

Team Udayavani, May 6, 2019, 3:00 AM IST
ಬೆಂಗಳೂರು: ಕಳೆದ ಎರಡು ದಿನಗಳಿಂದ ಬೇಸಿಗೆಯ ಧಗೆಗೆ ಕಂಗೆಟ್ಟಿದ್ದ ರಾಜ್ಯದ ಜನರಿಗೆ ಭಾನುವಾರದ ಮಳೆ ತಂಪೆರೆದಿದೆ. ಜತೆಗೆ ಕೆಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾದ ಪರಿಣಾಮ ಬಿಸಿಲಿಗೆ ಬಾಯೆ¤ರೆದಿದ್ದ ಭೂಮಿ ತಣ್ಣಗಾಗಿದೆ.
ಮೋಡಗಳ ನಡುವಿನ ಅಂತರದ ಕೊರತೆಯಿಂದ ಗಾಳಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾನುವಾರ ಮಳೆಯಾಗಿದೆ.
ಭಾನುವಾರ ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ಕೋಲಾರ, ಬೆಳಗಾವಿ, ಧಾರವಾಡ ಸೇರಿ ಪ್ರಮುಖ ಭಾಗಗಳಲ್ಲಿ ಮಳೆಯಾಗಿದೆ.
ಮುಂದಿನ ಎರಡು ದಿನಗಳು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
Ad
You seem to have an Ad Blocker on.
To continue reading, please turn it off or whitelist Udayavani.