2 ದಿನ ಸಾಧಾರಣ ಮಳೆ?
Team Udayavani, Mar 10, 2020, 3:03 AM IST
ಬೆಂಗಳೂರು: ಮಹಾರಾಷ್ಟ್ರದಿಂದ ತಮಿಳುನಾಡು ದಕ್ಷಿಣ ಭಾಗದ ಒಳಭಾಗದವರೆಗೆ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದ ಉತ್ತರ ಒಳನಾಡು ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಬೀದರ್, ರಾಯಚೂರು, ಯಾದಗಿರಿ, ಬಳ್ಳಾರಿ ಹಾಗೂ ದಕ್ಷಿಣ ಒಳನಾಡಿದ ಕೋಲಾರ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಸೇರಿ ವಿವಿಧೆಡೆ ಮುಂದಿನ ಎರಡು ದಿನ ತುಂತುರು ಮಳೆ ಸಾಧ್ಯತೆ ಇದೆ ಎಂದು ಕೆಎಸ್ಎನ್ಡಿಎಂಸಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಗಾಳಿಯ ಒತ್ತಡ ಕಡಿಮೆಯಾದ ಪ್ರದೇಶದಲ್ಲಿ ವಾಡಿಕೆಗಿಂತ 2ಡಿ.ಸೆ.ಗರಿಷ್ಠ ಉಷ್ಣಾಂಶ ಕಡಿಮೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಸೋಮವಾರ ಬೆಳಗ್ಗೆ 8.30ಕ್ಕೆ ಕಲಬುರಗಿಯಲ್ಲಿ ಗರಿಷ್ಠ 35.8 ಡಿ.ಸೆ.ಗರಿಷ್ಠ ಉಷ್ಣಾಂಶ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.2 ಡಿ.ಸೆ. ಕನಿಷ್ಠ ಉಷ್ಣಾಂಶ ಇರುವುದು ವರದಿಯಾಗಿದೆ.