ಮಹಾರಾಷ್ಟ್ರ  ಜಲಾಶಯಗಳಿಂದ ಕೃಷ್ಣಾಗೆ 2 ಟಿಎಂಸಿ ನೀರು


Team Udayavani, Mar 11, 2017, 8:12 AM IST

11-STATE-1.jpg

ಬೆಳಗಾವಿ: ಕರ್ನಾಟಕದ ಗಡಿ ಭಾಗದಲ್ಲಿ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆ ಮಹಾರಾಷ್ಟ್ರದ ಜಲಾಶಯಗಳಿಂದ ಕೃಷ್ಣಾ ನದಿಗೆ ಏಪ್ರಿಲ್‌ ಒಂದರಿಂದ ಎರಡು ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವುದಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ರಾಜ್ಯ ಬಿಜೆಪಿ ನಿಯೋಗಕ್ಕೆ ತಿಳಿಸಿದರು.

ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವ ಸಂಬಂಧ ರಾಜ್ಯದ ಬಿಜೆಪಿ ನಾಯಕರು ಶುಕ್ರವಾರ ಮುಂಬೈನಲ್ಲಿ ಅವರನ್ನು ಭೇಟಿ
ಮಾಡಿ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ನೀರು ಬಿಡುಗಡೆಗೆ ತಕ್ಷಣ ಆದೇಶ ಹೊರಡಿಸಿದರು.
ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಹಾಗೂ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ನೇತೃತ್ವದಲ್ಲಿ ತೆರಳಿದ ರಾಜ್ಯದ ಬಿಜೆಪಿ
ಶಾಸಕರ ನಿಯೋಗ, ಕೃಷ್ಣಾ ನದಿ ತೀರದ ಕರ್ನಾಟಕದ ಜನ ಹಾಗೂ ಜಾನುವಾರುಗಳಿಗೆ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸುವ ಕುರಿತು
ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿತು.

ಕರ್ನಾಟಕವು ಕಳೆದ ಎರಡು ವರ್ಷಗಳಿಂದ ಭೀಕರ ಬರಗಾಲ ಎದುರಿಸುತ್ತಿದೆ. ಅದರಲೂ ಉತ್ತರ ಕರ್ನಾಟಕದ ಕೃಷ್ಣಾ ನದಿ ತೀರದ ಜನ- ಜಾನುವಾರುಗಳ ಪರಿಸ್ಥಿತಿ ಶೋಚನೀಯವಾಗಿದೆ. ಹೀಗಾಗಿ ಮಹಾರಾಷ್ಟ್ರದ ಜಲಾಶಯಗಳಲ್ಲಿ ಲಭ್ಯವಿರುವ ನೀರಿನಲ್ಲಿ ಎರಡು ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗೆ ಮನವರಿಕೆ ಮಾಡಿಕೊಡಲಾಯಿತು ಎಂದು ಪ್ರಭಾಕರ ಕೋರೆ ತಿಳಿಸಿದರು. 

ಕಳೆದ ವರ್ಷವೂ ಇದೇ ರೀತಿ ಭೀಕರ ಬರಗಾಲವಿದ್ದ ಸಂದರ್ಭದಲ್ಲಿ ನಮ್ಮ ಮನವಿಗೆ ಸ್ಪಂದಿಸಿ ಕೃಷ್ಣಾ ನದಿಗೆ ಉಚಿತ ನೀರು ಹರಿಸುವ ಮೂಲಕ ಈ ಭಾಗದ ಜನತೆಗೆ ಅನುಕೂಲ ಕಲ್ಪಿಸಿಕೊಡಲಾಗಿತ್ತು. ಇದಕ್ಕೆ ಉತ್ತರ ಕರ್ನಾಟಕದ ಜನರು ನಿಮಗೆ ಆಭಾರಿಯಾಗಿದ್ದಾರೆ. ಈ ಬಾರಿಯೂ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಳ್ಳಲಾಯಿತು ಎಂದು ನಿಯೋಗದಲ್ಲಿದ್ದ ಶಾಸಕ ಲಕ್ಷ್ಮಣ ಸವದಿ
ಉದಯವಾಣಿಗೆ ತಿಳಿಸಿದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಏ.1 ರಿಂದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಅಡಿ ನೀರು ಬಿಡುಗಡೆ ಮಾಡಲು ಒಪ್ಪಿದರು ಎಂದು ಹೇಳಿದರು.

ನಿಯೋಗದಲ್ಲಿ ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ, ವಿಪ ಸದಸ್ಯಮಹಾಂತೇಶ ಕವಟಗಿಮಠ, ಶಾಸಕರಾದ ರಾಜು ಕಾಗೆ, ದುರ್ಯೋಧನ ಐಹೊಳೆ, ಶಶಿಕಲಾ ಜೊಲ್ಲೆ , ಇಚಲಕರಂಜಿಯ ಶಾಸಕ ಸುರೇಶ ಹಳವಣಕರ ಹಾಗೂ ಬಿಜೆಪಿ ಮುಖಂಡ ಅಣ್ಣಾಸಾಬ ಜೊಲ್ಲೆ ಉಪಸ್ಥಿತರಿದ್ದರು.  

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.