ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ


Team Udayavani, Sep 22, 2021, 10:30 PM IST

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ 2010-11ರಿಂದ 2021ರ ಆಗಸ್ಟ್‌ ಅಂತ್ಯಕ್ಕೆ 2.33 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಬುಧವಾರ ಬಿಜೆಪಿ ಸದಸ್ಯ ಹಣಮಂತ ನಿರಾಣಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಅವಧಿಯಲ್ಲಿ ಎರಡೂ ಜಿಲ್ಲೆಗಳಲ್ಲಿ 3.45 ಲಕ್ಷ ಮನೆಗಳು ಅನುಮೋದನೆಗೊಂಡಿದ್ದು, ಅದರಲ್ಲಿ 2.33 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗಿದೆ. 39 ಸಾವಿರ ಮನೆಗಳು ಪ್ರಗತಿಯಲ್ಲಿದ್ದು, 6,493 ಮನೆಗಳು ಪ್ರಾರಂಭವಾಗಬೇಕಿದೆ. 65 ಸಾವಿರ ಮನೆಗಳು ರದ್ದು ಅಥವಾ ಬ್ಲಾಕ್‌ ಆಗಿವೆ ಎಂದು ಮಾಹಿತಿ ನೀಡಿದ್ದಾರೆ.

ಬಾಲಕೋಟೆ ಜಿಲ್ಲೆಯಲ್ಲಿ 98,260 ಮನೆಗಳು ಅನುಮೋದನೆಗೊಂಡಿದ್ದು, 54,916 ಮನೆಗಳು ಪೂರ್ಣಗೊಳಿಸಲಾಗಿದೆ. 13,764 ಮನೆಗಳು ಪ್ರಗತಿಯಲ್ಲಿವೆ. 755 ಮನೆಗಳು ಪ್ರಾರಂಭವಾಗಬೇಕಿದ್ದು, 28,825 ಮನೆಗಳನ್ನು ರದ್ದು ಅಥವಾ ಬ್ಲಾಕ್‌ ಮಾಡಲಾಗಿದೆ. ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿ 2.47 ಲಕ್ಷ ಮನೆಗಳು ಅನುಮೋದನೆಗೊಂಡಿದ್ದು, 1.78 ಲಕ್ಷ ಮನೆಗಳು ಪೂರ್ಣಗೊಂಡಿವೆ. 25, 884 ಮನೆಗಳು ಪ್ರಗತಿಯಲ್ಲಿವೆ. 5,738 ಮನೆಗಳು ಪ್ರಾರಂಭವಾಗಬೇಕಿದ್ದು, 36,979 ಮನೆಗಳು ರದ್ದು ಅಥವಾ ಬ್ಲಾಕ್‌ ಆಗಿವೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿ : 28ರಿಂದ ಸವದತ್ತಿ ಶ್ರೀ ಯಲ್ಲಮ್ಮ ದೇವಿ ದರ್ಶನ ಭಾಗ್ಯ

ಅದೇ ರೀತಿ ಬಾಗಲಕೋಟೆ ಜಿಲ್ಲೆಯಲ್ಲಿ 2002-03ರಿಂದ 2021-22ನೇ ಸಾಲಿನವರೆಗೆ ಗ್ರಾಮೀಣ ನಿವೇಶನಕ್ಕೆ 291 ಎಕರೆ ಮತ್ತು ನಗರ ನಿವೇಶನಕ್ಕೆ 261 ಎಕರೆ ಜಮೀನನ್ನು ಖಾಸಗಿಯವರಿಂದ ಖರೀದಿಸಲಾಗಿದ್ದು, ಇದಕ್ಕಾಗಿ ಕ್ರಮವಾಗಿ 3.67 ಕೋಟಿ ರೂ. ಮತ್ತು 19.54 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಗ್ರಾಮೀಣ ನಿವೇಶನಕ್ಕೆ 24 ಎಕರೆ, ನಗರ ನಿವೇಶನಕ್ಕೆ 81 ಎಕರೆ ಜಮೀನು ಖರೀದಿಸಲಾಗಿದ್ದು, ಅದಕ್ಕಾಗಿ 73 ಲಕ್ಷ ಮತ್ತು 9.60 ಕೋಟಿ ರೂ. ಹಣ ಸೇರಿ ಎರಡೂ ಜಿಲ್ಲೆಗಳಲ್ಲಿ ಒಟ್ಟು 658 ಎಕರೆಗೆ 33.55 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

3 ಲಕ್ಷ ವಸತಿರಹಿತರು: ಬಾಗಲಕೋಟೆ ಜಿಲ್ಲೆಯಲ್ಲಿ 61,448 ಗ್ರಾಮೀಣ, 22,942 ನಗರ ವಸತಿ ರಹಿತರು ಸೇರಿ ಒಟ್ಟು 84,390 ವಸತಿರಹಿತರು. 32 ಸಾವಿರ ಗ್ರಾಮೀಣ ಮತ್ತು 16 ಸಾವಿರ ನಗರ ನಿವೇಶನ ರಹಿತರು ಸೇರಿ ಒಟ್ಟು 48,210 ನಿವೇಶನ ರಹಿತರು ಇದ್ದಾರೆ. ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿ 2.04 ಲಕ್ಷ ಗ್ರಾಮೀಣ, 55,273 ನಗರ ವಸತಿ ರಹಿತರು ಸೇರಿ 2.37 ಲಕ್ಷ ವಸತಿರಹಿತರು. 19,654 ಗ್ರಾಮೀಣ, 27,643 ನಗರ ನಿವೇಶನರಹಿತರು ಸೇರಿ 47,297 ನಿವೇಶನ ರಹಿತರು ಇದ್ದಾರೆ. ಎರಡೂ ಜಿಲ್ಲೆಗಳಲ್ಲಿ ಒಟ್ಟಾರೆ 3.21 ಲಕ್ಷ ವಸತಿರಹಿತರು ಮತ್ತು 95,507 ನಿವೇಶನ ರಹಿತರು ಇದ್ದಾರೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.