2 ವರ್ಷ ಕಳೆದರೂ ಬಾರದ ಫ‌ಲಿತಾಂಶ: ಪಿಎಂಗೆ ದೂರು


Team Udayavani, Jul 10, 2019, 3:00 AM IST

Udayavani Kannada Newspaper

ಪುತ್ತೂರು: ದೇಶಾದ್ಯಂತ ಹಲವಾರು ವಿದ್ಯಾರ್ಥಿಗಳು ಭಾರತ್‌ ಸ್ಕೌಟ್‌ ಹಾಗೂ ಗೈಡ್ಸ್‌ನಲ್ಲಿ ರಾಷ್ಟ್ರಪತಿ ಪುರಸ್ಕಾರ್‌ ರಾಷ್ಟ್ರೀಯ ಪರೀಕ್ಷೆ ಬರೆದು ಎರಡು ವರ್ಷ ಕಳೆದರೂ ಇನ್ನೂ ಫಲಿತಾಂಶ ಬಂದಿಲ್ಲ ಎಂದು ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಸಾತ್ವಿಕ್‌ ಶರ್ಮ ಬಿ.ಎಸ್‌. ಅವರು ಪ್ರಧಾನಮಂತ್ರಿಗೆ ದೂರು ನೀಡಿದ್ದಾರೆ.

2017ರ ಪರೀಕ್ಷೆಯ ಫಲಿತಾಂಶ ಇನ್ನೂ ಬಂದಿಲ್ಲ. ಈ ಕುರಿತು 2018ರ ಡಿಸೆಂಬರ್‌ನಲ್ಲಿ ವಿದ್ಯಾರ್ಥಿಯು ಪಿಜಿ ಪೋರ್ಟಲ್‌ ಮೂಲಕ ಪ್ರಧಾನಿಗೆ ದೂರು ನೀಡಿದ್ದು, ಆ ದೂರನ್ನು ಕ್ರೀಡಾ ಸಚಿವಾಲಯಕ್ಕೆ ಕಳುಹಿಸಿ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಪ್ರತಿಕ್ರಿಯಿಸಲಾಗಿತ್ತು. ಅಲ್ಲಿಂದ ಅದನ್ನು ಭಾರತ್‌ ಸ್ಕೌಟ್‌ ಹಾಗೂ ಗೈಡ್ಸ್‌ಗೆ ಕಳುಹಿಸಲಾಗಿದೆ ಎಂದು ಕ್ರೀಡಾ ಸಚಿವಾಲಯ ತಿಳಿಸಿತ್ತು.

ಆದರೂ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ಸ್ಕೌಟ್‌, ಗೈಡ್ಸ್‌ನಲ್ಲಿ ಸಕ್ರಿಯರಾಗಿರುವ ವಿದ್ಯಾರ್ಥಿಯ ತಂದೆ ರಾಜೇಶ ಕೃಷ್ಣಪ್ರಸಾದ ಅವರು ಆರ್‌ಟಿಐ ಮೂಲಕವೂ ವಿಚಾರಿಸಿದರು. ಒಮ್ಮೆ ಫಲಿತಾಂಶ ಸಿದ್ಧವಾಗಿದೆ ಎಂಬ ಉತ್ತರ ಬಂದರೆ, ಮತ್ತೂಮ್ಮೆ ಫಲಿತಾಂಶದ ಪ್ರಕ್ರಿಯೆ ನಡೆಯುತ್ತಿದೆ ಎಂಬ ಉತ್ತರ ಲಭ್ಯವಾಗಿತ್ತು.

ಹೀಗಾಗಿ ವಿದ್ಯಾರ್ಥಿ ಸಾತ್ವಿಕ್‌ ಶರ್ಮ ಜೂ. 7ರಂದು ಮತ್ತೆ ಪ್ರಧಾನಿಗೆ ದೂರು ನೀಡಿದ್ದಾರೆ. ಜತೆಗೆ ಸ್ಕೌಟ್‌, ಗೈಡ್ಸ್‌ ಪ್ರಧಾನ ಕಚೇರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ಅದು ರಾಷ್ಟ್ರಪತಿ ಭವನದಲ್ಲಿ ಬಾಕಿ ಇದೆ ಎಂಬ ಉತ್ತರ ನೀಡುತ್ತಾರೆ ಎಂದು ರಾಜೇಶ್‌ ಕೃಷ್ಣಪ್ರಸಾದ್‌ ತಿಳಿಸಿದ್ದಾರೆ.

ಸಾತ್ವಿಕ್‌ ಅವರು 2017ರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಎಸೆಸೆಲ್ಸಿ ವ್ಯಾಸಂಗ ಮಾಡುತ್ತಿರುವಾಗ ಈ ಪರೀಕ್ಷೆ ಬರೆದಿದ್ದರು. ರಾಷ್ಟ್ರಪತಿ ಪುರಸ್ಕಾರ್‌ ಪರೀಕ್ಷೆ ಬರೆಯಬೇಕಾದರೆ ಬಹಳ ಶ್ರಮ ಪಡಬೇಕಿದ್ದು, 14 ಪ್ರಾಜೆಕ್ಟ್ಗಳನ್ನು ಮಾಡಬೇಕಾಗುತ್ತದೆ. ಜತೆಗೆ ಒಂದು ವಾರ ಕಾಲ ಬೆಂಗಳೂರಿನಲ್ಲಿ ಪರೀಕ್ಷೆ ನಡೆಯುತ್ತದೆ. ಒಟ್ಟು ಪ್ರಕ್ರಿಯೆಗೆ ಅವರು ತಿಂಗಳುಗಳ ಕಾಲ ಶಾಲೆಗೆ ರಜೆ ಮಾಡಬೇಕಾಗುತ್ತದೆ.

ಎಂಜಿನಿಯರಿಂಗ್‌, ಮೆಡಿಕಲ್‌ ಸೇರಿ ತಮ್ಮ ಉನ್ನತ ವ್ಯಾಸಂಗದ ವೇಳೆ ಮೀಸಲಾತಿ ಇರುತ್ತದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯುತ್ತಾರೆ. ಆದರೆ ಫಲಿತಾಂಶ ವರ್ಷಗಟ್ಟಲೆ ವಿಳಂಬವಾದರೆ ಪ್ರಯೋಜನ ಏನು ಎಂದು ರಾಜೇಶ್‌ ಕೃಷ್ಣಪ್ರಸಾದ್‌ ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.