ರಾಜ್ಯದಲ್ಲಿ 2 ಭೀಕರ ಅಪಘಾತಗಳು : 14 ಮಂದಿ ದಾರುಣ ಸಾವು 


Team Udayavani, Mar 23, 2019, 2:14 AM IST

accident.jpg

ವಿಜಯಪುರ/ಸಿಂದಗಿ: ಸಾವಿನ ಹೆದ್ದಾರಿ ಎಂದೇ ಕುಖ್ಯಾತಿ ಪಡೆದಿರುವ ವಿಜಯಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿ-218ರ ಚಿಕ್ಕಸಿಂದಗಿ ಬಳಿ ಶುಕ್ರವಾರ ನಸುಕಿನ ಜಾವ ಕ್ರೂಸರ್‌ ಹಾಗೂ ಕ್ಯಾಂಟರ್‌ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, 6 ಜನರು ಗಂಭೀರ ಗಾಯಗೊಂಡಿದ್ದಾರೆ.

ಗೋವಾ ಪ್ರವಾಸ ಮುಗಿಸಿ ಮರಳಿ ಕಲಬುರಗಿ ಜಿಲ್ಲೆಯ ಚಿತ್ತಾಪುರಕ್ಕೆ ಹೊರಟಿದ್ದ ಪ್ರವಾಸಿಗರಿದ್ದ ಕ್ರೂಸರ್‌ ಹಾಗೂ ವಿಜಯಪುರ ಕಡೆಗೆ ಹೊರಟಿದ್ದ ಕ್ಯಾಂಟರ್‌ ಮಧ್ಯೆ ಶುಕ್ರವಾರ ಬೆಳಗ್ಗೆ 5:30ಕ್ಕೆ ಚಿಕ್ಕಸಿಂದಗಿ ಹೊರ ವಲಯದಲ್ಲಿ ಮುಖಾಮುಖೀ ಆಪಘಾತ ಸಂಭವಿಸಿದೆ. ಆಪಘಾತದ ಭೀಕರತೆಗೆ ಕ್ರೂಸರ್‌ನಲ್ಲಿದ್ದ 8 ಜನರು ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದಾರೆ. ಕಬ್ಬಿಣದ ಸರಳುಗಳ ಮಧ್ಯೆ ಸಿಕ್ಕಿಕೊಂಡಿದ್ದ ಹಲವರ ಶವಗಳನ್ನು ಪ್ರಯಾಸದಿಂದ ಹೊರ ತೆಗೆಯಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಿಸದೇ ಓರ್ವ ಮೃತಪಟ್ಟಿದ್ದಾನೆ.

ಮೃತರೆಲ್ಲರೂ ಚಿತ್ತಾಪುರ ಪಟ್ಟಣದ ಕ್ರೂಸರ್‌ ಚಾಲಕ ಶ್ರೀನಾಥ ಈಶ್ವರಪ್ಪ ನಾಲವಾರ (25), ಅಂಬರೀಷ್‌ ಲಕ್ಷ್ಮಣ ದೊರೆ (30), ಯೂನುಸ್‌ ಸರ್ವರಪಟೇಲ್‌ ಕಡಬೂರ (25), ಸಾಗರ ಶಂಕ್ರಪ್ಪ ದೊಡಮನಿ (22), ಚಾಂದ ಮಶ್ಯಾಕಸಾಬ ಮುಜಾವರ (24), ಗುರುರಾಜ ಸಾಬಣ್ಣ ಹಕೀಂ (35), ಶಾಕೀರ್‌ ಅಬ್ದುಲ್‌ ರಹೀಮ್‌ ಶೇಖ (27), ಅಜೀಮ್‌ ಅಬ್ದುಲ್‌ ರಹೀಂ ಶೇಖ (35) ಹಾಗೂ ಮೂನ್ಸುಫ್‌ ಸರ್ವರ ಪಟೇಲ್‌ ಕಡಬೂರ (28) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಂಜೂರ ಸರ್ವರಸಾಬ ಕಡಬೂರ (32), ಆಕಾಶ ಲಕ್ಷ್ಮಣ ದೊರೆ (20), ಮಲ್ಲಿಕಾರ್ಜುನ ಬಸವರಾಜ ಜಮಾದಾರ (29), ಸದ್ದಾಂ (25) ಹಾಗೂ ಕ್ಯಾಂಟರ್‌ ಚಾಲಕ ಸೀಮಾಂಧ್ರದ ಪಶ್ಚಿಮ ಗೋದಾವರಿ ಜಿಲ್ಲೆಯ ತಾಡಪಲ್ಲಿಗುಡಂನ ಸೋಪೇಠಿ ಆನಂದ ನಾಗೇಶ್ವವರರಾವ್‌ (25) ಹಾಗೂ ಕ್ಲೀನರ್‌ ಸಾಜೀದ್‌ ಇಸ್ಮಾಯಿಲ್‌ ಖದರಬಾಬು (22) ಅವರನ್ನು ಸಿಂದಗಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

 5 ಮಂದಿ ಸಾವು
 ನಾಗಮಂಗಲ:
ಪ್ಯಾಸೆಂಜರ್‌ ಆಟೋಗೆ ಟಿಪ್ಪರ್‌ ಡಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಸುಂಕನಹಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಈ ದುರ್ಘ‌ಟನೆಯಲ್ಲಿ ಪ್ಯಾಸೆಂಜರ್‌ ಆಟೋ ಚಾಲಕ ಸತೀಶ್‌, ಕಾಳೇನಹಳ್ಳಿ ಅರಸಮ್ಮ, ಕಾಂತಾಪುರದ ಬೋರಲಿಂಗ, ಸುರೇಶ್‌ ಹಾಗೂ ಸುಖಧರೆ ಗ್ರಾಮದ ಕುಮಾರ ಎಂಬವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬಸವಶೆಟ್ಟಿ, ಪುಟ್ಟ ಸೇರಿದಂತೆ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸಮೀಪದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಗಮಂಗಲ ಕಡೆಯಿಂದ ಬೋಗಾದಿ ಕಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಆಟೋಗೆ ನಾಗಮಂಗಲ ಕಡೆಗೆ ಬರುತ್ತಿದ್ದ ಬಾಲಾಜಿ ಕನ್‌ಸ್ಟ್ರಕ್ಷನ್‌ಗೆ ಸೇರಿದ ಟಿಪ್ಪರ್‌ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪ ಘಾತಕ್ಕೊಳಗಾದ ಲಾರಿಯನ್ನು ರಸ್ತೆಯಿಂದ ತೆರವುಗೊಳಿ ಸುವ ಪ್ರಯತ್ನಕ್ಕೆ ಪೊಲೀಸರು ಮುಂದಾದರಾದರೂ, ಸ್ಥಳೀಯರು ಅವಕಾಶ ನೀಡಲಿಲ್ಲ. ಸ್ಥಳದಲ್ಲಿ ಪ್ರತಿಭಟನೆ
ನಡೆಸುತ್ತಿರುವುದರಿಂದ ಬಿಗುವಿನ ವಾತಾವರಣ ನೆಲೆಸಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.