ನಾಗರಹೊಳೆಯಲ್ಲಿ 1,920 ಕಿ.ಮೀ. ಫೈರ್‌ಲೈನ್‌ ನಿರ್ಮಾಣ


Team Udayavani, Jan 19, 2019, 1:10 AM IST

17.jpg

ಹುಣಸೂರು: ಮುಂಬರುವ ಬೇಸಿಗೆ-ಬಿರುಗಾಳಿಗೆ ಹರಡಬಹುದಾದ ಬೆಂಕಿ ಅನಾಹುತವನ್ನು ತಡೆ ಯಲು ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅರಣ್ಯ ಇಲಾಖೆ ಸರ್ವ ಸನ್ನದ್ಧವಾಗಿದ್ದು, ಫೈರ್‌ಲೈನ್‌ ನಿರ್ಮಿಸಿ ಕಟ್ಟೆಚ್ಚರ ವಹಿಸಿದೆ. ಈಗಾಗಲೇ ಉದ್ಯಾನದ ಎಲ್ಲ 8 ವಲಯಗಳಲ್ಲೂ ಬೆಂಕಿ ರೇಖೆ ನಿರ್ಮಿಸಲು ಬಹುತೇಕ ಕಡೆ ಗಿಡಗಂಟಿಗಳನ್ನು ತೆರವುಗೊಳಿಸಲಾಗಿದೆ.

1,920 ಕಿ.ಮೀ. ಬೆಂಕಿ ರೇಖೆ: ನಾಗರಹೊಳೆ, ಕಲ್ಲಹಳ್ಳ, ಆನೆಚೌಕೂರು, ವೀರನಹೊಸಹಳ್ಳಿ, ಮೇಟಿ ಕುಪ್ಪೆ, ಅಂತರಸಂತೆ, ಡಿ.ಬಿ.ಕುಪ್ಪೆ ಹಾಗೂ ಹುಣ ಸೂರು ವಲಯ ಸೇರಿ ಒಟ್ಟಾರೆ 1,920 ಕಿ.ಮೀ. ಬೆಂಕಿರೇಖೆ ನಿರ್ಮಿಸಲಾಗಿದ್ದು, ಮುಖ್ಯರಸ್ತೆಯಲ್ಲಿ 30 ಮೀಟರ್‌, ಇತರೆಡೆಗಳಲ್ಲಿ 10 ಮೀಟರ್‌ ಅಗಲದ ಫೈರ್‌ಲೈನ್‌ ಅಳವಡಿಸಲಾಗಿದೆ. 270 ಫೈರ್‌ ವಾಚರ್‌ ನೇಮಕ: ಇಡೀ ಉದ್ಯಾನಕ್ಕೆ 270 ಮಂದಿ ಫೈರ್‌ವಾಚರ್ಗಳನ್ನಾಗಿ ಅರಣ್ಯದಂಚಿನ ಹಾಡಿಗಳ ಆದಿವಾಸಿಗಳನ್ನು ಮೂರು ತಿಂಗಳ ಕಾಲನೇಮಿಸಿಕೊಳ್ಳಲಾಗಿದೆ. ಇವರಿಗೆ ಇಲಾಖೆ ಮಾರ್ಗಸೂಚಿಯಂತೆ ನಿತ್ಯ ಮಧ್ಯಾಹ್ನದ ಊಟ ಹಾಗೂ 320 ರೂ. ದಿನಗೂಲಿ ನೀಡಲಾಗುತ್ತದೆ.

ಇವರು ಬೆಂಕಿ ಬೀಳದಂತೆ ಎಚ್ಚರಿಕೆ ವಹಿಸುವ ಕಾರ್ಯದಲ್ಲಿ ನಿರತರಾಗುವರು. ಪ್ರತಿ ವಲಯಕ್ಕೂ ತಲಾ ನಾಲ್ಕು ಸ್ಪ್ರೆàಯರ್‌, ಬ್ಲೋವರ್‌, ವೀಡ್‌ಕಟರ್‌, ವಾಟರ್‌ ಟ್ಯಾಂಕ್‌ ಇರುವ ವಾಹನ ನೀಡಲಾಗಿದ್ದು, ವೀರನಹೊಸಹಳ್ಳಿಯಲ್ಲಿ 5 ಸಾವಿರ ಲೀ. ಸಾಮರ್ಥ್ಯದ ನೀರಿನ ಟ್ಯಾಂಕ್‌ ಹಾಗೂ 6 ಮಂದಿ ಸಿಬ್ಬಂದಿ ಹೊಂದಿರುವ ಕ್ಷಿಪ್ರ ಕಾರ್ಯಪಡೆ ವಾಹನವನ್ನು ಸನ್ನದಟಛಿವಾಗಿರಿಸಲಾಗಿದೆ. ಹೆಚ್ಚುವರಿ ವಾಹನ ಸೌಲಭ್ಯ ಕಲ್ಪಿಸಲಾಗಿದೆ.

ಎಲ್ಲ ಸಿಬ್ಬಂದಿಗೂ ವಾಕಿಟಾಕಿ: ಎಲ್ಲಾ ಅರಣ್ಯ ಸಿಬ್ಬಂದಿಗೂ ವಾಕಿಟಾಕಿ ವಿತರಿಸಿದ್ದು, ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಣ್ಣ ಅವಘಡ ಸಂಭವಿಸಿದರೂ ತಕ್ಷಣವೇ ಕೇಂದ್ರಕ್ಕೆ ಮಾಹಿತಿ ನೀಡುವ ವ್ಯವಸ್ಥೆ ಕಲ್ಪಿ ಸಲಾಗಿದೆ. ಅಲ್ಲದೇ 30 ವಾಚ್‌ ಟವರ್‌ ಗಳ ಮೂಲಕ ನಿಗಾವಹಿಸಲಾಗುತ್ತಿದೆ. ಮುನ್ನೆಚ್ಚರಿಕೆ ಯಾಗಿ ನಾಗರಹೊಳೆ, ವೀರನಹೊಸ ಹಳ್ಳಿ, ಅಂತರಸಂತೆ ವಲಯಗಳಲ್ಲಿ ಅಗ್ನಿಶಾಮಕ ವಾಹನ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ಮಾನವನ ಅತಿಕ್ರಮಣ ಪ್ರವೇಶ ತಡೆಯಲು ಪ್ರಥಮ ಬಾರಿಗೆ ಕಾಡಂಚಿನಲ್ಲಿ ಪ್ರತಿ ಮೂರು ಕಿ.ಮೀ.ಗೊಬ್ಬರಂತೆ ಫೈರ್‌ ವಾಚರ್‌ ನೇಮಿಸಲಾಗಿದೆ.

2 ಕೋಟಿ ವೆಚ್ಚ: ಉದ್ಯಾನದ ಬೆಂಕಿ ತಡೆ ನಿರ್ವಹಣೆಗಾಗಿ ಒಟ್ಟಾರೆ ಎರಡು ಕೋಟಿ ರೂ. ವೆಚ್ಚ ತಗುಲಲಿದ್ದು, ಬೆಂಕಿ ರೇಖೆ ನಿರ್ಮಾಣ, ಫೈರ್‌ ವಾಚರ್‌ಗಳ ಸಂಬಳ, ಊಟ, ವಾಹನ ಬಾಡಿಗೆ, ಪರಿಕರಗಳ ಖರೀದಿ ಸೇರಿ ಒಟ್ಟು 2 ಕೋಟಿ ರೂ.
ಖರ್ಚಾಗಲಿದೆ.

ಫೈರ್‌ಲೈನ್‌ ನಿರ್ಮಾಣ ಹೇಗೆ?
ಸುಮಾರು 643 ಚ.ಕಿ.ಮೀ. ವಿಸ್ತೀರ್ಣದ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನ ಅರಣ್ಯದೊಳಗೆ ಈ ಹಿಂದೆ ನಿರ್ಮಿಸಿಕೊಂಡಿದ್ದ ಮಾರ್ಗಗಳಲ್ಲಿ ಮೊದಲು ಬೆಳೆದಿರುವ ಲ್ಯಾಂಟಾನಾ, ಗಿಡಗಂಟಿಗಳನ್ನು ತೆರವುಗೊಳಿಸಿ, ಒಂದೆಡೆ ರಾಶಿಹಾಕಿ ಸುಡಲಾಗುತ್ತದೆ. ಬಳಿಕ ಮುಖ್ಯರಸ್ತೆಯಲ್ಲಿ 30 ಮೀಟರ್‌, ಇತರೆಡೆಗಳಲ್ಲಿ 10 ಮೀಟರ್‌ ಅಗಲದ ಫೈರ್‌ಲೈನ್‌ ನಿರ್ಮಿಸಲಾಗುತ್ತದೆ. ಇದರಿಂದ ಬೆಂಕಿ ಬಿದ್ದ ವೇಳೆ ಶೀಘ್ರವಾಗಿ ಸಿಬ್ಬಂದಿ ಹಾಗೂ ನೀರಿನ ಟ್ಯಾಂಕ್‌ಗಳನ್ನು ತೆಗೆದುಕೊಂಡು ಹೋಗಲು ಸಹಕಾರಿಯಾಗಲಿದೆ.

ಅರಣ್ಯಕ್ಕೆ ಬೆಂಕಿ ಬೀಳುವುದನ್ನು ತಡೆಯಲು ಇಲಾಖೆ ವಿಶೇಷ ಶ್ರಮವಹಿಸಿ ಸಾಕಷ್ಟು ಮುನ್ನೆಚ್ಚರಿಕೆ
ವಹಿಸಿದೆ. ಇನ್ನು 3 ತಿಂಗಳು ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಣ್ಗಾವಲಿನಲ್ಲಿ ಕಾರ್ಯನಿರ್ವಹಿಸುತ್ತೇವೆ. ಬೆಂಕಿ ಬೀಳದಂತೆ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಪ್ರಶಸ್ತಿ ನೀಡಿ
ಪ್ರೋತ್ಸಾಹಿಸಲಾಗುತ್ತಿದೆ.

● ನಾರಾಯಣಸ್ವಾಮಿ, ಹುಲಿಯೋಜನೆ ನಿರ್ದೇಶಕ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.