Paddy; 2.25 ಲಕ್ಷ ಮೆಟ್ರಿಕ್‌ ಟನ್‌ ಭತ್ತ ಖರೀದಿಗೆ ಅಸ್ತು


Team Udayavani, Nov 2, 2023, 12:56 AM IST

paddy

ಬೆಂಗಳೂರು: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ  ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ 2.25 ಲಕ್ಷ ಮೆಟ್ರಿಕ್‌ ಟನ್‌ ಭತ್ತ ಖರೀದಿಗೆ ಅನುಮತಿ ನೀಡಲಾಗಿದೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ‌ಗಳಂತಹ ಅಧಿಕೃತ ಸಂಗ್ರಹಣ ಏಜೆನ್ಸಿಗಳು ರೈತರಿಂದ 1.71 ಲಕ್ಷ ಮೆ. ಟನ್‌ ಪರಿವರ್ತಿತ ಅಕ್ಕಿ ಸೇರಿ ಒಟ್ಟು 2.25 ಲಕ್ಷ ಮೆ. ಟನ್‌ ಭತ್ತ ಖರೀದಿಗೆ ಅನುಮತಿ ನೀಡಲಾಗಿದ್ದು, ಪ್ರತೀ ಎಕರೆಯಿಂದ ಕನಿಷ್ಠ 25 ಕ್ವಿಂಟಾಲ್‌ನಿಂದ ಗರಿಷ್ಠ 40 ಕ್ವಿಂಟಾಲ್‌ವರೆಗೆ ಖರೀದಿಸಲು ಅವಕಾಶ ಇದೆ.

ಸಂಗ್ರಹಣ ಏಜೆನ್ಸಿಗಳು ರೈತರಿಂದ ಖರೀದಿಸಿದ ಭತ್ತವನ್ನು ಗೋದಾಮು ಗಳಲ್ಲಿ ಸಂಗ್ರಹಿಸಿ ಹಲ್ಲಿಂಗ್‌ಗಾಗಿ ಹತ್ತಿರದ ನೋಂದಾಯಿತ ಅಕ್ಕಿ ಗಿರಣಿ ಗಳಿಗೆ ಸಾಗಾಣಿಕೆ ಮಾಡಬೇಕು. ಸಾರ್ವಜನಿಕ ವಿತರಣ ಪದ್ಧತಿಯಡಿ ವಿತರಿಸಲಾಗುವ ಅಕ್ಕಿಯನ್ನು ಕಡ್ಡಾಯ ಸಾರವರ್ಧಿತಗೊಳಿಸಬೇಕು. ಇದಕ್ಕಾಗಿಬ್ಲೆಂಡರ್‌ ಯಂತ್ರ ಅಳವಡಿಸಿಕೊಂಡು ಹಲ್ಲಿಂಗ್‌ ಮಾಡಲು ನೋಂದಾಯಿಸಿ ಕೊಂಡಿರುವ ಅಕ್ಕಿ ಗಿರಣಿಗಳನ್ನೇ ಆಯ್ಕೆ ಮಾಡಿಕೊಳ್ಳಬೇಕು. ಭತ್ತ ಸರಬರಾಜು ಮಾಡಿದ ರೈತರ ಬ್ಯಾಂಕ್‌ ಖಾತೆಗೆ 15 ದಿನದೊಳಗೆ ನೇರ ನಗದು ವರ್ಗಾವಣೆ ಮಾಡಬೇಕು ಎಂದು ನಿಬಂಧನೆಗಳನ್ನು ವಿಧಿಸಲಾಗಿದೆ.

ನ. 15ರಿಂದ ನೋಂದಣಿ

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್‌ಗಳನ್ನು ನ. 5ರೊಳಗೆ ರಚಿಸಿ, ಮೊದಲ ಸಭೆ ನಡೆಸಬೇಕು. ನ. 20ರೊಳಗೆ ಜಿಲ್ಲಾ ಮಟ್ಟದಲ್ಲಿ ಅಕ್ಕಿ ಗಿರಣಿಗಳ ಹಲ್ಲಿಂಗ್‌ ಸಾಮರ್ಥ್ಯ, ಭತ್ತ ಸಂಗ್ರಹಣ ಸಾಮರ್ಥ್ಯ, ಪರಿವರ್ತಿತ ಅಕ್ಕಿಯ ಸಾರವರ್ಧನೆ ಬಗ್ಗೆ ಟಾಸ್ಕ್ಫೋರ್ಸ್‌ನಿಂದ ಮಾಹಿತಿ ಸಂಗ್ರಹಿಸಬೇಕು. ಬೆಂಬಲ ಬೆಲೆಯಡಿ ಭತ್ತ ಖರೀದಿ ಬಗ್ಗೆ ಡಿ. 30ರ ವರೆಗೆ ರೈತರಿಗೆ ಸೂಕ್ತ ಮಾಹಿತಿ ನೀಡಬೇಕು. ಭತ್ತ ಸರಬರಾಜು ಮಾಡಲು ಮುಂದೆ ಬರುವ ರೈತರಿಗೆ ನ. 15ರಿಂದ ನೋಂದಣಿ ಮಾಡಿಕೊಳ್ಳಲು ಅವಕಾಶವಿದ್ದು, ಡಿ. 31ರೊಳಗಾಗಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಡಿ. 31ರಿಂದ 2024ರ ಮಾ. 31ರೊಳಗಾಗಿ ರೈತರಿಂದ ಭತ್ತ ಖರೀದಿಸಿ, ಮಿಲ್‌ಗ‌ಳಲ್ಲಿ ಶೇಖರಿಸಿ, ಸಾರವರ್ಧಿತ ಅಕ್ಕಿಯನ್ನಾಗಿ ಪರಿವರ್ತಿಸುವ ಕಾರ್ಯ ಪೂರ್ಣಗೊಂಡಿರಬೇಕು ಎಂದು ಷರತ್ತು ವಿಧಿಸಲಾಗಿದೆ.

ಎಷ್ಟು  ಖರೀದಿ (ಎಕರೆಗೆ)

ಎಷ್ಟು  ಖರೀದಿ (ಎಕರೆಗೆ)     ಗರಿಷ್ಠ 40 ಕ್ವಿಂಟಾಲ್‌

ಧಾನ್ಯ    ಬೆಂಬಲ ಬೆಲೆ (ಪ್ರತೀ ಕ್ವಿಂಟಾಲ್‌ಗೆ)

ಭತ್ತ (ಸಾಮಾನ್ಯ)   2,183 ರೂ.

ಭತ್ತ (ಗ್ರೇಡ್‌-ಎ)   2,203 ರೂ.

ಬಿಳಿಜೋಳ (ಹೈಬ್ರಿಡ್‌)  3,180 ರೂ.

ಬಿಳಿಜೋಳ (ಮಾಲ್ದಂಡಿ)   3,225 ರೂ.

ರಾಗಿ   3,846 ರೂ.

ಟಾಪ್ ನ್ಯೂಸ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.