊಬ್ಬ ಮಂತ್ರಿಗಳು ಅವರಿಗೆ ಬೇಕಾದ ರೀತಿ ಕೆಲಸ ಮಾಡುತ್ತಿದ್ದಾರೆ. ಇದು ಟೀಕೆ ಮಾಡುವ ಸಮಯವಲ್ಲ. ನಾನು ವಾಸ್ತವಾಂಶ ಹೇಳುತ್ತಿದ್ದೇನೆ. ಜನರಿಗೆ ಟೋಪಿ ಹಾಕುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ