ಬಾವಿಗೆ ಆಕಸ್ಮಿಕವಾಗಿ ಬಿದ್ದ ತಾಯಿ, ಮಕ್ಕಳಿಬ್ಬರ ದುರ್ಮರಣ
2 ದಿನದ ಹಿಂದೆ ಸುರಿದ ಭಾರೀ ಮಳೆಗೆ ತುಂಬಿಕೊಂಡಿದ್ದ ಬಾವಿ
Team Udayavani, Jun 9, 2019, 4:16 PM IST
ಸಾಂದರ್ಭಿಕ ಚಿತ್ರ
ಚಿಕ್ಕಬಳ್ಳಾಪುರ: ತಾಯಿ ಮತ್ತು ಮಕ್ಕಳಿಬ್ಬರು ಆಕಸ್ಮಿಕವಾಗಿ ಬಾವಿಗೆಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಭಾನುವಾರ ತಾಲೂಕಿನ ತಿಪ್ಪೇನಹಳ್ಳಿಯಲ್ಲಿ ನಡೆದಿದೆ.
ವಿಜಯಾ(30) ಮತ್ತುಮಕ್ಕಳಾದ ಅಜಯ್ (10), ಧನಲಕ್ಷ್ಮೀ (8) ಮೃತ ದುರ್ದೈವಿಗಳು.
ಬಟ್ಟೆ ತೊಳೆಯಲೆಂದು ತೆರಳಿದ್ದ ವೇಳೆ ಆಕಸ್ಮಿಕ ವಾಗಿ ಧನಲಕ್ಷ್ಮೀ ಬಾವಿಗೆ ಆಯತಪ್ಪಿ ಬಿದ್ದಿದ್ದಾಳೆ. ಆಕೆಯನ್ನುರಕ್ಷಿಸಲೆಂದು ಅಜಯ್ ತೆರಳಿದ್ದು ಆತನೂ ಬಾವಿಗೆ ಬಿದ್ದಿದ್ದಾನೆ. ಮಕ್ಕಳಿಬ್ಬರನ್ನು ರಕ್ಷಿಸಲೆಂದು ತೆರಳಿದ ವಿಜಯಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.
ಪತ್ನಿ ಮತ್ತು ಮಕ್ಕಳು ಮನೆಗೆ ವಾಪಾಸಾಗದೆ ಇದ್ದುದರಿಂದ ಹುಡುಕಾಟಕ್ಕೆ ಆಗಮಿಸಿದ ಪತಿ ನಾಗರಾಜು ಅವರು ಆಗಮಿಸಿ ನೋಡಿದಾಗ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದು ತಿಳಿದಿದೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ